Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...