Homeಮುಖಪುಟನರಗುಂದ ಬಂಡಾಯದ ನಂತರ

ನರಗುಂದ ಬಂಡಾಯದ ನಂತರ

- Advertisement -
- Advertisement -

ಸಿಪಿಎಂ ನಾಯಕರಾದ ಜಿ.ಎನ್ ನಾಗರಾಜ್‌ರವರು 80ರ ದಶಕದ ರೈತ ಚಳವಳಿ ಕುರಿತು ದಾಖಲಿಸಿದ್ದಾರೆ. ಇದು ಪ್ರಾಮಾಣಿಕವಾದ ಐತಿಹಾಸಿಕ ವಿವರಗಳನ್ನೊಳಗೊಂಡ ಬರಹ. ನರಗುಂದ ರೈತ ಬಂಡಾಯದ ಸಮಯದಲ್ಲಿ ನಾಗರಾಜ್ ಕೃಷಿ ಇಲಾಖೆಯ ಅಧಿಕಾರಿಯಾಗಿದ್ದರು, ಜೊತೆಗೆ ರೈತರು, ಅಧಿಕಾರಿಗಳು ಮತ್ತು ಮುಖ್ಯಮಂತ್ರಿಯ ನಡುವೆ ವ್ಯವಹರಿಸುವ ಜವಾಬ್ದಾರಿ ಹೊತ್ತವರಾಗಿದ್ದರು. ಎಲ್ಲವೂ ಕೈಮೀರುವ ಹಂತ ತಲುಪಿದಾಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಇದಕ್ಕೆ ಕಾರಣ ರೈತರು ಮತ್ತು ಕೃಷಿ ಕಾರ್ಮಿಕರ ಬಗ್ಗೆ ಅವರಿಗಿದ್ದ ಕಾಳಜಿ. ಕೃಷಿ ಅಧಿಕಾರಿಯೊಬ್ಬ ಆಗ ಹಠಾತ್ತನೆ ರಾಜೀನಾಮೆ ಬರೆದು ಸಂಘಟಕರಾಗಿ ಬದಲಾಗುವುದು ಒಂದು ಸಾಹಸ. ಇಂತಹ ತೀರ್ಮಾನಕ್ಕೆ ಧೈರ್ಯಬೇಕು. ಅದನ್ನು ತಮ್ಮ ಬದುಕಿನಲ್ಲಿ ತೋರಿಸಿದವರು ನಾಗರಾಜ್.

ಕರ್ನಾಟಕದ ಇತಿಹಾಸದಲ್ಲಿ ರೈತ ಚಳವಳಿ ಒಂದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಬಲಿಷ್ಠ ಎತ್ತುಗಳೊಂದಿಗೆ ಹೊಲ ಉತ್ತು ಬೇಸಾಯ ಮಾಡಿದ್ದ ದೇವರಾಜ ಅರಸರಿಂದ ಅಧಿಕಾರವನ್ನು ಕಿತ್ತು ಗುಂಡೂರಾಯರಿಗೆ ಕೊಟ್ಟ ಇಂದಿರಾಗಾಂಧಿ ಮತ್ತು ಸಂಜಯಗಾಂಧಿ ಆ ಕಾರಣಕ್ಕೆ ಅಂದು ರಾಜಕೀಯವಾಗಿ ಕರ್ನಾಟಕವನ್ನು ಕಳೆದುಕೊಂಡರು. ಇಂದಿರಾಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದ ಅರಸು ಆಡಳಿತದ ಫಲವಾಗಿ ಕರ್ನಾಟಕದಲ್ಲಿ ಕಾಂಗೈಯನ್ನ ಅಲುಗಾಡಿಸುವುದು ಕಷ್ಟವಿತ್ತು. ಆದರೆ ಜನಾಭಿಪ್ರಾಯವಿಲ್ಲದೆ ನೇಮಕಗೊಂಡಿದ್ದ ಗುಂಡೂರಾವ್ ಆಡಳಿತ ವೈಖರಿಯಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು. ಕರ್ನಾಟಕದ ಜನ ಸಮೂಹದ ಪ್ರತಿಭಟನೆಗಳು ತನ್ನ ವಿರುದ್ಧವಾಗಿವೆ ಎಂದು ಭಾವಿಸಿದ್ದ ಗುಂಡೂರಾಯರ ಮಾತಿನಲ್ಲಿ ಪ್ರತೀಕಾರದ ಮಾತು ಬರುತ್ತಿದ್ದವು. ನಾಯಕನಾದವನ ಬಾಯಲ್ಲಿ ಹಿಂಸೆಯ ಮಾತುಗಳು ಬರಬಾರದು, ಬಂದರೆ ಅದರ ಪರಿಣಾಮ ಘೋರ. ನಾಯಕನ ಬಾಯಿಂದ ಪ್ರತಿಹಿಂಸೆ ಮಾತು ಬಂದರೆ ಪೊಲೀಸರಿಗೆ ಎಲ್ಲಿಲ್ಲದ ಶಕ್ತಿ ಬರುತ್ತದೆ. ಗುಂಡೂರಾಯರ ಕಾಲದ ಪೊಲೀಸರು ರಕ್ಕಸರಂತಾಗಿದ್ದರು. ಇದರ ಪರಿಣಾಮ ನರಗುಂದದಲ್ಲಿ ರೈತರ ದಂಗೆಯಾಗಿ ಗೋಲಿಬಾರಿಗೆ ಎರಡು ಜೀವ ಬಲಿಯಾಗಿದ್ದವು. ಪೊಲೀಸ್ ಇನ್‌ಸ್ಪೆಕ್ಟರ್ ಹತನಾಗಿದ್ದ.

ಇತ್ತ ಶಿವಮೊಗ್ಗದಲ್ಲಿ ಅದಾಗಲೇ ರೈತನಾಯಕ ಹೆಚ್.ಎಸ್ ರುದ್ರಪ್ಪನವರ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಂಘ ಹುಟ್ಟಿಕೊಂಡು ಸರಕಾರದ ವಿರುದ್ಧ ಹೋರಾಡುತ್ತಿತ್ತು. ಅಂತಹ ಸಮಯದಲ್ಲಿ ಮುಲಾಜಿಲ್ಲದೆ ರೈತರನ್ನು ಗೋಲಿಬಾರ್ ಮುಖಾಂತರ ಉಡಾಯಿಸಿದ ಸರಕಾರದ ವಿರುದ್ಧ ರುದ್ರಪ್ಪನವರ ಟೀಮು ಸಿಡಿಗೆದ್ದಿತು. ತಮ್ಮ ಮುಂದಿನ ಚಳವಳಿಯ ನಾಯಕತ್ವಕ್ಕಾಗಿ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರನ್ನ ಕರೆಸಿಕೊಂಡರು. ಸುಂದರೇಶ್, ಕಡಿದಾಳು ಶಾಮಣ್ಣ, ಕೆ.ಟಿ ಗಂಗಾಧರ, ಬಸವರಾಜಪ್ಪ ಇವರೆಲ್ಲಾ ನರಗುಂದಕ್ಕೆ ಹೋದರು. ಅಲ್ಲಿ ಪೊಲೀಸರು ರೈತರನ್ನು ಬೇಟೆಯಾಡಿ ತಂದು ಜೈಲಿಗೆ ದಬ್ಬುತ್ತಿದ್ದುದನ್ನ ನೋಡಿದ ರೈತ ನಾಯಕರಿಗೆ ಸಿಟ್ಟು ಕಟ್ಟಯೊಡೆಯಿತು. ಗುಂಡೂರಾಯರು ಎಲ್ಲ ಜವಾಬ್ದಾರಿಯನ್ನು ಪೊಲೀಸರಿಗೆ ವಹಿಸಿದಂತೆ ಕಂಡಿತು.

ಪ್ರೊ. ನಂಜುಂಡಸ್ವಾಮಿಯವರ ಟೀಮು ಮಡಿದ ರೈತರ ನೆನಪಿಗೆ ನೆಡಲು ವೀರಗಲ್ಲುಗಳ ಸಮೇತ ನರಗುಂದಕ್ಕೆ ಹೋಗಿದ್ದರು. IB ಬಳಿ ಹೋದಾಗ ಅಲ್ಲಿನ ಪೊಲೀಸರು IBಯಲ್ಲಿ ರೂಮಿಲ್ಲ, ಅದಾಗಲೆ ಎಸ್‌ಪಿಗೆ ಅಲಾಟ್ ಮಾಡಲಾಗಿದೆ ಎಂದರು. ಪ್ರೊ. ನಂಜುಂಡಸ್ವಾಮಿಯವರು ಕೆ.ಟಿ ಗಂಗಾದರ್ ಕಡೆ ನೋಡಿ “ಬಾಗಿಲು ಓಪನ್ ಮಾಡಿ” ಎಂದರು. ಕೂಡಲೇ ಗಂಗಾಧರ್ ಕಲ್ಲುತೆಗೆದುಕೊಂಡು ಬೀಗ ಹೊಡೆದರು. ಬಾಗಿಲು ತೆಗೆಯಿತು. ಆ ನಂತರ ಯಾವ ಪೊಲೀಸರು ಇವರ ಸನಿಹ ಸುಳಿಯಲಿಲ್ಲ. ಇಲ್ಲೊಂದು ಮಹತ್ವದ ವಿಷಯವಿದೆ; ನರಗುಂದ ನವಲಗುಂದದ ಬಂಡಾಯಕ್ಕೆ ಓಗೊಟ್ಟು ಬಂದಿದ್ದ ಈ ನಾಯಕರು ಅಸಾಮಾನ್ಯ ವ್ಯಕ್ತಿಗಳಾಗಿದ್ದರು. ಪ್ರೊ. ನಂಜುಂಡಸ್ವಾಮಿ ದೊಡ್ಡ ಜಮೀನ್ದಾರರ ಮಗ. ವಿದೇಶದಲ್ಲಿ ಲಾ ಓದಿಕೊಂಡು ಬಂದವರು. ನಮ್ಮ ಸಂವಿಧಾನ, ಕಾನೂನು, ಲೋಹಿಯಾರನ್ನೆಲ್ಲ ಅರೆದು ಕುಡಿದವರು. ಇನ್ನ ರುದ್ರಪ್ಪ ಗಾಂಧಿವಾದಿ, ರಾಜಕಾರಣಿ, ವಿಧಾನಸಭೆ ಸ್ಪೀಕರ್‌ರಾಗಿದ್ದವರು. ಎನ್.ಡಿ ಸುಂದರೇಶ್ ಕೂಡ ಜಮೀನ್ದಾರರ ಮಗ ಹಾಗೂ ಹೈಕೋರ್ಟ್ ಜಡ್ಜು ಎನ್.ಡಿ ವೆಂಕಟೇಶರ ತಮ್ಮ. ಇನ್ನ ಕಡಿದಾಳು ಶಾಮಣ್ಣ ಕಡಿದಾಳ ಮಂಜಪ್ಪನವರ ಅಣ್ಣನ ಮಗ. ಗಂಗಾಧರ ಸಮಾಜವಾದಿ ಚಿಂತನೆಯ ಹೋರಾಟಗಾರ. ಇಂತವರ ದಂಡು ನರಗುಂದಕ್ಕೆ ಬಂದಾಗ ಸರಕಾರ ಮತ್ತು ಪೊಲೀಸರ ಪುಂಗಿ ಬಂದಾದವು.

ಇನ್ಯಾರೆ ಆ ಸಮಯದಲ್ಲಿ ನರಗುಂದಕ್ಕೆ ಹೋಗಿದ್ದರೆ, ಹೊಡೆದು ಓಡಿಸುತ್ತಿದ್ದರು. ಗುಂಡೂರಾಯರು ಕೂಡ ಉಸಿರೆತ್ತಲಿಲ್ಲ. ಅಂದು ನರಗುಂದ ನವಲಗುಂದದಲ್ಲಿ ನಡೆದ ಬಂಡಾಯವನ್ನು ಈ ರೈತನಾಯಕರು ಅವಲೋಕಿಸಿದಾಗ ಅಲ್ಲಿ ನಾಯಕತ್ವದ ಕೊರತೆ ಇದೆಯೆಂದು ಭಾವಿಸಿದರು. ಅಲ್ಲಿನ ಬಂಡಾಯವನ್ನು ಜವಾಬ್ದಾರಿಯುತ ನಾಯಕರು ನಿಭಾಯಿಸಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ ಎಂಬುದು ರೈತನಾಯಕರ ಅರಿವಿಗೆ ಬಂತು. ತಲೆ ತಪ್ಪಿಸಿಕೊಂಡು ತಿರುಗುತ್ತಿದ್ದ ರೈತರು ಮತ್ತವರ ಕುಟುಂಬದವರನ್ನ ಭೇಟಿ ಮಾಡಿ ಧೈರ್ಯ ತುಂಬಲು ಕಡಿದಾಳು ಶಾಮಣ್ಣ ಮತ್ತು ಕೆ.ಟಿ ಗಂಗಾಧರ್‌ರನ್ನು ನೇಮಿಸಿದ ಪ್ರೊಫೆಸರ್ ಟೀಮು ಶಿವಮೊಗ್ಗಕ್ಕೆ ಬಂದು ನಿರಾಯುಧರಾದ ರೈತರನ್ನು ಕೊಂದ ಸರಕಾರದ ವಿರುದ್ಧ ಚಳವಳಿ ಆರಂಭಿಸಿದರು. ಡಿ.ಸಿ ಕಚೆರಿ ಎದುರು ಪೆಂಡಾಲ್ ಹಾಕಿ ಪ್ರತಿಭಟನೆ ಆರಂಭಿಸಿದ ನಾಯಕರ ಬೆಂಬಲಕ್ಕೆ ಇಡೀ ಶಿವಮೊಗ್ಗ ಜಿಲ್ಲೆಯ ರೈತರು ಹರಿದು ಬರತೊಡಗಿದರು. ಆಗ ಅಗಸ್ಟ್ 15 ಬಂತು, ಆ ದಿನವನ್ನು ಕರಾಳ ದಿನವಾಗಿ ಆಚರಿಸಿದ ರೈತನಾಯಕರು ಮುಂದೆ ಅಕ್ಟೋಬರ್ 2ರವರೆಗೂ ಧರಣಿ ಕುಳಿತರು. 45 ದಿನ ನಡೆದಂತಹ ಈ ಧರಣಿಗೆ ನಾಡಿನಾದ್ಯಂತ ಬೆಂಬಲ ವ್ಯಕ್ತವಾಯ್ತು. ಜನ ಸಾಗರವನ್ನು ಹತ್ತಿಕ್ಕಲೋಸ್ಕರ ಪೊಲೀಸರು ರೈತರನ್ನು ಅರೆಸ್ಟು ಮಾಡಿ ಜೈಲಿಗೆ ತೆಗೆದುಕೊಂಡು ಹೋದರೆ, ಜೈಲೆ ಭರ್ತಿಯಾಗಿ ಅಲ್ಲಿ ಜಾಗವೇ ಇಲ್ಲ ಎಂಬಂತಾಯಿತು. ಕಡೆಗೆ ಪೊಲೀಸರು ಅವರನ್ನೆಲ್ಲಾ ಶಿವಮೊಗ್ಗದಿಂದ ದೂರ ಕರೆದುಕೊಂಡು ಹೋಗಿ ಬಿಟ್ಟು ಬರತೊಡಗಿದರು.

ಅಕ್ಟೋಬರ್ 2ರಂದು ಒಂದು ಬೃಹತ್ ಸಭೆ ಶಿವಮೊಗ್ಗದಲ್ಲಿ ನಡೆಯಿತು. ಆ ಸಭೆಗೆ ಲಂಕೇಶ್, ತೇಜಸ್ವಿಯವರೂ ಬಂದರು. ಐಬಿಯಲ್ಲಿದ್ದ ಜಾರ್ಜ್ ಫರ್ನಾಂಡಿಸ್ ತಾನು ಬಂದು ರೈತರನ್ನು ಕುರಿತು ಭಾಷಣ ಮಾಡುವುದಾಗಿ ಹೇಳಿ ಕಳುಹಿಸಿದರು. ಆಗ ಪ್ರೊಫೆಸರ್ ಅವರು ಹೇಳಿದ್ದು ಹೀಗೆ: ಫರ್ನಾಂಡಿಸ್ ಒಂದು ಪಾರ್ಟಿಯಲ್ಲಿರುವುದರಿಂದ ಇಲ್ಲಿ ಬಂದು ಭಾಷಣ ಮಾಡುವ ಅಗತ್ಯವಿಲ್ಲ ಎಂದು. ಅಂತು ಒಂದು ಐತಿಹಾಸಿಕ ಸಭೆ ಜರುಗಿತು. ನರಗುಂದ ನವಲುಗುಂದದ ಬಂಡಾಯದ ಫಲವಾಗಿ ಕರ್ನಾಟಕ ರೈತ ಸಂಘ ಉದಯವಾಯ್ತು. ರೈತನಾಯಕರು ಇಡೀ ನಾಡನ್ನು ತಿರುಗಿ, ರೈತರನ್ನ ಸಂಘಟಿಸಿದರು. ಎಲ್ಲೆಲ್ಲಿ ಕಬ್ಬು ಬೆಳೆಗಾರರ ಸಂಘವಿತ್ತೋ ಅವರೆಲ್ಲಾ ರೈತ ಸಂಘದಲ್ಲಿ ಗುರುತಿಸಿಕೊಂಡರು. ಸರಕಾರದ ಬದಲಾವಣೆಯಲ್ಲಿ ಹಲವು ಜೀವಗಳನ್ನ ಕಳೆದುಕೊಂಡ ಏಕೈಕ ಸಂಘ ರೈತ ಸಂಘವಾಗಿತ್ತು.

ಇವತ್ತೇನು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ರೈತರ ಕೂಗಿಗೆ ಕಿವುಡಾಗಿ ಹಠ ಸಾಧಿಸಿತೋ ಅದೇ ರೀತಿ ಅಂದಿನ ಕಾಂಗ್ರೆಸ್ ರಾಜ್ಯ ಸರಕಾರ ರೈತರನ್ನು ತಮ್ಮ ವೈರಿಗಳೆಂದು ಭಾವಿಸಿ ನಡೆದುಕೊಂಡಿತ್ತು. ರೈತರ ಮೇಲೆ ಮುಲಾಜಿಲ್ಲದೆ ಗೋಲಿಬಾರು ಮಾಡಿದರು. ಇದರ ಫಲವಾಗಿ ಆಳವಾಗಿ ಬೇರೂರಿದ್ದ ಕಾಂಗ್ರೆಸ್ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರ ಕಳೆದುಕೊಂಡಿತು. ಮುಂದೆ ನಡೆದ ರೈತ ಸಂಘದ ಸಾಧನೆಗಳು ಮೆಲುಕು ಹಾಕಿ ಮರುಗುವಂತಹವು!

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ. ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ನರಗುಂದ ರೈತ ಬಂಡಾಯ ಮತ್ತು ಫಸಲುಗಳ ಬೆಲೆ ಪ್ರಶ್ನೆ; ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...