Homeಅಂಕಣಗಳು"ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ"

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

- Advertisement -
- Advertisement -

ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು ಭೇಟಿ ಮಾಡಲು ಓಡಿದರಂತಲ್ಲಾ. ಇದಪ್ಪ ರಾಜಕಾರಣ ಅಂದರೆ! ಈಗಾಗಲೇ ಪ್ರಿಂಟಾಗಿರುವ ಪಠ್ಯ ಎಲ್ಲಿಗೆ ತಲುಪಬೇಕೂ ಅಲ್ಲಿಗೆ ತಲುಪುವಂತೆ ಮಾಡಿದ ಮೇಲೆ ಚಕ್ರತೀರ್ಥ ಎಂಬುವನು ಮನೆಗೆ ಹೋದರೇನು ಇನ್ನೆಲ್ಲೋ ಹೋದರೇನು, ಅಂತೂ ತಮ್ಮ ಅಜೆಂಡಾ ಜಾರಿಯಾದಂತಾಯ್ತಲ್ಲಾ. ಅಷ್ಟಕ್ಕೂ ಆತನಿಗೆ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಲು ಈ ಜನ್ಮದಲ್ಲಿ ಸಾಧ್ಯವಿರಲಿಲ್ಲ. ಏಕೆಂದರೆ ಅಂತಹ ಯೋಗ್ಯತೆ ಪಡೆಯಬೇಕಾದರೆ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯ-ಚಿಂತನೆಗೆ ಮೌಲಿಕ ಕೊಡುಗೆ ಕೊಟ್ಟಿರಬೇಕು. ಶಿಕ್ಷಣ ತಜ್ಞನಾಗಿರಬೇಕು, ಪ್ರೊಫೆಸರ್‌ಗಿರಿಯಲ್ಲಿ ಪಳಗಿರಬೇಕು. ಯಾವುದಾದರೂ ವಿವಿಗೆ ವೈಸ್ ಚಾನ್ಸಲರಾಗುವ ಅರ್ಹತೆ ಪಡೆದಿರಬೇಕು. ಇಂತಹ ಯಾವ ಯೋಗ್ಯತೆಯೂ ಇಲ್ಲದೆ ಲೂಟಿ ಬಹದ್ದೂರನಾಗಿ ಹೆಸರು ಮಾಡಿದವನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷನಾಗುತ್ತಾನೆಂದರೆ ಅದಕ್ಕೆ ಇದೇ ಸಚಿವರು ಬರಬೇಕಾಯಿತ್ತಂತೆಲ್ಲಾ. ತನ್ನ ಸ್ವಜಾತಿ ಬಾಂಧವರಲ್ಲೇ ದೊಡ್ಡ ವಿದ್ವಾಂಸನನ್ನ ಹುಡುಕಿರಬೇಕಂತಲ್ಲಾ. ಅವನೇ ಈ ಚಕ್ರತೀರ್ಥನಂತಲ್ಲಾ, ಥೂತ್ತೇರಿ.

*****

ಬುದ್ಧಿ ಕಡಿಮೆಯಿದ್ದ ಮನುಷ್ಯ ಭಂಡಬಾಳಿನ ಮೊರೆ ಹೋಗುತ್ತಾನೆ. ಅದು ಈ ಬಿಜೆಪಿ ಜನರನ್ನು ನೋಡಿದ ಮೇಲೆ ನಾಡಿನ ಜನಕ್ಕೆ ಅರ್ಥವಾಗತೊಡಗಿದೆಯಂತಲ್ಲಾ. ಮುಖ್ಯವಾಗಿ ಶಿಕ್ಷಣ ಸಚಿವ ತಾನು ಮಾಡಿದ ಎಲ್ಲ ಕೃತ್ಯಗಳನ್ನ ಸಮರ್ಥಿಸಿಕೊಳ್ಳುತ್ತಾ ಹೊರಟಿರುವಾಗ ಅವರನ್ನ ಆ ಕೆಲಸ ಮಾಡಲು ಬಿಟ್ಟವರೂ ಕೂಡ ಇದೇ ದಾರಿ ಹಿಡಿದಿದ್ದಾರಲ್ಲಾ. ಇನ್ನ ವಿರೋಧ ಪಕ್ಷದ ನಾಯಕ ಆರೆಸ್ಸೆಸ್ ಟೀಕಿಸಿದರೆ ಯಾವ ಆರೆಸ್ಸೆಸಿಗಳು ಬಾಯಿಬಿಡದೆ ಬಿಜೆಪಿಯ ಸಿ.ಟಿ ರವಿ ಮತ್ತು ಈಶ್ವರಪ್ಪ ಉತ್ತರ ಕೊಡತೊಡಗಿದ್ದಾರೆ. ಹಾಗೆ ನೋಡಿದರೆ ಸಿ.ಟಿ ರವಿ ಪ್ರತಿನಿಧಿಸುವ ಜಿಲ್ಲೆಯಾದ ಚಿಕ್ಕಮಗಳೂರಿನ ಹಿರೇಕೊಡಿಗೆಯಲ್ಲಿ ವಿಶ್ವಮಾನವ ಸಂದೇಶ ಬೀರಿದ ಕವಿಯಾದ ಕುವೆಂಪು ಜನ್ಮತಾಳಿದವರು. ಇಂತಹ ಕುವೆಂಪುಗೆ ಅವಮಾನ ಮಾಡಿದವರ ವಿರುದ್ದ ಸಿ.ಟಿ ರವಿ ತುಟಿ ಬಿಚ್ಚಿಲ್ಲ.

ಇನ್ನ ಈಶ್ವರಪ್ಪ. ಉಡುಪಿಯ ಕನಕಗೋಪುರ ಕೆಡವಿದಾಗ ದೊಡ್ಡ ಆಕ್ರೋಶ ಬಂತು. ಆಗ ಪೇಜಾವರಸ್ವಾಮಿ ಅಲ್ಲಿದ್ದದ್ದು. ಅದು ಕನಕ ಗೋಪುರವಲ್ಲ ರಾಜಗೋಪುರ ಎಂಬ ಹೇಳಿಕೆಯನ್ನು ಈಶ್ವರಪ್ಪನಿಂದ ಕೊಡಿಸಿದರು. ಆಗ ಈಶ್ವರಪ್ಪ ಪೇಜಾವರರಿಗಿಂತ ಮುಂದೆ ಹೋಗಿ, ಅಲ್ಲಿ ಕನಕಗೋಪುರ ಇತ್ತು ಅಂದಾದರೆ ನಾನು ರಾಜಕಾರಣ ಬಿಟ್ಟು ಅಡಿಕೆ ಪ್ಯಾಕೆಟ್ ಮಾಡುತ್ತೇನೆ ಎಂದುಬಿಟ್ಟರಲ್ಲಾ. ಈಗ ಬಿಜೆಪಿ ಇದೇ ತರಹದ ಛಲವಾದಿ ನಾರಾಯಣಸ್ವಾಮಿಯನ್ನ ತಯಾರು ಮಾಡುತ್ತಿದೆಯಂತಲ್ಲಾ, ಥೂತ್ತೇರಿ.

*****

ಜನಸಾಮಾನ್ಯರ ಜಗಳಗಳು ಜಾತಿ ಆವರಣ ತಲಪುತ್ತವಂತೆ. ಹಾಗೆಯೇ ನೀನು ನಮ್ಮೂರಿನವನಲ್ಲೆಂಬ ದನಿಯೂ ಹೋರಾಡುತ್ತದೆ. ಹೀಗೆ ಮುಸ್ಲಿಮರು ಇಲ್ಲಿ ಉದ್ಭವಿಸಿದವರಲ್ಲಾ, ದಾಳಿ ಮಾಡಿಕೊಂಡು ಬಂದವರು ಎಂದು ಪುರೋಹಿತರು ಜನಗಳನ್ನ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುತ್ತಿರುವುದನ್ನು ನೋಡಲಾರದ ಸಿದ್ದರಾಮಯ್ಯ ಅಂತಿಮವಾಗಿ ಆರೆಸ್ಸೆಸ್ಸಿಗಳು ಇಲ್ಲಿಯವರಲ್ಲಾ ಮಧ್ಯ ಏಷ್ಯಾದಿಂದ ಬಂದವರು ಎಂದಕೂಡಲೇ ಎಲ್ಲರ ಕಿವಿಗಳು ನೆಟ್ಟಗಾಗಿವೆಯಂತಲ್ಲಾ. ಈ ಬಗ್ಗೆ ಸಿದ್ದರಾಮಯ್ಯನವರಿಗೇ ಫೋನ್ ಮಾಡಿ ಮಾತನಾಡಿಸಿದರೆ ಹೇಗೆ ಅನ್ನಿಸಿ, ಕಡೆಗೆ ಫೋನ್ ಮಾಡಲಾಗಿ, ರಿಂಗಾಯ್ತು. ರಿಂಗ್‌ಟೋನ್, ’ಕರಿಯ ಕಂಬಳಿ ಗದ್ದಿಗೆ ಮಾಡೀ ವೀರದೊಳ್ಳ
ತಂದಿರಿಸಿದರೋ……….’

“ಹಲೋ ಯಾರು”.

“ನಾನು ಸಾರ್ ಯಾಹೂ, ತಾವ್ಯಾರು ಸಾರ್”.

“ನಾನು ಸೋಷಲಿಸ್ಟ್ ಶಿವಣ್ಣ ಏನಾಗಬೇಕು”.

“ಸಾರಿ ಸಾರ್, ಸಿದ್ದರಾಮಯ್ಯನವರ ಜೊತೆ ಮಾತಾಡಬೇಕಾಗಿತ್ತು”.

“ಪತ್ರಕರ್ತರಾ, ಕೊಟ್ಟೆಯಿರಿ ಒಂದು ನಿಮಿಷ”.

“ಹಲೋ”.

“ನಮಸ್ಕಾರ ಸಾರ್. ನಾನು ಯಾಹೂ”.

“ಏನ್ರಿ ಯಾಹೂ, ಈ ಕಡೆ ಬರಲೇಯಿಲ್ಲ”.

“ನೀವೀಗ ಪವರಲಿಲ್ಲ, ಏನು ಮಾಡಕ್ಕೆ ಬರನ ಸಾರ್”.

“ಇಲ್ದಾಗ್ಲೆ ಬಂದ್ರೆ ವಳ್ಳೆದು, ಮಾತಾಡಬಹುದು ಬನ್ನಿ”.

“ಅಮ್ಯಾಲೆ ಬರ್‌ತಿನಿ, ಈಗೊಂದೆರಡು ಪ್ರಶ್ನೆಗೆ ಉತ್ತರ ಕೊಡಿ ಸಾ”.

“ಅದೇನು ಕೇಳಿ”.

“ಈ ಆರೆಸ್ಸೆಸಿನವರು ಇಲ್ಲಿಯವರಲ್ಲ, ಹೊರಗಿಂದ ಬಂದವುರು ಅಂದಿದ್ದಿರಲ್ಲಾ, ವಸಿ ವಿವರಸ್ತಿರಾ”.

“ಅದ್‌ಹಳೇ ವಿಷಯ ಕಂಡ್ರಿ. ನಮಿಗೆ ಮಿಡ್ಲಿಸ್ಕೂಲಲ್ಲೇ ಪಾಠ ಇತ್ತು. ಆರ್ಯರು ಆಕಡಿಂದ ಬಂದ್ರು, ಅವುರು ಚೆನ್ನಾಗಿ ಎತ್ತರಕ್ಕೆ ಕೆಂಪುಗಿದ್ರು ಬ್ಯಳ್ಳಗಿದ್ರು ನಾಗರಿಕರು ಅಂತ”.

“ನಾಗರಿಕರು ಅಂತ ಇತ್ತ”.

“ಊ”.

“ಅಂಗಾದ್ರೆ ಆರೆಸ್ಸೆಸಿಗರು, ಬಿಜೆಪಿಗಳು ಆರ್ಯರಲ್ಲ ಬುಡಿ”.

“ಆರ್ಯರೆ ಕಂಡ್ರಿ, ಆಗ ಪಠ್ಯಪುಸ್ತಕ ಬರಿಯೋರು ಅವುರೇ ಆಗಿದ್ರು. ಅದ್ಕೆ ನಾಗರಿಕರು ಅಂತ ಬರ್‌ಕಂಡವುರೆ”.

“ಅದೇನೋ ನಿಜ, ದೇಶದ್ರೋಹಿಗಳನ್ನ ದೇಶಭಕ್ತರು ಅಂತ ಬರಕಳದು. ಹುಟ್ಟು ಪುಕ್ಕಲಗಳನ್ನು ವೀರ ಉತ್ತರಕುಮಾರ ಅಂತ ಬರಕಳದ್ರಲ್ಲಿ ಅವುರು ನಿಸ್ಸೀಮರು”.

“ಸುಳ್ಳು ಹೇಳದ್ರಲ್ಲೂ ನಿಸ್ಸೀಮರು. ನನ್ನ ಮಾತಿಗೆ ಆರೆಸ್ಸೆಸಿನವುರು ಉಸರೆತ್ತಿಲ್ಲ. ಆ ಬಸವರಾಜ ನೀವು ದ್ರಾವಿಡ್ರ ಅಂತ ಕೇಳ್ಯವುನೆ”.

“ನಿಜ ಸಾರ್, ಮುಖ್ಯಮಂತ್ರಿ ದ್ರಾವಿಡರೊ ಆರ್ಯರೊ ಸಾರ್”.

“ಅವುನ್ಯಾವಾರ್ಯ, ದ್ರಾವಿಡ ಅವುನು. ಬಸವಣ್ಣ ಬರದ್ಕು ಮದ್ಲು ಅವುರಜ್ಜಾರಜ್ಜಾರಜ್ಜ ಯಾವು ಜಾತಿಯಾಗಿದ್ನೊ ಏನೊ, ಈಗಿವುನು ಸಾದರ ಲಿಂಗಾಯತ ಅಂತನೆ”.

“ನಿಜ ಸಾರ್, ಬಸವಣ್ಣ ಕರದೇಟಿಗೆ ಹತ್ರುಕೋದೋರ್‌ಯೆಲ್ಲ ದ್ರಾವಿಡರೇ ಸಾರ್, ನೋ ಡವುಟು”.

“ಈ ಆರ್ಯರು ಯಂಗೆ ಬಂದ್ರು ಅಂತ ವಸಿ ಹೇಳ್ತಿರಾ”.

“ಅದೇ ಕಂಡ್ರಿ, ಆಗ ಈಗಿನ ಪಾಕೀಸ್ತಾನದ ಬಾರ್ಡರಿಂದ ಮಧ್ಯ ಪ್ರಾಚ್ಯದವರಿಗೂ ದಾರಿನೆ ಇತ್ತು. ಅಲ್ಲಿದ್ದ ಜನ ಫಲವತ್ತಾದ ಜಾಗ ಹುಡುಕ್ತ ಕತ್ತೆ ದನ ಯೆಮ್ಮೆ ಜೊತೆ ಬಂದ್ರು. ಇಲ್ಲಿದ್ದ ಆದಿವಾಸಿ ದ್ರಾವಿಡರ್ನ ಹೆದರಿಸಿದ್ರು. ಅವುರ್ ಯೆಲ್ಲ ದಕ್ಷಿಣಕ್ಕೆ ಓಡಿ ಬಂದ್ರು. ಕೆಲುವುರು ಅಲ್ಲೇ ಉಳಕಂಡ್ರು”.

“ಗೊತ್ತಾಯ್ತು ಬುಡಿ ಸಾರ್, ಈ ಬಿಜೆಪಿಗಳು ಮದ್ಲು, ಉತ್ತರಭಾರತದಲ್ಲಿ ನೆಲೆಗೊಂಡು, ಆಮೇಲೆ ಈ ದಕ್ಷಿಣಕ್ಕೆ ಬಂದ್ರಲ್ಲ ಅಂಗೆ.”

“ಅದಕ್ಕಿಂತ್ಲೂ ಆರ್ಯರು ಯಾವಾಗ್ಲೂ ಫಲವತ್ತಾದ ಜಾಗ ಹುಡುಕ್ತಾರೆ. ಅಂಗೆ ನಮ್ಮ ದೇಶದ ಫಲವತ್ತಾದ ನ್ಯಲ ಹಿಡದ್ರು. ದ್ರಾವಿಡರ ಕೈಲಿ ಸೇವೆ ಮಾಡಿಸಿಗಂಡು ಜಾತಿ ಮಾಡಿದ್ರು. ನಮ್ಮ ತೇಜಸ್ವಿ ಹೇಳತಿದ್ರಲ್ಲ ಅಂಗೇ. ಇಡೀ ದೇಶನೆ ಬಾಳೆಎಲೆ ಮಾಡಿಕಂಡು ಉಂಡ್ರು. ನಾವು ಪಾಲು ಕೇಳಿದ ಮ್ಯಾಲೆ ಇಲ್ಲದ ಜಾತಿ ಜಗಳ ತಗದವೆ, ದ್ರಾವಿಡರನ್ನೆ ಆರೆಸ್ಸೆಸ್ ಮಾಡಿಕಂಡವೆ”.

“ಈಗೇನು ಮಾಡದು ಸಾರ್”.

“ಭಾಳ ಕಷ್ಟ. ನನ್ನ ವಿರುದ್ಧ ಈಶ್ವರಪ್ಪನ ಛೂ ಬುಟ್ಟವೆ. ನಮ್ಮ ಡಿ.ಕೆ ಶಿವಕುಮಾರನ ವಿರುದ್ಧ ಅಶ್ವತ್ಥ ನಾರಾಯಣ ಸಿ.ಟಿ ರವಿನ ಬುಟ್ಟವೆ. ಮಾದೇವಪ್ಪನ ವಿರುದ್ಧ ನಾರಾಯಣಸ್ವಾಮಿ, ಶ್ರೀನಿವಾಸ್ ಪ್ರಸಾದನ್ನ ಎತ್ತಿಕಟ್ಟವುರೆ. ನಮ್ಮೆದುರಿಗೆ ನಮ್ಮವುರೇ ನಿಂತವುರೆ. ನಿಜವಾದ ಶತ್ರುಗಳು ಗರ್ಭಗುಡಿಲಿ ಅವುತಗಂಡವುರೆ. ಜನಸಾಮಾನ್ಯರು ಹಣ್ಣು ಕಾಯಿ ತಗಂಡೋಗಿ ಮಡಗಿ ಪ್ರಸಾದ ಕೇಳ್ತ ಅವೆ. ಏನು ಮಾಡನಾ”.

“ಥೂತ್ತೇರಿ”.


ಇದನ್ನೂ ಓದಿ: ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...