Homeಕರ್ನಾಟಕಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

- Advertisement -
- Advertisement -

• ಶೀಘ್ರದಲ್ಲೇ ಶಾಸಕರ ಸಭೆ ನಡೆಸಿ ಅರ್ಹರಿಗೆ ಸಾಗುವಳಿ ಚೀಟಿ
• ಜನವರಿ ತಿಂಗಳಲ್ಲಿ ಕನಿಷ್ಟ 5,000 ಜನರಿಗೆ ಸಾಗುವಳಿ ಚೀಟಿ
• ನಮೂನೆ 1-5 ಪೋಡಿ ದುರಸ್ಥಿ ಬೆನ್ನಿಗೆ 6-10 ಸರ್ವೇಗೆ ಒತ್ತು
• ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು ಜನವರಿ 10: ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು.

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು.

“ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್‌ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, “ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಕೋರ್ಟ್‌ ಕೇಸ್‌ ಮುಗಿಸಿದವರ ವಿರುದ್ಧ ಅಸಮಾಧಾನ

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲು ಸಮಸ್ಯೆ ಏನು ಎಂದು ತಹಶೀಲ್ದಾರರ ವಿರುದ್ಧ ಸಚಿವರು ಕಿಡಿಕಾರಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕಳೆದ ವರ್ಷ 10,750ಕ್ಕೂ ಅಧಿಕ ಪ್ರಕರಣಗಳನ್ನು ಬಾಕಿ ಉಳಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅಭಿಯಾನ ಮಾದರಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಆದರೆ, ಉಳಿದ ಪ್ರಕರಣಗಳ ವಿಲೇಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಕೆಲವರು ಮಾಡುತ್ತಿರುವ ಕೆಲಸದಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು” ಎಂದು ಅವರು ಅಭಿಪ್ರಾಯಪಟ್ಟರು.

ಮುಂದುವರೆದು, “ರಾಯಭಾಗ 9, ಹುಕ್ಕೇರಿ 20, ರಾಮದುರ್ಗ 6, ಬೀದರ್ 6, ಬಳ್ಳಾರಿ 4, ಸವದತ್ತಿ 4 ಹೊಳಲ್ಕೆರೆ 9, ಕಾಗವಾಡ 5, ಚನ್ನಗಿರಿ 5, ಕಡೂರು 8, ಹೊಸಕೋಟೆ 12, ಮಂಡ್ಯ 11, ಮಾಗಡಿ 18, ಕನಕಪುರ 14, ಹಾರೋಹಳ್ಳಿ 20, ರಾಮದುರ್ಗ 10, ಬೆಂಗಳೂರು ಪಶ್ಚಿಮ 10, ನೆಲಮಂಗಲ 8 ಸೇರಿದಂತೆ 20 ತಾಲೂಕುಗಳಲ್ಲಿ ವರ್ಷಕ್ಕಿಂತ ಅಧಿಕ ಸಮಯದ ಅಲ್ಪ ಪ್ರಮಾಣದ ಪ್ರಕರಣಗಳು ಬಕಿ ಉಳಿದಿವೆ. ಅಧಿಕಾರಿಗಳು ಶೀಘ್ರದಲ್ಲಿ ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ನ್ಯಾಯ ಕಲ್ಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್‌ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...