Homeಮುಖಪುಟದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ, ಕ್ಷಮೆಯಾಚಿಸಲು ನಾವು ಬಿಜೆಪಿಯಲ್ಲ: ಮಲ್ಲಿಕಾರ್ಜುನ ಖರ್ಗೆ

ದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ, ಕ್ಷಮೆಯಾಚಿಸಲು ನಾವು ಬಿಜೆಪಿಯಲ್ಲ: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿ ಸರ್ಕಾರವು ತನ್ನನ್ನು ಸಿಂಹದಂತೆ ತೋರ್ಪಡಿಸಿಕೊಳ್ಳುತ್ತದೆ. ಆದರೆ ಅದು ಇಲಿ ರೀತಿ ವರ್ತಿಸುತ್ತದೆ" - ಖರ್ಗೆ

- Advertisement -
- Advertisement -

ದೇಶಕ್ಕಾಗಿ ನಿಮ್ಮ ಮನೆ ನಾಯಿ ಕೂಡ ಸತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. ಕ್ಷಮೆ ಕೇಳಲು ನಾವು ಬಿಜೆಪಿಯವರಲ್ಲ ಎಂದು ಖರ್ಗೆಯವರು ತಿರುಗೇಟು ನೀಡಿದ್ದು, ರಾಜ್ಯಸಭೆಯಲ್ಲಿ ವಾದ ವಿವಾದಗಳು ತಾರಕಕ್ಕೇರಿವೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ (ಐಕ್ಯತಾ) ಯಾತ್ರೆಯನ್ನು ಬಿಜೆಪಿಯು ಭಾರತ್ ತೋಡೋ (ವಿಭಜನೆ) ಯಾತ್ರೆ ಎಂದು ಟೀಕಿಸಿತ್ತು. ಇದನ್ನು ಖಂಡಿಸಿ ಮಲ್ಲಿಕಾರ್ಜುನ ಖರ್ಗೆಯವರು ರಾಜಸ್ಥಾನದ ಅಲ್ವರ್‌ನಲ್ಲಿ ಮಾತನಾಡುತ್ತಾ, “ಭಾರತದ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷವು ಹೋರಾಡಿ ಗಳಿಸಿದೆ. ಆನಂತರ ದೇಶಕ್ಕಾಗಿ ಪಕ್ಷದ ಮುಖಂಡರಾದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ದೇಶಕ್ಕಾಗಿ ಬಿಜೆಪಿಯವರ ಮನೆಯ ಒಂದು ನಾಯಿ ಕೂಡ ಸತ್ತಿಲ್ಲ. ಆದರೂ ಅವರು ಮಹಾನ್ ದೇಶಭಕ್ತರೆಂದು ಪೋಸು ಕೊಡುತ್ತಾರೆ. ನಾವು ಏನಾದರೂ ಮಾತನಾಡಿದರೆ ನಮ್ಮನ್ನು ದೇಶದ್ರೋಹಿಗಳು ಎಂದು ಕರೆಯಲಾಗುತ್ತದೆ” ಎಂದು ಕಿಡಿಕಾರಿದ್ದರು.

ಭಾರತ – ಚೀನಾ ಗಡಿ ಸಂಘರ್ಷ ಸಮಸ್ಯೆ ಕುರಿತು ಪಾರ್ಲಿಮೆಂಟಿನಲ್ಲಿ ಮಾತನಾಡಲು ಅವಕಾಶ ಕೊಡದ ಸರ್ಕಾರದ ಕ್ರಮವನ್ನು ಖಂಡಿಸಿದ್ದ ಅವರು, “ಬಿಜೆಪಿ ಸರ್ಕಾರವು ತನ್ನನ್ನು ಸಿಂಹದಂತೆ ತೋರ್ಪಡಿಸಿಕೊಳ್ಳುತ್ತದೆ. ಆದರೆ ಅದು ಇಲಿ ರೀತಿ ವರ್ತಿಸುತ್ತದೆ” ಎಂದು ವ್ಯಂಗ್ಯವಾಡಿದ್ದರು.

ಖರ್ಗೆಯವರ ಹೇಳಿಕೆಯಿಂದ ಕುಪಿತಗೊಂಡ ಬಿಜೆಪಿಯು ಅವರು ಸಂಸತ್ತಿನಲ್ಲಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು. “ನಾವು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗಳನ್ನು ಖಂಡಿಸುತ್ತೇವೆ. ಅವರು ನಿಂದನಾ ಭಾಷೆಯಲ್ಲಿ ಸುಳ್ಳು ಹೇಳಿದ್ದಾರೆ. ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು” ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ರಾಜ್ಯಸಭೆಯಲ್ಲಿ ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳಾದ ಜಗದೀಪ್ ಧಂಕರ್‌ರವರು ಖರ್ಗೆಯವರ ಹೇಳಿಕೆಗಳು ಪಾರ್ಲಿಮೆಂಟಿನ ಹೊರಗಿನಿಂದ ಬಂದಿವೆ. ಅದನ್ನು ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದಿದ್ದರು.

ಕ್ಷಮೆ ಕೇಳಬೇಕು ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಖರ್ಗೆಯವರು, “ನಾನು ಮತ್ತೆ ಅದೇ ವಾಕ್ಯಗಳನ್ನು ಪುನರುಚ್ಚರಿಸಿದರೆ ಬಿಜೆಪಿಯವರಿಗೆ ತೊಂದರೆ ಅನಿಸಬಹುದು. ಏಕೆಂದರೆ ಅವರು ಬ್ರಿಟೀಷರ ಕ್ಷಮೆಯಾಚಿಸಿದ್ದರು. ಕ್ಷಮೆ ಯಾಚಿಸಲು ನಾವು ಬಿಜೆಪಿಯವರಲ್ಲ. ನಮ್ಮ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಬಿಜೆಪಿಯವರಲ್ಲಿ ಯಾರು ಪ್ರಾಣಕೊಟ್ಟಿದ್ದಾರೆ? ಒಂದು ಹೆಸರಾದರೂ ಹೇಳಿ” ಎಂದು ಮರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಕಾಂಗ್ರೆಸ್ ನ ತಾಕತ್ತು… ಕಾಂಗ್ರೆಸ್ ಅಂದ್ರೆ ಖರ್ಗೆ … ಖರ್ಗೆ ಅಂದ್ರೆ ತಾಂಗ್ರೆಸ್‌…. ಭಲೇ… ಖರ್ಗೆ … ಭಲೇ… ಕಾಂಗ್ರೆಸ್.

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...