Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...