Homeಮುಖಪುಟಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

- Advertisement -
- Advertisement -

ಸುಪ್ರೀಂ ಕೋರ್ಟ್ ಸೂಚನೆಯಂತೆ ಚುನಾವಣಾ ಆಯೋಗಕ್ಕೆ ‘ಎಲೆಕ್ಟೊರಲ್ ಬಾಂಡಿನ’ ಲೆಕ್ಕ ಸಲ್ಲಿಸಲು ಮೂರು ತಿಂಗಳು ಸಮಾಯವಾಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಜನಪ್ರಿಯ ನಟ ಕಿಶೋರ್, ‘ಚುನಾವಣಾ ಬಾಂಡ್ ಹಗರಣದ ಕಿಂಗ್ ಪಿನ್ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು’ ಎಂದು ಹೇಳಿದ್ದಾರೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಸ್‌ಬಿಐ ನಡೆಯನ್ನು ‘ನಾಚಿಕೆಗೇಡು’ ಎಂದು ಕರೆದಿದ್ದಾರೆ. ;ನಂಬಿದರೆ ನಂಬಿ ಬಿಟ್ಟರೆ ಬಿಡಿ.. ಭಿಕ್ಷುಕರೂ ಡಿಜಿಟಲ್ ಬ್ಯಾಂಕಿಂಗ್ ಮಾಡುವ ಭಾರತದಲ್ಲಿ, ದೇಶದ ಅತಿ ದೊಡ್ಡಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಅಸಂವಿಧಾನಿಕ ಹಫ್ತಾ ವಸೂಲಿ ಹಗರಣ ಎಲೆಕ್ಟೊರಲ್ ಬಾಂಡಿನ ಲೆಕ್ಕವನ್ನು ಕೈಯಲ್ಲಿ ಬರೆದಿಟ್ಟಿದೆಯಂತೆ.. ಎಷ್ಟು ಹಾಸ್ಯಾಸ್ಪದ.. ಹಾಗಾಗಿ 22 ಸಾವಿರ ಎಂಟ್ರಿ ವಿವರ ಕೊಡೋಕೆ ಮೂರು ತಿಂಗಳು ಬೇಕಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ

‘ಸದಾ ಸುಳ್ಳು ಬೊಗಳುವ ರಾಜನ ಸುಳ್ಳು ಹೇಳಲೂ ಬಾರದ ದಡ್ಡ ಗೂಂಡಾಪಡೆ.. ಇವರೆಲ್ಲ ಸೇರಿ ಯಾರ ಕಿವಿಯ ಮೇಲೆ ಹೂವಿಡಲು ಪ್ರಯತ್ನಿಸುತ್ತಿದ್ದಾರೆ? ಚಿಕ್ಕ ಮಕ್ಕಳೂ ಹೇಳಬಲ್ಲರು ಇದರ ಹಿಂದಿನ ಕೈವಾಡ ಯಾರದೆಂದು.. ಬರೀ ಸುಳ್ಳೇ ಬೊಗಳಿಯೂ ಧರ್ಮಾಂಧತೆಯ ಮಂಕುಬೂದಿಯೆರಚಿ ಯಾಮಾರಿಸುವ ಕಲೆ ಕರಗತಗೊಳಿಸಿರೊಂಡ ಹಗರಣದ ಕಿಂಗ್ ಪಿನ್, ಅತೀ ಭ್ರಷ್ಟ ಖೈದಿ ನಂ.56 ಇಲ್ಲೂ ತಪ್ಪಿಸಿಕೊಂಡರೆ, ಈ ಮೂರ್ಖಾತಿರೇಕಕ್ಕೆ ದೇಶವನ್ನು, ಪ್ರಜಾಪ್ರಭುತ್ವವನ್ನು ಬಲಿಕೊಟ್ಟು ಸುಮ್ಮನೇ ಒಮ್ಮೆ ಕಣ್ಣುಮುಚ್ಚಿ ಕೂಗಿಬಿಡಿ… ‘ಅವನಿ’ದ್ದರೆ ಇದೂ ಸಾಧ್ಯವೆಂದು.. (ಸಬ್ ಕುಚ್ ಮುಮ್ಕಿನ್ ಹೈ)’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಐ ನಡೆಗೆ ಹಲವರ ವಿರೋಧ:

ಎಸ್‌ಬಿಐ ನಡೆಯ ಬಗ್ಗೆ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಎಸ್‌ಬಿಐ ಈ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದ್ದ ಒಂದು ದಿನ ಮುಂಚಿತವಾಗಿ ಈ ಅರ್ಜಿಯನ್ನು ಸಲ್ಲಿಸಿದೆ. ಮೂರು ದಿನಗಳ ಕಾಲ ಅವರು ಏನೂ ಮಾಡಲಿಲ್ಲ, ಮತ್ತು ಈಗ ಅವರು ಚುನಾವಣೆ ಕಳೆದ ಬಳಿಕ ಅಂದರೆ ಜೂನ್ 30ರವರೆಗೆ ವಿಸ್ತರಣೆಗೆ ಕೋರಿರುವುದು ಏಕೆ? ಏಕೆಂದರೆ ಸರ್ಕಾರ ಅವರನ್ನು ಈ ಅರ್ಜಿಯನ್ನು ಸಲ್ಲಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಎಸ್‌ಬಿಐಯ ಅರ್ಜಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ದೇಣಿಗೆ ವ್ಯವಹಾರವನ್ನು ಮರೆಮಾಚಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್‌ಗಳ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ದೇಶವಾಸಿಗಳ ಹಕ್ಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ, ಎಸ್‌ಬಿಐ ಈ ಮಾಹಿತಿಯನ್ನು ಚುನಾವಣೆಯ ಮೊದಲು ಸಾರ್ವಜನಿಕಗೊಳಿಸಬಾರದು ಎಂದು ಏಕೆ ಬಯಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...