Homeಮುಖಪುಟಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

ಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

- Advertisement -
- Advertisement -

ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ತಾನು ಸೋತಿದ್ದುಏಕೆ ಎಂದು ಪದೇ ಪದೇ ಹೇಳುವ ಮೂಲಕ ತಾನೇ ಆ ಹುದ್ದೆಗೆ ಅರ್ಹ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.

ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ನಂತರ ಉಲ್ಟಾ ಹೊಡೆದಿದ್ದರು. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ದರಿಲ್ಲ. ಹಾಗಾಗಿ ದಿನೇ ದಿನೇ ಗೊಂದಲ ಹೆಚ್ಚಾಗಿದೆ.

ಇತ್ತೀಚೆಗೆ ವಿ.ಸೋಮಣ್ಣ ಬಹಿರಂಗವಾಗಿ ನಾನು ಆಕಾಂಕ್ಷಿ ಎಂದು ಘೋಷಿಸಿದ್ದರು. ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...