Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...