Homeಸಿನಿಮಾಕ್ರೀಡೆಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

ಫ್ರಾನ್ಸ್‌ ಸೋತರೂ ಫುಟ್‌ಬಾಲ್‌ ಪ್ರೇಮಿಗಳ ಮನಗೆದ್ದ ಎಂಬಾಪೆ; ಗೋಲ್ಡನ್ ಬೂಟ್‌ ಪಯಣದ ಯಶೋಗಾಥೆ

- Advertisement -
- Advertisement -

23 ವರ್ಷ ವಯಸ್ಸಿನ ಕಿಲಿಯಾನ್ ಎಂಬಾಪೆ ಈ ಬಾರಿಯ ಫಿಫಾ ವರ್ಡ್‌ಕಪ್‌ನಲ್ಲಿ ಗೋಲ್ಡನ್‌ ಬೂಟ್‌ ಪಡೆದ ಫ್ರಾನ್ಸ್ ಆಟಗಾರ. ಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಫ್ರಾನ್ಸ್ ಸೋತರೂ ಫುಟ್ಬಾಲ್‌ ಪ್ರೇಮಿಗಳ ಮನಗೆದ್ದವರು ಎಂಬಾಪೆ.

2018ರಲ್ಲಿ ರಷ್ಯಾದಲ್ಲಿ ನಡೆದ ಫಿಫಾ ವರ್ಡ್‌ಕಪ್‌ನಲ್ಲಿ ‘ಬೆಸ್ಟ್ ಯಂಗ್ ಪ್ಲೇಯರ್‌ ಅವಾರ್ಡ್’ ಪಡೆದಿದ್ದ ಎಂಬಾಪೆ ಈ ಸಲದ ಕತಾರ್‌ ವರ್ಡ್‌ಕಪ್‌ನಲ್ಲಿ ಅತಿ ಹೆಚ್ಚು ಗೋಲ್‌ ಭಾರಿಸುವ ಮೂಲಕ ‘ಗೋಲ್ಡನ್ ಬೂಟ್ ಅವಾರ್ಡ್’ ತಮ್ಮದಾಗಿಸಿಕೊಂಡರು.

ವರ್ಡ್‌ಕಪ್‌ ಫೈನಲ್‌ನಲ್ಲಿ ಹ್ಯಾಟ್ರಿಕ್‌ ಗೋಲ್ ಗಳಿಸಿದ ಎರಡನೇ ಆಟಗಾರರಾಗಿ ಎಂಬಾಪೆ ಹೊಮ್ಮಿದರು. 1966ರಲ್ಲಿ ಇಂಗ್ಲೆಂಡ್‌ನ ಜಿಯೋಫ್ ಹರ್ಸ್ಟ್ ಈ ಸಾಧನೆ ಮಾಡಿದ್ದರು.

2022ರ ವರ್ಡ್ ಕಪ್‌ ಫೈನಲ್ ಭಾರೀ ಪೈಪೋಟಿಯಿಂದ ಕೂಡಿತ್ತು. ಅರ್ಜೆಂಟೀನಾ ಪರವಾಗಿ ಡಿ ಮಾರಿಯ ಒಂದು ಗೋಲ್‌, ಲಿಯೋನಲ್ ಮೆಸ್ಸಿ ಎರಡು ಗೋಲ್ ಭಾರಿಸಿದರೆ, ಫ್ರಾನ್ಸ್‌ ಪರವಾಗಿ ಮೂರು ಗೋಲ್‌ಗಳನ್ನೂ ಎಂಬಾಪೆ ಒಬ್ಬರೇ ಗಳಿಸುವ ಮೂಲಕ ಪೆನಾಲ್ಟಿ ಶೂಟ್‌ಗೆ ಪಂದ್ಯ ಕಾಲಿಡಲು ಕಾರಣವಾದರು.

ತೊಂಬತ್ತು ನಿಮಿಷಗಳ ಆಟದ ಮೊದಲಾರ್ಧದಲ್ಲಿ ಅರ್ಜೆಂಟೀನಾ ಮೇಲುಗೈ ಸಾಧಿಸಿತು. ಆದರೆ ದ್ವಿತೀಯಾರ್ಧದಲ್ಲಿ ಒಂದು ಪ್ಯಾನಲ್ಟಿ ಸೇರಿದಂತೆ ಎಂಬಾಪೆ ಬಾರಿಸಿದ ಎರಡು ಗೋಲುಗಳು ಪಂದ್ಯದ ದಿಕ್ಕನ್ನೇ ಬದಲಿಸಿತು. ಮತ್ತೆ ಹೆಚ್ಚುವರಿ ಅರ್ಧ ಗಂಟೆಯಲ್ಲಿ ಮೆಸ್ಸಿ ಒಂದು ಗೋಲು ಗಳಿಸಿದರು. ಪ್ಯಾನಲ್ಟಿ ಗೋಲಿನ ಅದೃಷ್ಟ ಪಡೆದ ಎಂಬಾಪೆ ಮತ್ತೊಂದು ಗೋಲು ತಮ್ಮದಾಗಿಸಿಕೊಂಡರು. ಹೀಗೆ ಸಮಬಲ ಸಾಧಿಸಿದ ಪಂದ್ಯ ಪ್ಯಾನಲ್ಟಿ ಶೂಟೌಟ್‌ಗೆ ಕಾಲಿಟ್ಟಿದ್ದು ರೋಮಾಂಚನಕಾರಿಯಾಗಿತ್ತು. ಫೈನಲ್‌ನಲ್ಲಿ ನಾಲ್ಕು ಗೋಲು ಗಳಿಸಿದ ಖ್ಯಾತಿಗೂ ಎಂಬಾಪೆ ಪಾತ್ರರಾಗಿದ್ದಾರೆ. 2018ರ ವರ್ಡ್‌ಕಪ್‌ ಫೈನಲ್‌ನಲ್ಲಿ ಕ್ರೊಯೇಷಿಯ ವಿರುದ್ಧ ಒಂದು ಗೋಲನ್ನು ಎಂಬಾಪೆ ಗಳಿಸಿದ್ದರು.

ಫೈನಲ್ ಪಂದ್ಯದ ಆರಂಭಕ್ಕೂ ಮೊದಲು ಮೆಸ್ಸಿ ಮತ್ತು ಎಂಬಾಪೆ ನಡುವೆ ಗೋಲ್ಡನ್ ಬೂಟ್‌ ಯಾರಿಗೆ ದೊರಕುತ್ತದೆ ಎಂಬ ಕುತೂಹಲ ಉಂಟಾಗಿತ್ತು. ಪಂದ್ಯದ ಏರಿಳಿತದಲ್ಲಿ ಒಮ್ಮೆ ಮೆಸ್ಸಿ ಕಡೆಗೂ ಮತ್ತೊಂದು ಸಲ ಎಂಬಾಪೆ ಕಡೆಗೂ ಗೋಲ್ಡನ್‌ ಬೂಟ್‌ ಅವಕಾಶ ಹರಿದಾಡುತ್ತಿತ್ತು. ಅಂತಿಮವಾಗಿ ಏಳು ಗೋಲನ್ನು ಮೆಸ್ಸಿ ಗಳಿಸಿದರೆ, ಎಂಬಾಪೆ ಎಂಟು ಗೋಲು ಭಾರಿಸಿದರು.

ಗೋಲ್ಡನ್ ಬೂಟ್‌ನ ಸಮರ ಹೇಗಿತ್ತು?

ಕತಾರ್‌ ವಿಶ್ವಕಪ್‌ ಟೂರ್ನಿಯಲ್ಲಿ ಒಟ್ಟು ಎಂಟು ಗೋಲ್‌ಗಳನ್ನು ಎಂಬಾಪೆ ಗಳಿಸಿದ್ದಾರೆ. ಜೊತೆಗೆ ಎರಡು ಗೋಲ್‌ಗಳಿಗೆ ಅಸಿಸ್ಟ್‌ (ನೆರವು) ಮಾಡಿದ್ದಾರೆ. ಫ್ರಾನ್ಸ್‌ ತಂಡವು ಟೂರ್ನಿಯಲ್ಲಿ ಫೈನಲ್‌ ತಲುಪಿ, ಪ್ರಬಲ ಪೈಪೋಟಿ ನೀಡಲು ಕಾರಣವಾದ ಎಂಬಾಪೆಯ ಗೋಲ್‌ಗಳು ಹೀಗಿದ್ದವು:

(ಆವರಣದಲ್ಲಿ ನೀಡಿರುವುದು ಎಂಬಾಪೆ ಗಳಿಸಿದ ಗೋಲ್‌ಗಳ ಸಂಖ್ಯೆ)

ಡಿ ಗುಂಪು: ಫ್ರಾನ್ಸ್ 4-1 ಆಸ್ಟ್ರೇಲಿಯಾ (1 ಗೋಲು, 1 ಅಸಿಸ್ಟ್‌)

ಡಿ ಗುಂಪು: ಫ್ರಾನ್ಸ್ 2-1 ಡೆನ್ಮಾರ್ಕ್ (2 ಗೋಲು)

ಡಿ ಗುಂಪು: ಟುನೀಶಿಯಾ 1-0 ಫ್ರಾನ್ಸ್ (0 ಗೋಲುಗಳು)

16ರ ಸುತ್ತು: ಫ್ರಾನ್ಸ್ 3-1 ಪೋಲೆಂಡ್ (2 ಗೋಲುಗಳು, 1 ಅಸಿಸ್ಟ್)

ಕ್ವಾರ್ಟರ್-ಫೈನಲ್: ಇಂಗ್ಲೆಂಡ್ 1-2 ಫ್ರಾನ್ಸ್ (0 ಗೋಲು)

ಸೆಮಿಫೈನಲ್: ಫ್ರಾನ್ಸ್ 2-0 ಮೊರಾಕೊ (0 ಗೋಲು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (3 ಗೋಲುಗಳು)

ಮೆಸ್ಸಿ ಮ್ಯಾಜಿಕ್‌

ಅರ್ಜೆಂಟೀನಾದ ಸ್ಟಾರ್‌ ಆಟಗಾರ ಲಿಯೋನೆಲ್ ಮೆಸ್ಸಿ, ಅರ್ಜೇಂಟೀನಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇನ್ನೊಂದು ಗೋಲ್ ಗಳಿಸಿದ್ದರೂ ಅವರು ಎಂಬಾಪೆ ಅವರೊಂದಿಗೆ ಸಮಬಲ ಸಾಧಿಸಿ ಗೋಲ್ಡನ್‌ ಬೂಟ್‌ ಪಡೆಯುತ್ತಿದ್ದರು. ಯಾಕೆಂದರೆ ಒಂದು ಹೆಚ್ಚುವರಿ ಅಸಿಸ್ಟ್ ಮಾಡಿದ ದಾಖಲೆ ಮೆಸ್ಸಿ ಅವರ ಪಾಲಿಗಿತ್ತು. ಅಂತಿಮವಾಗಿ ಮೆಸ್ಸಿ ಈ ಟೂರ್ನಿಯಲ್ಲಿ 7 ಗೋಲು ಹಾಗೂ 3 ಅಸಿಸ್ಟ್‌ ಮಾಡಿದ್ದಾರೆ.

ಮೆಸ್ಸಿ ಗೋಲ್‌ ಭಾರಿಸಿದ ಪಂದ್ಯಗಳು ಹೀಗಿವೆ:

(ಆವರಣದಲ್ಲಿ ನೀಡಿರುವುದು ಮೆಸ್ಸಿ ಗಳಿಸಿದ ಗೋಲ್‌ಗಳ ಸಂಖ್ಯೆ)

ಗುಂಪು ಸಿ: ಅರ್ಜೆಂಟೀನಾ 1-2 ಸೌದಿ ಅರೇಬಿಯಾ (1 ಗೋಲು)

ಗುಂಪು ಸಿ: ಅರ್ಜೆಂಟೀನಾ 2-1 ಮೆಕ್ಸಿಕೋ (1 ಗೋಲು, 1 ಅಸಿಸ್ಟ್‌)

ಗುಂಪು ಸಿ: ಪೋಲೆಂಡ್ 0-2 ಅರ್ಜೆಂಟೀನಾ (0 ಗೋಲುಗಳು)

16ರ ಸುತ್ತು: ಅರ್ಜೆಂಟೀನಾ 2-1 ಆಸ್ಟ್ರೇಲಿಯಾ (1 ಗೋಲು)

ಕ್ವಾರ್ಟರ್-ಫೈನಲ್: ನೆದರ್ಲ್ಯಾಂಡ್ಸ್ 2-2 ಅರ್ಜೆಂಟೀನಾ (1 ಗೋಲು, 1 ಅಸಿಸ್ಟ್‌)

ಸೆಮಿಫೈನಲ್: ಅರ್ಜೆಂಟೀನಾ 3-0 ಕ್ರೊಯೇಷಿಯಾ (1 ಗೋಲು, 1 ನೆರವು)

ಫೈನಲ್: ಅರ್ಜೆಂಟೀನಾ 3-3 ಫ್ರಾನ್ಸ್ (2 ಗೋಲು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...