Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...