Homeಮುಖಪುಟ‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

‘ಸತ್ತರೂ ನಾನು ಶರಣಾಗುವುದಿಲ್ಲ’: ಇ.ಡಿ. ದಾಳಿ ಬಳಿಕ ಶಿವಸೇನಾ ನಾಯಕ ಸಂಜಯ್‌ ರಾವತ್‌ ಪ್ರತಿಕ್ರಿಯೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಇಂದು ಸಂಜಯ್ ರಾವುತ್ ಅವರ ನಿವಾಸವನ್ನು ತಲುಪಿದೆ. “ಕೇಂದ್ರೀಯ ಸಂಸ್ಥೆಯ ತನಿಖೆಯು ನಕಲಿ ಸಾಕ್ಷ್ಯ ಆಧರಿಸಿದೆ” ಎಂದು ಶಿವಸೇನೆ ನಾಯಕ ರಾವುತ್‌ ಟ್ವೀಟ್ ಮಾಡಿದ್ದಾರೆ.

ಸಂಜಯ್‌ ರಾವುತ್‌ ಅವರಿಗೆ ಜುಲೈ 20 ಮತ್ತು ಜುಲೈ 27 ರಂದು ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಇ.ಡಿ. ಮುಂದೆ ಹಾಜರಾಗದ ಕಾರಣ, ಇ.ಡಿ. ತನಿಖಾಧಿಕಾರಿಗಳು ಇಂದು ರಾವುತ್‌ ಮನೆಗೆ ತಲುಪಿದ್ದಾರೆ. ಮುಂಬೈನಲ್ಲಿ ಚಾಲ್‌ (ವಠಾರ) ಪುನರಾಭಿವೃದ್ಧಿಗೆ ಸಂಬಂಧಿಸಿದಂತೆ ಸಂಜಯ್‌ ಅವರನ್ನು ಪ್ರಶ್ನಿಸಲು ಅಧಿಕಾರಿಗಳು ಆಗಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ರಾವುತ್ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ದ್ವೇಷದಿಂದ ನನ್ನನ್ನು ಟಾರ್ಗೆಟ್ ಮಾಡಲಾಗಿದೆ’ ಎಂದು ಆರೋಪಿಸಿದ್ದಾರೆ.

“ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ. ಶಿವಸೇನೆ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಾಮಾಣ ಮಾಡಿ ಇದನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೋರಾಡಲು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಅವರು ಇಂದು ಬೆಳಿಗ್ಗೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. “ನಕಲಿ ಕ್ರಮವಿದು. ಸುಳ್ಳು ಸಾಕ್ಷ್ಯಗಳಿವು. ನಾನು ಶಿವಸೇನೆಯನ್ನು ಬಿಡುವುದಿಲ್ಲ. ಸತ್ತರೂ ನಾನು ಶರಣಾಗುವುದಿಲ್ಲ. ಜೈ ಮಹಾರಾಷ್ಟ್ರ” ಎಂದು ರಾವುತ್‌ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಾಮ್ ಕದಂ ಅವರು, “ಶಿವಸೇನಾ ನಾಯಕ ಏಕೆ ಸಮನ್ಸ್‌ಗೆ ಉತ್ತರ ನೀಡಿಲ್ಲ? ರಾವುತ್‌ ಅವರು ಅಮಾಯಕರಾಗಿದ್ದರೆ ಜಾರಿ ನಿರ್ದೇಶನಾಲಯಕ್ಕೆ ಏಕೆ ಹೆದರುತ್ತಾರೆ? ಅವರು ಪತ್ರಿಕಾಗೋಷ್ಠಿಗಳನ್ನು ನಡೆಸಲು ಸಮಯ ಹೊಂದಿದ್ದಾರೆ. ಆದರೆ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಕಚೇರಿಗೆ ಭೇಟಿ ನೀಡಲು ಸಮಯ ಹೊಂದಿಲ್ಲ” ಎಂದು ಟೀಕಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 1 ರಂದು ರಾವುತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಜುಲೈ 20 ರಂದು ಮತ್ತೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಯಿತು. ಆದರೆ ಸಂಸತ್‌ ಅಧಿವೇಶನದ ಕಾರಣ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದರು. ಜುಲೈ 27 ರಂದು ಹಾಜರಾಗುವಂತೆ ತಿಳಿಸಲಾಯಿತು. ಆದರೆ ಅವರು ಹಾಜರಾಗಿರಲಿಲ್ಲ.

ಇದನ್ನೂ ಓದಿರಿ: ಕೇಶವಕೃಪಾದಲ್ಲಿ ಸಿದ್ಧವಾಯಿತೇ ಬಿಬಿಎಂಪಿ ವಾರ್ಡ್ ವಿಂಗಡಣೆಯ ವರದಿ?

ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿ, ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಿದ ಏಕನಾಥ್ ಶಿಂಧೆಯವರ ಬಂಡಾಯದ ನಂತರ ಶಿವಸೇನೆಯ ಬಿಕ್ಕಟ್ಟನ್ನು ಶಮನ ಮಾಡುವಲ್ಲಿ ಸಂಜಯ್‌ ನಿರತರಾಗಿದ್ದಾರೆ. ಉದ್ಧವ್ ಠಾಕ್ರೆಯವರ ಬೆಂಬಲಕ್ಕೆ ರಾವುತ್ ನಿಂತಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ರಾಜಕೀಯ ನಾಟಕದ ನಡುವೆಯೇ ಜೂನ್ 28ರಂದು ಅವರಿಗೆ ಸಮನ್ಸ್ ನೀಡಿದಾಗ, “ಇಡಿ ನನ್ನನ್ನು ಕರೆಸಿದೆ ಎಂದು ನನಗೆ ಈಗಷ್ಟೇ ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಬಾಳಾಸಾಹೇಬರ ಶಿವಸೈನಿಕರು ದೊಡ್ಡ ಕದನವನ್ನೇ ನಡೆಸುತ್ತಿದ್ದಾರೆ. ಇದು ನನ್ನನ್ನು ತಡೆಯುವ ಸಂಚು. ನೀವು ನನ್ನ ತಲೆ ಕಡಿದರೂ, ನಾನು ಗುವಾಹಟಿ ಮಾರ್ಗವನ್ನು ಹಿಡಿಯುವುದಿಲ್ಲ. ನನ್ನನ್ನು ಬಂಧಿಸಿ! ಜೈ ಹಿಂದ್!” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...