Homeಮುಖಪುಟ‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಇಂದು ಸಂಜಯ್ ರಾವುತ್ ಅವರ ನಿವಾಸವನ್ನು ತಲುಪಿದೆ. “ಕೇಂದ್ರೀಯ ಸಂಸ್ಥೆಯ ತನಿಖೆಯು ನಕಲಿ ಸಾಕ್ಷ್ಯ ಆಧರಿಸಿದೆ” ಎಂದು ಶಿವಸೇನೆ ನಾಯಕ ರಾವುತ್‌ ಟ್ವೀಟ್ ಮಾಡಿದ್ದಾರೆ.

ಸಂಜಯ್‌ ರಾವುತ್‌ ಅವರಿಗೆ ಜುಲೈ 20 ಮತ್ತು ಜುಲೈ 27 ರಂದು ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಇ.ಡಿ. ಮುಂದೆ ಹಾಜರಾಗದ ಕಾರಣ, ಇ.ಡಿ. ತನಿಖಾಧಿಕಾರಿಗಳು ಇಂದು ರಾವುತ್‌ ಮನೆಗೆ ತಲುಪಿದ್ದಾರೆ. ಮುಂಬೈನಲ್ಲಿ ಚಾಲ್‌ (ವಠಾರ) ಪುನರಾಭಿವೃದ್ಧಿಗೆ ಸಂಬಂಧಿಸಿದಂತೆ ಸಂಜಯ್‌ ಅವರನ್ನು ಪ್ರಶ್ನಿಸಲು ಅಧಿಕಾರಿಗಳು ಆಗಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ರಾವುತ್ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದ್ವೇಷದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ.

“ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ. ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಾಮಾಣ ಮಾಡಿ ಇದನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೋರಾಡಲು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಅವರು ಇಂದು ಬೆಳಿಗ್ಗೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. “ನಕಲಿ ಕ್ರಮವಿದು. ಸುಳ್ಳು ಸಾಕ್ಷ್ಯಗಳಿವು. ನಾನು ಶಿವಸೇನೆಯನ್ನು ಬಿಡುವುದಿಲ್ಲ. ಸತ್ತರೂ ನಾನು ಶರಣಾಗುವುದಿಲ್ಲ. ಜೈ ಮಹಾರಾಷ್ಟ್ರ” ಎಂದು ರಾವುತ್‌ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಾಮ್ ಕದಂ ಅವರು, “ಶಿವಸೇನಾ ನಾಯಕ ಏಕೆ ಸಮನ್ಸ್‌ಗೆ ಉತ್ತರ ನೀಡಿಲ್ಲ? ರಾವುತ್‌ ಅವರು ಅಮಾಯಕರಾಗಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಏಕೆ ಹೆದರುತ್ತಾರೆ? ಅವರು ಪತ್ರಿಕಾಗೋಷ್ಠಿಗಳನ್ನು ನಡೆಸಲು ಸಮಯ ಹೊಂದಿದ್ದಾರೆ. ಆದರೆ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಕಚೇರಿಗೆ ಭೇಟಿ ನೀಡಲು ಸಮಯ ಹೊಂದಿಲ್ಲ” ಎಂದು ಟೀಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 1 ರಂದು ರಾವುತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಜುಲೈ 20 ರಂದು ಮತ್ತೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಯಿತು. ಆದರೆ ಸಂಸತ್‌ ಅಧಿವೇಶನದ ಕಾರಣ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಹಾಜರಾಗುವಂತೆ ತಿಳಿಸಲಾಯಿತು. ಆದರೆ ಅವರು ಹಾಜರಾಗಿರಲಿಲ್ಲ.

ಇದನ್ನೂ ಓದಿರಿ: ಕೇಶವಕೃಪಾದಲ್ಲಿ ಸಿದ್ಧವಾಯಿತೇ ಬಿಬಿಎಂಪಿ ವಾರ್ಡ್ ವಿಂಗಡಣೆಯ ವರದಿ?

ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿ, ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಿದ ಏಕನಾಥ್ ಶಿಂಧೆಯವರ ಬಂಡಾಯದ ನಂತರ ಶಿವಸೇನೆಯ ಬಿಕ್ಕಟ್ಟನ್ನು ಶಮನ ಮಾಡುವಲ್ಲಿ ಸಂಜಯ್‌ ನಿರತರಾಗಿದ್ದಾರೆ. ಉದ್ಧವ್ ಠಾಕ್ರೆಯವರ ಬೆಂಬಲಕ್ಕೆ ರಾವುತ್ ನಿಂತಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ರಾಜಕೀಯ ನಾಟಕದ ನಡುವೆಯೇ ಜೂನ್ 28ರಂದು ಅವರಿಗೆ ಸಮನ್ಸ್ ನೀಡಿದಾಗ, “ಇಡಿ ನನ್ನನ್ನು ಕರೆಸಿದೆ ಎಂದು ನನಗೆ ಈಗಷ್ಟೇ ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಬಾಳಾಸಾಹೇಬರ ಶಿವಸೈನಿಕರು ದೊಡ್ಡ ಕದನವನ್ನೇ ನಡೆಸುತ್ತಿದ್ದಾರೆ. ಇದು ನನ್ನನ್ನು ತಡೆಯುವ ಸಂಚು. ನೀವು ನನ್ನ ತಲೆ ಕಡಿದರೂ, ನಾನು ಗುವಾಹಟಿ ಮಾರ್ಗವನ್ನು ಹಿಡಿಯುವುದಿಲ್ಲ. ನನ್ನನ್ನು ಬಂಧಿಸಿ! ಜೈ ಹಿಂದ್!” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...