Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...