Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...