Homeಕರೋನಾ ತಲ್ಲಣಕೊರೊನಾ ನಿರ್ವಹಣೆಯಲ್ಲಿ ಭಾರತಕ್ಕಿಂತ ಪಾಕ್, ಅಫ್ಘಾನಿಸ್ತಾನ ಉತ್ತಮ: ರಾಹುಲ್ ಗಾಂಧಿ

ಕೊರೊನಾ ನಿರ್ವಹಣೆಯಲ್ಲಿ ಭಾರತಕ್ಕಿಂತ ಪಾಕ್, ಅಫ್ಘಾನಿಸ್ತಾನ ಉತ್ತಮ: ರಾಹುಲ್ ಗಾಂಧಿ

ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯೇ 6 ವರ್ಷಗಳ ಘನ ಸಾಧನೆ, ಬಾಂಗ್ಲಾದೇಶ ಕೂಡ ಭಾರತವನ್ನು ಹಿಂದಿಕ್ಕಲಿದೆ" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಮಧ್ಯೆ ಈ ಹಣಕಾಸು ವರ್ಷದ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕುಸಿತದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಭಾರತದ ನೆರೆಹೊರೆಯ ದೇಶಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳ ಉದಾಹರಣೆ ನೀಡಿ ಅವುಗಳಿಗಿಂತ ಕೆಳಮಟ್ಟದಲ್ಲಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿ, ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಗಳನ್ನು ಉಲ್ಲೇಖಿಸಿ, “ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಕೂಡ ಕೋವಿಡ್ ಅನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ. ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ” ಎಂದು ಐಎಂಎಫ್‌ನ ಪ್ರೊಜೆಕ್ಷನ್ ಗ್ರಾಫ್ ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಈ ಹಣಕಾಸು ವರ್ಷದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ತಮ್ಮ ಜಿಡಿಪಿ ಬೆಳವಣಿಗೆಯಲ್ಲಿ 0.40% ಮತ್ತು 5% ನಷ್ಟು ಕುಸಿಯುವ ನಿರೀಕ್ಷೆಯಿದ್ದರೆ, ಭಾರತದ ಜಿಡಿಪಿ 10.3% ರಷ್ಟು ಕುಗ್ಗುವ ಸಾಧ್ಯತೆಯಿದೆ. ಇದು ಯಾವುದೇ ಪ್ರಮುಖ ಉದಯೋನ್ಮುಖ ರಾಷ್ಟ್ರಗಳ ಪೈಕಿ ಅತಿದೊಡ್ಡ ಕುಸಿತ. ಸ್ವಾತಂತ್ರ್ಯದ ನಂತರದ ಅತಿ ಕೆಟ್ಟ ಬೆಳವಣಿಗೆ ಇದು ಎಂದಿದ್ದಾರೆ.

ಆದಾಗ್ಯೂ, ಕೇಂದ್ರ ಸರ್ಕಾರವು ಐಎಂಎಫ್ ಗ್ರಾಫ್‌ ಅನ್ನು ನಿರಾಕರಿಸಿದ್ದು, ತಲಾ ಜಿಡಿಪಿ ಹೆಚ್ಚಾಗಿದೆ ಎಂದು ವಾದಿಸಿದೆ. 2014-15ರಲ್ಲಿ 83,091 ರೂಗಳಿಂದ 2019-20ರಲ್ಲಿ 1,08,620 ರೂಗಳಿಗೆ ಏರಿದೆ. ಇದು 30.7% ನಷ್ಟು ಹೆಚ್ಚಳವಾಗಿದೆ ಎಂದಿದೆ.

’ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯೇ 6 ವರ್ಷಗಳ ಘನ ಸಾಧನೆ, ಬಾಂಗ್ಲಾದೇಶ ಕೂಡ ಭಾರತವನ್ನು ಹಿಂದಿಕ್ಕಲಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2019ರಲ್ಲಿ ಭಾರತದ ಜಿಡಿಪಿ ಬಾಂಗ್ಲಾದೇಶಕ್ಕಿಂತ 11 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮುಂದಿನ ವರ್ಷ ಭಾರತದ ಜಿಡಿಪಿ 8.8% ರಷ್ಟು ಹೆಚ್ಚಾಗಲಿದೆ ಎಂದು ಐಎಂಎಫ್ ನಿರೀಕ್ಷಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ಆರ್ಥಿಕ ಚೇತರಿಕೆ ಮತ್ತು ಜಾಗತಿಕ ಆರ್ಥಿಕತೆ ಚೇತರಿಕೆಯ ಅನಿಶ್ಚಿತತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಎಚ್ಚರಿಸಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...