Homeಮುಖಪುಟಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

- Advertisement -
- Advertisement -

ಸುಪ್ರೀಂ ಕೋರ್ಟ್ ಸೂಚನೆಯಂತೆ ಚುನಾವಣಾ ಆಯೋಗಕ್ಕೆ ‘ಎಲೆಕ್ಟೊರಲ್ ಬಾಂಡಿನ’ ಲೆಕ್ಕ ಸಲ್ಲಿಸಲು ಮೂರು ತಿಂಗಳು ಸಮಾಯವಾಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಜನಪ್ರಿಯ ನಟ ಕಿಶೋರ್, ‘ಚುನಾವಣಾ ಬಾಂಡ್ ಹಗರಣದ ಕಿಂಗ್ ಪಿನ್ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು’ ಎಂದು ಹೇಳಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಸ್‌ಬಿಐ ನಡೆಯನ್ನು ‘ನಾಚಿಕೆಗೇಡು’ ಎಂದು ಕರೆದಿದ್ದಾರೆ. ;ನಂಬಿದರೆ ನಂಬಿ ಬಿಟ್ಟರೆ ಬಿಡಿ.. ಭಿಕ್ಷುಕರೂ ಡಿಜಿಟಲ್ ಬ್ಯಾಂಕಿಂಗ್ ಮಾಡುವ ಭಾರತದಲ್ಲಿ, ದೇಶದ ಅತಿ ದೊಡ್ಡಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಅಸಂವಿಧಾನಿಕ ಹಫ್ತಾ ವಸೂಲಿ ಹಗರಣ ಎಲೆಕ್ಟೊರಲ್ ಬಾಂಡಿನ ಲೆಕ್ಕವನ್ನು ಕೈಯಲ್ಲಿ ಬರೆದಿಟ್ಟಿದೆಯಂತೆ.. ಎಷ್ಟು ಹಾಸ್ಯಾಸ್ಪದ.. ಹಾಗಾಗಿ 22 ಸಾವಿರ ಎಂಟ್ರಿ ವಿವರ ಕೊಡೋಕೆ ಮೂರು ತಿಂಗಳು ಬೇಕಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ

‘ಸದಾ ಸುಳ್ಳು ಬೊಗಳುವ ರಾಜನ ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ.. ಇವರೆಲ್ಲ ಸೇರಿ ಯಾರ ಕಿವಿಯ ಮೇಲೆ ಹೂವಿಡಲು ಪ್ರಯತ್ನಿಸುತ್ತಿದ್ದಾರೆ? ಚಿಕ್ಕ ಮಕ್ಕಳೂ ಹೇಳಬಲ್ಲರು ಇದರ ಹಿಂದಿನ ಕೈವಾಡ ಯಾರದೆಂದು.. ಬರೀ ಸುಳ್ಳೇ ಬೊಗಳಿಯೂ ಧರ್ಮಾಂಧತೆಯ ಮಂಕುಬೂದಿಯೆರಚಿ ಯಾಮಾರಿಸುವ ಕಲೆ ಕರಗತಗೊಳಿಸಿರೊಂಡ ಹಗರಣದ ಕಿಂಗ್ ಪಿನ್, ಅತೀ ಭ್ರಷ್ಟ ಖೈದಿ ನಂ.56 ಇಲ್ಲೂ ತಪ್ಪಿಸಿಕೊಂಡರೆ, ಈ ಮೂರ್ಖಾತಿರೇಕಕ್ಕೆ ದೇಶವನ್ನು, ಪ್ರಜಾಪ್ರಭುತ್ವವನ್ನು ಬಲಿಕೊಟ್ಟು ಸುಮ್ಮನೇ ಒಮ್ಮೆ ಕಣ್ಣುಮುಚ್ಚಿ ಕೂಗಿಬಿಡಿ… ‘ಅವನಿ’ದ್ದರೆ ಇದೂ ಸಾಧ್ಯವೆಂದು.. (ಸಬ್ ಕುಚ್ ಮುಮ್ಕಿನ್ ಹೈ)’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಐ ನಡೆಗೆ ಹಲವರ ವಿರೋಧ:

ಎಸ್‌ಬಿಐ ನಡೆಯ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...