Homeಮುಖಪುಟಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ ಮತ್ತು ರಾಷ್ಟ್ರದ ಅತಿದೊಡ್ಡ ಶಾಪ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿವೆ. ಬಿಜೆಪಿ ನನ್ನ ಬಂಧಿಸಿ ಜೈಲಿನಲ್ಲಿರಿಸಿದರೂ, ನಾನು ಜೈಲಿನಿಂದಲೂ ಟಿಎಂಸಿಯನ್ನು ಗೆಲ್ಲಿಸುವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಪ್ರತಿಪಾದಿಸಿದರು.

ಟಿಎಂಸಿ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುವ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ಯಾರ ಹೆಸರನ್ನು ತೆಗೆದುಕೊಳ್ಳದೇ, ’ಕೆಲವರು ಕೇಸರಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ: ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

’ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ. ಚುನಾವಣೆ ಬಂದಾಗಲೆಲ್ಲಾ ಅವರು ಟಿಎಂಸಿ ನಾಯಕರನ್ನು ಬೆದರಿಸಲು ಸ್ಟಿಂಗ್ ಆಪರೇಷನ್ ಮತ್ತು ಹಗರಣಗಳ ವಿಷಯಗಳನ್ನು ತರುತ್ತಾರೆ’ ಎಂದು ಆರೋಪಿಸಿದ್ದಾರೆ.

“ಆದರೆ, ನಾನು ಬಿಜೆಪಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಬಿಜೆಪಿ ಅಥವಾ ಅದರ ಏಜೆನ್ಸಿಗಳಿಗೆ ಹೆದರುವುದಿಲ್ಲ. ಅವರಿಗೆ ಧೈರ್ಯವಿದ್ದರೆ ಅವರು ನನ್ನನ್ನು ಬಂಧಿಸಿ ಕಂಬಿಗಳ ಹಿಂದೆ ಇಡಬಹುದು. ಆದರೆ, ನಾನು ಜೈಲಿನಿಂದ ಚುನಾವಣೆಯಲ್ಲಿ ಹೋರಾಡಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ಚುನಾವಣೆಯನ್ನು ಉಲ್ಲೇಖಿಸಿ ಬ್ಯಾನರ್ಜಿ, ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಸಹ ಕಂಬಿಗಳ ಹಿಂದೆ ಇರಿಸಲಾಗಿದೆ. ಆದರೆ ಅವರ ಪಕ್ಷ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ’ ಎಂದು ಹೇಳಿದರು. ಜೊತೆಗೆ ’ಬಿಜೆಪಿ ಬಿಹಾರ ಚುನಾವಣೆಯಲ್ಲಿ ಗೆದ್ದಿರುವುದು ಮೋಸದಿಂದಲೇ ಹೊರತು, ಜನಾದೇಶದಿಂದಲ್ಲ’ಎಂದು ಹೇಳಿದರು.

’ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾವುದೇ ಅವಕಾಶ ಅಥವಾ ಆಕಸ್ಮಿಕಗಳು ಇಲ್ಲ. ನಾವು ಮತ್ತೆ ದೊಡ್ಡ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

2011 ರಿಂದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳವನ್ನು ಆಳುತ್ತಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....