Homeಮುಖಪುಟಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ ಮತ್ತು ರಾಷ್ಟ್ರದ ಅತಿದೊಡ್ಡ ಶಾಪ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳು ಪರಸ್ಪರ ಕೆಸರೆರಚಾಟಕ್ಕೆ ಮುಂದಾಗಿವೆ. ಬಿಜೆಪಿ ನನ್ನ ಬಂಧಿಸಿ ಜೈಲಿನಲ್ಲಿರಿಸಿದರೂ, ನಾನು ಜೈಲಿನಿಂದಲೂ ಟಿಎಂಸಿಯನ್ನು ಗೆಲ್ಲಿಸುವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿ “ಸುಳ್ಳಿನ ಕಸ” ಮತ್ತು “ರಾಷ್ಟ್ರದ ಅತಿದೊಡ್ಡ ಶಾಪ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನನ್ನನ್ನು ಬಂಧಿಸಲು ಧೈರ್ಯಮಾಡಿದರು ಕೂಡ, ಜೈಲಿನಿಂದಲೇ ಮುಂದಿನ ಚುನಾವಣೆಯನ್ನು ಎದುರಿಸಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುತ್ತೇನೆ‘ ಎಂದು ಪ್ರತಿಪಾದಿಸಿದರು.

ಟಿಎಂಸಿ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುವ ಮೂಲಕ ಬಿಜೆಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಬ್ಯಾನರ್ಜಿ, ಯಾರ ಹೆಸರನ್ನು ತೆಗೆದುಕೊಳ್ಳದೇ, ’ಕೆಲವರು ಕೇಸರಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಭ್ರಮೆಯಲ್ಲಿದ್ದಾರೆ’ ಎಂದು ಹೇಳಿದರು.

ಇದನ್ನೂ ಓದಿ: ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

’ಬಿಜೆಪಿ ರಾಜಕೀಯ ಪಕ್ಷವಲ್ಲ ಅದೊಂದು ಸುಳ್ಳಿನ ಕಸ. ಚುನಾವಣೆ ಬಂದಾಗಲೆಲ್ಲಾ ಅವರು ಟಿಎಂಸಿ ನಾಯಕರನ್ನು ಬೆದರಿಸಲು ಸ್ಟಿಂಗ್ ಆಪರೇಷನ್ ಮತ್ತು ಹಗರಣಗಳ ವಿಷಯಗಳನ್ನು ತರುತ್ತಾರೆ’ ಎಂದು ಆರೋಪಿಸಿದ್ದಾರೆ.

“ಆದರೆ, ನಾನು ಬಿಜೆಪಿಯವರಿಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಬಿಜೆಪಿ ಅಥವಾ ಅದರ ಏಜೆನ್ಸಿಗಳಿಗೆ ಹೆದರುವುದಿಲ್ಲ. ಅವರಿಗೆ ಧೈರ್ಯವಿದ್ದರೆ ಅವರು ನನ್ನನ್ನು ಬಂಧಿಸಿ ಕಂಬಿಗಳ ಹಿಂದೆ ಇಡಬಹುದು. ಆದರೆ, ನಾನು ಜೈಲಿನಿಂದ ಚುನಾವಣೆಯಲ್ಲಿ ಹೋರಾಡಿ, ಟಿಎಂಸಿ ಪಕ್ಷವನ್ನು ಗೆಲ್ಲಿಸುವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ಚುನಾವಣೆಯನ್ನು ಉಲ್ಲೇಖಿಸಿ ಬ್ಯಾನರ್ಜಿ, ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ಸಹ ಕಂಬಿಗಳ ಹಿಂದೆ ಇರಿಸಲಾಗಿದೆ. ಆದರೆ ಅವರ ಪಕ್ಷ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ’ ಎಂದು ಹೇಳಿದರು. ಜೊತೆಗೆ ’ಬಿಜೆಪಿ ಬಿಹಾರ ಚುನಾವಣೆಯಲ್ಲಿ ಗೆದ್ದಿರುವುದು ಮೋಸದಿಂದಲೇ ಹೊರತು, ಜನಾದೇಶದಿಂದಲ್ಲ’ಎಂದು ಹೇಳಿದರು.

’ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಾವುದೇ ಅವಕಾಶ ಅಥವಾ ಆಕಸ್ಮಿಕಗಳು ಇಲ್ಲ. ನಾವು ಮತ್ತೆ ದೊಡ್ಡ ಜನಾದೇಶದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಸರ್ಕಾರ ತೃಣಮೂಲ ಕಾಂಗ್ರೆಸ್ ಆಡಳಿತವನ್ನು ಗೂಂಡಾ ರಾಜ್‌ಗೆ ಹೋಲಿಸಿದೆ. ರಾಜ್ಯದಲ್ಲಿರುವ ಪೊಲೀಸ್ ಪಡೆ ಗೂಂಡಾ ರಾಜ್ ಸರ್ಕಾರದ ವಿರುದ್ದ ಏನೂ ಮಾಡುವುದಿಲ್ಲ, ಭಾರತಿಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಪೊಲೀಸರು ಬೂಟು ನೆಕ್ಕುವಂತೆ ಮಾಡುತ್ತೇವೆ ಎಂದು ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

2011 ರಿಂದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳವನ್ನು ಆಳುತ್ತಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...