Homeಮುಖಪುಟದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ, ಕ್ಷಮೆಯಾಚಿಸಲು ನಾವು ಬಿಜೆಪಿಯಲ್ಲ: ಮಲ್ಲಿಕಾರ್ಜುನ ಖರ್ಗೆ

ದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ, ಕ್ಷಮೆಯಾಚಿಸಲು ನಾವು ಬಿಜೆಪಿಯಲ್ಲ: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿ ಸರ್ಕಾರವು ತನ್ನನ್ನು ಸಿಂಹದಂತೆ ತೋರ್ಪಡಿಸಿಕೊಳ್ಳುತ್ತದೆ. ಆದರೆ ಅದು ಇಲಿ ರೀತಿ ವರ್ತಿಸುತ್ತದೆ" - ಖರ್ಗೆ

- Advertisement -
- Advertisement -

ದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. ಕ್ಷಮೆ ಕೇಳಲು ನಾವು ಬಿಜೆಪಿಯವರಲ್ಲ ಎಂದು ಖರ್ಗೆಯವರು ತಿರುಗೇಟು ನೀಡಿದ್ದು, ರಾಜ್ಯಸಭೆಯಲ್ಲಿ ವಾದ ವಿವಾದಗಳು ತಾರಕಕ್ಕೇರಿವೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ (ಐಕ್ಯತಾ) ಯಾತ್ರೆಯನ್ನು ಬಿಜೆಪಿಯು ಭಾರತ್ ತೋಡೋ (ವಿಭಜನೆ) ಯಾತ್ರೆ ಎಂದು ಟೀಕಿಸಿತ್ತು. ಇದನ್ನು ಖಂಡಿಸಿ ಮಲ್ಲಿಕಾರ್ಜುನ ಖರ್ಗೆಯವರು ರಾಜಸ್ಥಾನದ ಅಲ್ವರ್‌ನಲ್ಲಿ ಮಾತನಾಡುತ್ತಾ, “ಭಾರತದ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷವು ಹೋರಾಡಿ ಗಳಿಸಿದೆ. ಆನಂತರ ದೇಶಕ್ಕಾಗಿ ಪಕ್ಷದ ಮುಖಂಡರಾದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ದೇಶಕ್ಕಾಗಿ ಬಿಜೆಪಿಯವರ ಮನೆಯ ಒಂದು ನಾಯಿ ಕೂಡ ಸತ್ತಿಲ್ಲ. ಆದರೂ ಅವರು ಮಹಾನ್ ದೇಶಭಕ್ತರೆಂದು ಪೋಸು ಕೊಡುತ್ತಾರೆ. ನಾವು ಏನಾದರೂ ಮಾತನಾಡಿದರೆ ನಮ್ಮನ್ನು ದೇಶದ್ರೋಹಿಗಳು ಎಂದು ಕರೆಯಲಾಗುತ್ತದೆ” ಎಂದು ಕಿಡಿಕಾರಿದ್ದರು.

ಭಾರತ – ಚೀನಾ ಗಡಿ ಸಂಘರ್ಷ ಸಮಸ್ಯೆ ಕುರಿತು ಪಾರ್ಲಿಮೆಂಟಿನಲ್ಲಿ ಮಾತನಾಡಲು ಅವಕಾಶ ಕೊಡದ ಸರ್ಕಾರದ ಕ್ರಮವನ್ನು ಖಂಡಿಸಿದ್ದ ಅವರು, “ಬಿಜೆಪಿ ಸರ್ಕಾರವು ತನ್ನನ್ನು ಸಿಂಹದಂತೆ ತೋರ್ಪಡಿಸಿಕೊಳ್ಳುತ್ತದೆ. ಆದರೆ ಅದು ಇಲಿ ರೀತಿ ವರ್ತಿಸುತ್ತದೆ” ಎಂದು ವ್ಯಂಗ್ಯವಾಡಿದ್ದರು.

ಖರ್ಗೆಯವರ ಹೇಳಿಕೆಯಿಂದ ಕುಪಿತಗೊಂಡ ಬಿಜೆಪಿಯು ಅವರು ಸಂಸತ್ತಿನಲ್ಲಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು. “ನಾವು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗಳನ್ನು ಖಂಡಿಸುತ್ತೇವೆ. ಅವರು ನಿಂದನಾ ಭಾಷೆಯಲ್ಲಿ ಸುಳ್ಳು ಹೇಳಿದ್ದಾರೆ. ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು” ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ರಾಜ್ಯಸಭೆಯಲ್ಲಿ ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳಾದ ಜಗದೀಪ್ ಧಂಕರ್‌ರವರು ಖರ್ಗೆಯವರ ಹೇಳಿಕೆಗಳು ಪಾರ್ಲಿಮೆಂಟಿನ ಹೊರಗಿನಿಂದ ಬಂದಿವೆ. ಅದನ್ನು ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದಿದ್ದರು.

ಕ್ಷಮೆ ಕೇಳಬೇಕು ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಖರ್ಗೆಯವರು, “ನಾನು ಮತ್ತೆ ಅದೇ ವಾಕ್ಯಗಳನ್ನು ಪುನರುಚ್ಚರಿಸಿದರೆ ಬಿಜೆಪಿಯವರಿಗೆ ತೊಂದರೆ ಅನಿಸಬಹುದು. ಏಕೆಂದರೆ ಅವರು ಬ್ರಿಟೀಷರ ಕ್ಷಮೆಯಾಚಿಸಿದ್ದರು. ಕ್ಷಮೆ ಯಾಚಿಸಲು ನಾವು ಬಿಜೆಪಿಯವರಲ್ಲ. ನಮ್ಮ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಬಿಜೆಪಿಯವರಲ್ಲಿ ಯಾರು ಪ್ರಾಣಕೊಟ್ಟಿದ್ದಾರೆ? ಒಂದು ಹೆಸರಾದರೂ ಹೇಳಿ” ಎಂದು ಮರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಕಾಂಗ್ರೆಸ್ ನ ತಾಕತ್ತು… ಕಾಂಗ್ರೆಸ್ ಅಂದ್ರೆ ಖರ್ಗೆ … ಖರ್ಗೆ ಅಂದ್ರೆ ತಾಂಗ್ರೆಸ್‌…. ಭಲೇ… ಖರ್ಗೆ … ಭಲೇ… ಕಾಂಗ್ರೆಸ್.

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...