Homeಕರ್ನಾಟಕಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

- Advertisement -
- Advertisement -

• ಶೀಘ್ರದಲ್ಲೇ ಶಾಸಕರ ಸಭೆ ನಡೆಸಿ ಅರ್ಹರಿಗೆ ಸಾಗುವಳಿ ಚೀಟಿ
• ಜನವರಿ ತಿಂಗಳಲ್ಲಿ ಕನಿಷ್ಟ 5,000 ಜನರಿಗೆ ಸಾಗುವಳಿ ಚೀಟಿ
• ನಮೂನೆ 1-5 ಪೋಡಿ ದುರಸ್ಥಿ ಬೆನ್ನಿಗೆ 6-10 ಸರ್ವೇಗೆ ಒತ್ತು
• ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು ಜನವರಿ 10: ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು.

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು.

“ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್‌ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, “ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಕೋರ್ಟ್‌ ಕೇಸ್‌ ಮುಗಿಸಿದವರ ವಿರುದ್ಧ ಅಸಮಾಧಾನ

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲು ಸಮಸ್ಯೆ ಏನು ಎಂದು ತಹಶೀಲ್ದಾರರ ವಿರುದ್ಧ ಸಚಿವರು ಕಿಡಿಕಾರಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕಳೆದ ವರ್ಷ 10,750ಕ್ಕೂ ಅಧಿಕ ಪ್ರಕರಣಗಳನ್ನು ಬಾಕಿ ಉಳಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅಭಿಯಾನ ಮಾದರಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಆದರೆ, ಉಳಿದ ಪ್ರಕರಣಗಳ ವಿಲೇಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಕೆಲವರು ಮಾಡುತ್ತಿರುವ ಕೆಲಸದಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು” ಎಂದು ಅವರು ಅಭಿಪ್ರಾಯಪಟ್ಟರು.

ಮುಂದುವರೆದು, “ರಾಯಭಾಗ 9, ಹುಕ್ಕೇರಿ 20, ರಾಮದುರ್ಗ 6, ಬೀದರ್ 6, ಬಳ್ಳಾರಿ 4, ಸವದತ್ತಿ 4 ಹೊಳಲ್ಕೆರೆ 9, ಕಾಗವಾಡ 5, ಚನ್ನಗಿರಿ 5, ಕಡೂರು 8, ಹೊಸಕೋಟೆ 12, ಮಂಡ್ಯ 11, ಮಾಗಡಿ 18, ಕನಕಪುರ 14, ಹಾರೋಹಳ್ಳಿ 20, ರಾಮದುರ್ಗ 10, ಬೆಂಗಳೂರು ಪಶ್ಚಿಮ 10, ನೆಲಮಂಗಲ 8 ಸೇರಿದಂತೆ 20 ತಾಲೂಕುಗಳಲ್ಲಿ ವರ್ಷಕ್ಕಿಂತ ಅಧಿಕ ಸಮಯದ ಅಲ್ಪ ಪ್ರಮಾಣದ ಪ್ರಕರಣಗಳು ಬಕಿ ಉಳಿದಿವೆ. ಅಧಿಕಾರಿಗಳು ಶೀಘ್ರದಲ್ಲಿ ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ನ್ಯಾಯ ಕಲ್ಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್‌ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...