Homeಕರ್ನಾಟಕಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

- Advertisement -
- Advertisement -

• ಶೀಘ್ರದಲ್ಲೇ ಶಾಸಕರ ಸಭೆ ನಡೆಸಿ ಅರ್ಹರಿಗೆ ಸಾಗುವಳಿ ಚೀಟಿ
• ಜನವರಿ ತಿಂಗಳಲ್ಲಿ ಕನಿಷ್ಟ 5,000 ಜನರಿಗೆ ಸಾಗುವಳಿ ಚೀಟಿ
• ನಮೂನೆ 1-5 ಪೋಡಿ ದುರಸ್ಥಿ ಬೆನ್ನಿಗೆ 6-10 ಸರ್ವೇಗೆ ಒತ್ತು
• ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು ಜನವರಿ 10: ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು.

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು.

“ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್‌ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, “ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಕೋರ್ಟ್‌ ಕೇಸ್‌ ಮುಗಿಸಿದವರ ವಿರುದ್ಧ ಅಸಮಾಧಾನ

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲು ಸಮಸ್ಯೆ ಏನು ಎಂದು ತಹಶೀಲ್ದಾರರ ವಿರುದ್ಧ ಸಚಿವರು ಕಿಡಿಕಾರಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕಳೆದ ವರ್ಷ 10,750ಕ್ಕೂ ಅಧಿಕ ಪ್ರಕರಣಗಳನ್ನು ಬಾಕಿ ಉಳಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅಭಿಯಾನ ಮಾದರಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಆದರೆ, ಉಳಿದ ಪ್ರಕರಣಗಳ ವಿಲೇಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಕೆಲವರು ಮಾಡುತ್ತಿರುವ ಕೆಲಸದಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು” ಎಂದು ಅವರು ಅಭಿಪ್ರಾಯಪಟ್ಟರು.

ಮುಂದುವರೆದು, “ರಾಯಭಾಗ 9, ಹುಕ್ಕೇರಿ 20, ರಾಮದುರ್ಗ 6, ಬೀದರ್ 6, ಬಳ್ಳಾರಿ 4, ಸವದತ್ತಿ 4 ಹೊಳಲ್ಕೆರೆ 9, ಕಾಗವಾಡ 5, ಚನ್ನಗಿರಿ 5, ಕಡೂರು 8, ಹೊಸಕೋಟೆ 12, ಮಂಡ್ಯ 11, ಮಾಗಡಿ 18, ಕನಕಪುರ 14, ಹಾರೋಹಳ್ಳಿ 20, ರಾಮದುರ್ಗ 10, ಬೆಂಗಳೂರು ಪಶ್ಚಿಮ 10, ನೆಲಮಂಗಲ 8 ಸೇರಿದಂತೆ 20 ತಾಲೂಕುಗಳಲ್ಲಿ ವರ್ಷಕ್ಕಿಂತ ಅಧಿಕ ಸಮಯದ ಅಲ್ಪ ಪ್ರಮಾಣದ ಪ್ರಕರಣಗಳು ಬಕಿ ಉಳಿದಿವೆ. ಅಧಿಕಾರಿಗಳು ಶೀಘ್ರದಲ್ಲಿ ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ನ್ಯಾಯ ಕಲ್ಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್‌ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...