Homeಮುಖಪುಟಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಹಾಗಾಗಿ ಬರುವಂತಹ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂಬುದನ್ನು ಶೀಘ್ರವೇ ಘೋಷಿಸುತ್ತೇನೆ ಎಂದಿದ್ದಾರೆ.

- Advertisement -
- Advertisement -

ನಾನು ಕರ್ನಾಟಕ ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷದವರೆ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಭಾನುವಾರ ನಡೆದ ಮುಸ್ಲಿಂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಶತ್ರುಗಳು ಕಾಂಗ್ರೆಸ್‌ನವರು ಇರಬಹುದು. ಅವರ ರಾಜಕೀಯ ಧರ್ಮ ಈ ಹಿಂದೆ ನನಗೆ ತೊಂದರೆ ಕೊಟ್ಟಿರಬಹುದು. ಆದರೆ ಇವತ್ತು ನಮ್ಮವರೆ ನನಗೆ ಕಿರುಕುಳ ಕೊಡುವ ಪರಿಸ್ಥಿತಿಯಲ್ಲಿದ್ದಾರೆ” ಎಂದಿದ್ದಾರೆ.

ಹಾಗಾಗಿ ಬರುವಂತಹ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂಬುದನ್ನು ಶೀಘ್ರವೇ ಘೋಷಿಸುತ್ತೇನೆ ಎಂದಿದ್ದಾರೆ. ನನ್ನ ಜೊತೆಯಲ್ಲಿ ಮುಸ್ಲಿಂ ಬಾಂಧವರೂ ಕೂಡ ಬರುತ್ತಾರೆ ಎಂಬ ನಂಬಿಕೆ ಇದೆ ಎಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ನವೆಂಬರ್ 06ರ ನಂತರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಬಳ್ಳಾರಿ ಜಿಲ್ಲೆಯಿಂದ ಹೊರಹೋಗುತ್ತಿದ್ದೇನೆ. ಹಾಗಂತ ಬೆಂಗಳೂರಿನಲ್ಲಿ ಕೂರುವುದಿಲ್ಲ. ಜನರ ನಡುವೆಯೇ ಇರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಈ ಹಿಂದೆ ಯಾವುದೋ ಒಂದು ಮಾತು ಆಡಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಆ ಮಾತು ಆಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ಅವರು ಆ ಮಾತಾಡಲು ಯಾರು ಪ್ರಚೋದನೆ ನೀಡಿದ್ದರು ಎಂಬುದನ್ನು ಶೀಘ್ರದಲ್ಲಿಯೇ ಬಹಿರಂಗ ಪಡಿಸುತ್ತೇನೆ ಎಂದು ಸಹ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ 2020ರ ಜನವರಿ 03 ರಂದು ಸೋಮಶೇಖರ ರೆಡ್ಡಿ ಕೋಮು ಪ್ರಚೋದಕ ಭಾಷಣ ಮಾಡಿದ್ದರು. “ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ” ಎಂದಿದ್ದರು.

“ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ. ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ” ಎಂದು ಭಾಷಣ ಮಾಡಿದ್ದರು.

ಸದ್ಯ ಜನಾರ್ದನ ರೆಡ್ಡಿ ಅಧಿಕೃತವಾಗಿ ವಾಪಸ್ ಬಿಜೆಪಿ ಪಕ್ಷ ಸೇರುವ ಯೋಚನೆಯಲ್ಲಿದ್ದಾರೆ. ಆದರೆ ಅವರ ಮೇಲಿನ ಭ್ರಷ್ಟಾಚಾರದ ಕಾರಣಕ್ಕೆ ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ದರಿಲ್ಲ. ಹಾಗಾಗಿ ಬಿಜೆಪಿ ಮತ್ತು ರೆಡ್ಡಿ ನಡುವೆ ಮನಸ್ತಾಪ ಶುರುವಾಗಿದೆ. ಇದು ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...