Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...