Homeಕರ್ನಾಟಕನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ...

- Advertisement -
- Advertisement -

“ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌…

“ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ”

ಇದನ್ನೂ ಓದಿ: ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

“ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ”

ಇದನ್ನೂ ಓದಿ: ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ”

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

“ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ”

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

“ಬ್ರಿಟನ್ ನಿಂದ ರಾಜ್ಯಕ್ಕೆ ಬಂದವರನ್ನು ವಿಮಾನ ನಿಲ್ದಾಣದಲ್ಲಿ ಸೂಕ್ತ ಪರೀಕ್ಷೆಗೆ ಒಳಪಡಿಸದಿರುವುದು ದೊಡ್ಡ ತಪ್ಪು. ಈಗ ಬ್ರಿಟನ್ ನಿಂದ ಬಂದವರು ತಲೆಮರೆಸಿಕೊಂಡಿದ್ದಾರೆ, ಪ್ರಯಾಣಿಕರ ವಿಳಾಸ ಸಿಗ್ತಿಲ್ಲ ಅಂದರೆ ಅದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತೆ. ಸರ್ಕಾರ ಕಳೆದ ಬಾರಿ ಮಾಡಿದ್ದ ತಪ್ಪನ್ನೆ ಮತ್ತೆ ಮಾಡುತ್ತಿದೆ”


ಇದನ್ನೂ ಓದಿ: ಮೆಹಮೂದ್ ಪ್ರಾಚಾ ಪರ ನಿಲ್ಲಲು ವಕೀಲ ಸಂಘಕ್ಕೆ ಪತ್ರ ಬರೆದ ವಕೀಲ ಅನೀಸ್ ಪಾಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...