Homeಮುಖಪುಟಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

- Advertisement -
- Advertisement -

ಸುಪ್ರೀಂ ಕೋರ್ಟ್ ಸೂಚನೆಯಂತೆ ಚುನಾವಣಾ ಆಯೋಗಕ್ಕೆ ‘ಎಲೆಕ್ಟೊರಲ್ ಬಾಂಡಿನ’ ಲೆಕ್ಕ ಸಲ್ಲಿಸಲು ಮೂರು ತಿಂಗಳು ಸಮಾಯವಾಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಜನಪ್ರಿಯ ನಟ ಕಿಶೋರ್, ‘ಚುನಾವಣಾ ಬಾಂಡ್ ಹಗರಣದ ಕಿಂಗ್ ಪಿನ್ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು’ ಎಂದು ಹೇಳಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಸ್‌ಬಿಐ ನಡೆಯನ್ನು ‘ನಾಚಿಕೆಗೇಡು’ ಎಂದು ಕರೆದಿದ್ದಾರೆ. ;ನಂಬಿದರೆ ನಂಬಿ ಬಿಟ್ಟರೆ ಬಿಡಿ.. ಭಿಕ್ಷುಕರೂ ಡಿಜಿಟಲ್ ಬ್ಯಾಂಕಿಂಗ್ ಮಾಡುವ ಭಾರತದಲ್ಲಿ, ದೇಶದ ಅತಿ ದೊಡ್ಡಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಅಸಂವಿಧಾನಿಕ ಹಫ್ತಾ ವಸೂಲಿ ಹಗರಣ ಎಲೆಕ್ಟೊರಲ್ ಬಾಂಡಿನ ಲೆಕ್ಕವನ್ನು ಕೈಯಲ್ಲಿ ಬರೆದಿಟ್ಟಿದೆಯಂತೆ.. ಎಷ್ಟು ಹಾಸ್ಯಾಸ್ಪದ.. ಹಾಗಾಗಿ 22 ಸಾವಿರ ಎಂಟ್ರಿ ವಿವರ ಕೊಡೋಕೆ ಮೂರು ತಿಂಗಳು ಬೇಕಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ

‘ಸದಾ ಸುಳ್ಳು ಬೊಗಳುವ ರಾಜನ ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ.. ಇವರೆಲ್ಲ ಸೇರಿ ಯಾರ ಕಿವಿಯ ಮೇಲೆ ಹೂವಿಡಲು ಪ್ರಯತ್ನಿಸುತ್ತಿದ್ದಾರೆ? ಚಿಕ್ಕ ಮಕ್ಕಳೂ ಹೇಳಬಲ್ಲರು ಇದರ ಹಿಂದಿನ ಕೈವಾಡ ಯಾರದೆಂದು.. ಬರೀ ಸುಳ್ಳೇ ಬೊಗಳಿಯೂ ಧರ್ಮಾಂಧತೆಯ ಮಂಕುಬೂದಿಯೆರಚಿ ಯಾಮಾರಿಸುವ ಕಲೆ ಕರಗತಗೊಳಿಸಿರೊಂಡ ಹಗರಣದ ಕಿಂಗ್ ಪಿನ್, ಅತೀ ಭ್ರಷ್ಟ ಖೈದಿ ನಂ.56 ಇಲ್ಲೂ ತಪ್ಪಿಸಿಕೊಂಡರೆ, ಈ ಮೂರ್ಖಾತಿರೇಕಕ್ಕೆ ದೇಶವನ್ನು, ಪ್ರಜಾಪ್ರಭುತ್ವವನ್ನು ಬಲಿಕೊಟ್ಟು ಸುಮ್ಮನೇ ಒಮ್ಮೆ ಕಣ್ಣುಮುಚ್ಚಿ ಕೂಗಿಬಿಡಿ… ‘ಅವನಿ’ದ್ದರೆ ಇದೂ ಸಾಧ್ಯವೆಂದು.. (ಸಬ್ ಕುಚ್ ಮುಮ್ಕಿನ್ ಹೈ)’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಐ ನಡೆಗೆ ಹಲವರ ವಿರೋಧ:

ಎಸ್‌ಬಿಐ ನಡೆಯ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...