Homeಮುಖಪುಟನರಗುಂದ ಬಂಡಾಯದ ನಂತರ

ನರಗುಂದ ಬಂಡಾಯದ ನಂತರ

- Advertisement -
- Advertisement -

ಸಿಪಿಎಂ ನಾಯಕರಾದ ಜಿ.ಎನ್ ನಾಗರಾಜ್‌ರವರು 80ರ ದಶಕದ ರೈತ ಚಳವಳಿ ಕುರಿತು ದಾಖಲಿಸಿದ್ದಾರೆ. ಇದು ಪ್ರಾಮಾಣಿಕವಾದ ಐತಿಹಾಸಿಕ ವಿವರಗಳನ್ನೊಳಗೊಂಡ ಬರಹ. ನರಗುಂದ ರೈತ ಬಂಡಾಯದ ಸಮಯದಲ್ಲಿ ನಾಗರಾಜ್ ಕೃಷಿ ಇಲಾಖೆಯ ಅಧಿಕಾರಿಯಾಗಿದ್ದರು, ಜೊತೆಗೆ ರೈತರು, ಅಧಿಕಾರಿಗಳು ಮತ್ತು ಮುಖ್ಯಮಂತ್ರಿಯ ನಡುವೆ ವ್ಯವಹರಿಸುವ ಜವಾಬ್ದಾರಿ ಹೊತ್ತವರಾಗಿದ್ದರು. ಎಲ್ಲವೂ ಕೈಮೀರುವ ಹಂತ ತಲುಪಿದಾಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಇದಕ್ಕೆ ಕಾರಣ ರೈತರು ಮತ್ತು ಕೃಷಿ ಕಾರ್ಮಿಕರ ಬಗ್ಗೆ ಅವರಿಗಿದ್ದ ಕಾಳಜಿ. ಕೃಷಿ ಅಧಿಕಾರಿಯೊಬ್ಬ ಆಗ ಹಠಾತ್ತನೆ ರಾಜೀನಾಮೆ ಬರೆದು ಸಂಘಟಕರಾಗಿ ಬದಲಾಗುವುದು ಒಂದು ಸಾಹಸ. ಇಂತಹ ತೀರ್ಮಾನಕ್ಕೆ ಧೈರ್ಯಬೇಕು. ಅದನ್ನು ತಮ್ಮ ಬದುಕಿನಲ್ಲಿ ತೋರಿಸಿದವರು ನಾಗರಾಜ್.

ಕರ್ನಾಟಕದ ಇತಿಹಾಸದಲ್ಲಿ ರೈತ ಚಳವಳಿ ಒಂದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಬಲಿಷ್ಠ ಎತ್ತುಗಳೊಂದಿಗೆ ಹೊಲ ಉತ್ತು ಬೇಸಾಯ ಮಾಡಿದ್ದ ದೇವರಾಜ ಅರಸರಿಂದ ಅಧಿಕಾರವನ್ನು ಕಿತ್ತು ಗುಂಡೂರಾಯರಿಗೆ ಕೊಟ್ಟ ಇಂದಿರಾಗಾಂಧಿ ಮತ್ತು ಸಂಜಯಗಾಂಧಿ ಆ ಕಾರಣಕ್ಕೆ ಅಂದು ರಾಜಕೀಯವಾಗಿ ಕರ್ನಾಟಕವನ್ನು ಕಳೆದುಕೊಂಡರು. ಇಂದಿರಾಗಾಂಧಿಯವರ 20 ಅಂಶದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದ ಅರಸು ಆಡಳಿತದ ಫಲವಾಗಿ ಕರ್ನಾಟಕದಲ್ಲಿ ಕಾಂಗೈಯನ್ನ ಅಲುಗಾಡಿಸುವುದು ಕಷ್ಟವಿತ್ತು. ಆದರೆ ಜನಾಭಿಪ್ರಾಯವಿಲ್ಲದೆ ನೇಮಕಗೊಂಡಿದ್ದ ಗುಂಡೂರಾವ್ ಆಡಳಿತ ವೈಖರಿಯಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು. ಕರ್ನಾಟಕದ ಜನ ಸಮೂಹದ ಪ್ರತಿಭಟನೆಗಳು ತನ್ನ ವಿರುದ್ಧವಾಗಿವೆ ಎಂದು ಭಾವಿಸಿದ್ದ ಗುಂಡೂರಾಯರ ಮಾತಿನಲ್ಲಿ ಪ್ರತೀಕಾರದ ಮಾತು ಬರುತ್ತಿದ್ದವು. ನಾಯಕನಾದವನ ಬಾಯಲ್ಲಿ ಹಿಂಸೆಯ ಮಾತುಗಳು ಬರಬಾರದು, ಬಂದರೆ ಅದರ ಪರಿಣಾಮ ಘೋರ. ನಾಯಕನ ಬಾಯಿಂದ ಪ್ರತಿಹಿಂಸೆ ಮಾತು ಬಂದರೆ ಪೊಲೀಸರಿಗೆ ಎಲ್ಲಿಲ್ಲದ ಶಕ್ತಿ ಬರುತ್ತದೆ. ಗುಂಡೂರಾಯರ ಕಾಲದ ಪೊಲೀಸರು ರಕ್ಕಸರಂತಾಗಿದ್ದರು. ಇದರ ಪರಿಣಾಮ ನರಗುಂದದಲ್ಲಿ ರೈತರ ದಂಗೆಯಾಗಿ ಗೋಲಿಬಾರಿಗೆ ಎರಡು ಜೀವ ಬಲಿಯಾಗಿದ್ದವು. ಪೊಲೀಸ್ ಇನ್‌ಸ್ಪೆಕ್ಟರ್ ಹತನಾಗಿದ್ದ.

ಇತ್ತ ಶಿವಮೊಗ್ಗದಲ್ಲಿ ಅದಾಗಲೇ ರೈತನಾಯಕ ಹೆಚ್.ಎಸ್ ರುದ್ರಪ್ಪನವರ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಂಘ ಹುಟ್ಟಿಕೊಂಡು ಸರಕಾರದ ವಿರುದ್ಧ ಹೋರಾಡುತ್ತಿತ್ತು. ಅಂತಹ ಸಮಯದಲ್ಲಿ ಮುಲಾಜಿಲ್ಲದೆ ರೈತರನ್ನು ಗೋಲಿಬಾರ್ ಮುಖಾಂತರ ಉಡಾಯಿಸಿದ ಸರಕಾರದ ವಿರುದ್ಧ ರುದ್ರಪ್ಪನವರ ಟೀಮು ಸಿಡಿಗೆದ್ದಿತು. ತಮ್ಮ ಮುಂದಿನ ಚಳವಳಿಯ ನಾಯಕತ್ವಕ್ಕಾಗಿ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರನ್ನ ಕರೆಸಿಕೊಂಡರು. ಸುಂದರೇಶ್, ಕಡಿದಾಳು ಶಾಮಣ್ಣ, ಕೆ.ಟಿ ಗಂಗಾಧರ, ಬಸವರಾಜಪ್ಪ ಇವರೆಲ್ಲಾ ನರಗುಂದಕ್ಕೆ ಹೋದರು. ಅಲ್ಲಿ ಪೊಲೀಸರು ರೈತರನ್ನು ಬೇಟೆಯಾಡಿ ತಂದು ಜೈಲಿಗೆ ದಬ್ಬುತ್ತಿದ್ದುದನ್ನ ನೋಡಿದ ರೈತ ನಾಯಕರಿಗೆ ಸಿಟ್ಟು ಕಟ್ಟಯೊಡೆಯಿತು. ಗುಂಡೂರಾಯರು ಎಲ್ಲ ಜವಾಬ್ದಾರಿಯನ್ನು ಪೊಲೀಸರಿಗೆ ವಹಿಸಿದಂತೆ ಕಂಡಿತು.

ಪ್ರೊ. ನಂಜುಂಡಸ್ವಾಮಿಯವರ ಟೀಮು ಮಡಿದ ರೈತರ ನೆನಪಿಗೆ ನೆಡಲು ವೀರಗಲ್ಲುಗಳ ಸಮೇತ ನರಗುಂದಕ್ಕೆ ಹೋಗಿದ್ದರು. IB ಬಳಿ ಹೋದಾಗ ಅಲ್ಲಿನ ಪೊಲೀಸರು IBಯಲ್ಲಿ ರೂಮಿಲ್ಲ, ಅದಾಗಲೆ ಎಸ್‌ಪಿಗೆ ಅಲಾಟ್ ಮಾಡಲಾಗಿದೆ ಎಂದರು. ಪ್ರೊ. ನಂಜುಂಡಸ್ವಾಮಿಯವರು ಕೆ.ಟಿ ಗಂಗಾದರ್ ಕಡೆ ನೋಡಿ “ಬಾಗಿಲು ಓಪನ್ ಮಾಡಿ” ಎಂದರು. ಕೂಡಲೇ ಗಂಗಾಧರ್ ಕಲ್ಲುತೆಗೆದುಕೊಂಡು ಬೀಗ ಹೊಡೆದರು. ಬಾಗಿಲು ತೆಗೆಯಿತು. ಆ ನಂತರ ಯಾವ ಪೊಲೀಸರು ಇವರ ಸನಿಹ ಸುಳಿಯಲಿಲ್ಲ. ಇಲ್ಲೊಂದು ಮಹತ್ವದ ವಿಷಯವಿದೆ; ನರಗುಂದ ನವಲಗುಂದದ ಬಂಡಾಯಕ್ಕೆ ಓಗೊಟ್ಟು ಬಂದಿದ್ದ ಈ ನಾಯಕರು ಅಸಾಮಾನ್ಯ ವ್ಯಕ್ತಿಗಳಾಗಿದ್ದರು. ಪ್ರೊ. ನಂಜುಂಡಸ್ವಾಮಿ ದೊಡ್ಡ ಜಮೀನ್ದಾರರ ಮಗ. ವಿದೇಶದಲ್ಲಿ ಲಾ ಓದಿಕೊಂಡು ಬಂದವರು. ನಮ್ಮ ಸಂವಿಧಾನ, ಕಾನೂನು, ಲೋಹಿಯಾರನ್ನೆಲ್ಲ ಅರೆದು ಕುಡಿದವರು. ಇನ್ನ ರುದ್ರಪ್ಪ ಗಾಂಧಿವಾದಿ, ರಾಜಕಾರಣಿ, ವಿಧಾನಸಭೆ ಸ್ಪೀಕರ್‌ರಾಗಿದ್ದವರು. ಎನ್.ಡಿ ಸುಂದರೇಶ್ ಕೂಡ ಜಮೀನ್ದಾರರ ಮಗ ಹಾಗೂ ಹೈಕೋರ್ಟ್ ಜಡ್ಜು ಎನ್.ಡಿ ವೆಂಕಟೇಶರ ತಮ್ಮ. ಇನ್ನ ಕಡಿದಾಳು ಶಾಮಣ್ಣ ಕಡಿದಾಳ ಮಂಜಪ್ಪನವರ ಅಣ್ಣನ ಮಗ. ಗಂಗಾಧರ ಸಮಾಜವಾದಿ ಚಿಂತನೆಯ ಹೋರಾಟಗಾರ. ಇಂತವರ ದಂಡು ನರಗುಂದಕ್ಕೆ ಬಂದಾಗ ಸರಕಾರ ಮತ್ತು ಪೊಲೀಸರ ಪುಂಗಿ ಬಂದಾದವು.

ಇನ್ಯಾರೆ ಆ ಸಮಯದಲ್ಲಿ ನರಗುಂದಕ್ಕೆ ಹೋಗಿದ್ದರೆ, ಹೊಡೆದು ಓಡಿಸುತ್ತಿದ್ದರು. ಗುಂಡೂರಾಯರು ಕೂಡ ಉಸಿರೆತ್ತಲಿಲ್ಲ. ಅಂದು ನರಗುಂದ ನವಲಗುಂದದಲ್ಲಿ ನಡೆದ ಬಂಡಾಯವನ್ನು ಈ ರೈತನಾಯಕರು ಅವಲೋಕಿಸಿದಾಗ ಅಲ್ಲಿ ನಾಯಕತ್ವದ ಕೊರತೆ ಇದೆಯೆಂದು ಭಾವಿಸಿದರು. ಅಲ್ಲಿನ ಬಂಡಾಯವನ್ನು ಜವಾಬ್ದಾರಿಯುತ ನಾಯಕರು ನಿಭಾಯಿಸಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ ಎಂಬುದು ರೈತನಾಯಕರ ಅರಿವಿಗೆ ಬಂತು. ತಲೆ ತಪ್ಪಿಸಿಕೊಂಡು ತಿರುಗುತ್ತಿದ್ದ ರೈತರು ಮತ್ತವರ ಕುಟುಂಬದವರನ್ನ ಭೇಟಿ ಮಾಡಿ ಧೈರ್ಯ ತುಂಬಲು ಕಡಿದಾಳು ಶಾಮಣ್ಣ ಮತ್ತು ಕೆ.ಟಿ ಗಂಗಾಧರ್‌ರನ್ನು ನೇಮಿಸಿದ ಪ್ರೊಫೆಸರ್ ಟೀಮು ಶಿವಮೊಗ್ಗಕ್ಕೆ ಬಂದು ನಿರಾಯುಧರಾದ ರೈತರನ್ನು ಕೊಂದ ಸರಕಾರದ ವಿರುದ್ಧ ಚಳವಳಿ ಆರಂಭಿಸಿದರು. ಡಿ.ಸಿ ಕಚೆರಿ ಎದುರು ಪೆಂಡಾಲ್ ಹಾಕಿ ಪ್ರತಿಭಟನೆ ಆರಂಭಿಸಿದ ನಾಯಕರ ಬೆಂಬಲಕ್ಕೆ ಇಡೀ ಶಿವಮೊಗ್ಗ ಜಿಲ್ಲೆಯ ರೈತರು ಹರಿದು ಬರತೊಡಗಿದರು. ಆಗ ಅಗಸ್ಟ್ 15 ಬಂತು, ಆ ದಿನವನ್ನು ಕರಾಳ ದಿನವಾಗಿ ಆಚರಿಸಿದ ರೈತನಾಯಕರು ಮುಂದೆ ಅಕ್ಟೋಬರ್ 2ರವರೆಗೂ ಧರಣಿ ಕುಳಿತರು. 45 ದಿನ ನಡೆದಂತಹ ಈ ಧರಣಿಗೆ ನಾಡಿನಾದ್ಯಂತ ಬೆಂಬಲ ವ್ಯಕ್ತವಾಯ್ತು. ಜನ ಸಾಗರವನ್ನು ಹತ್ತಿಕ್ಕಲೋಸ್ಕರ ಪೊಲೀಸರು ರೈತರನ್ನು ಅರೆಸ್ಟು ಮಾಡಿ ಜೈಲಿಗೆ ತೆಗೆದುಕೊಂಡು ಹೋದರೆ, ಜೈಲೆ ಭರ್ತಿಯಾಗಿ ಅಲ್ಲಿ ಜಾಗವೇ ಇಲ್ಲ ಎಂಬಂತಾಯಿತು. ಕಡೆಗೆ ಪೊಲೀಸರು ಅವರನ್ನೆಲ್ಲಾ ಶಿವಮೊಗ್ಗದಿಂದ ದೂರ ಕರೆದುಕೊಂಡು ಹೋಗಿ ಬಿಟ್ಟು ಬರತೊಡಗಿದರು.

ಅಕ್ಟೋಬರ್ 2ರಂದು ಒಂದು ಬೃಹತ್ ಸಭೆ ಶಿವಮೊಗ್ಗದಲ್ಲಿ ನಡೆಯಿತು. ಆ ಸಭೆಗೆ ಲಂಕೇಶ್, ತೇಜಸ್ವಿಯವರೂ ಬಂದರು. ಐಬಿಯಲ್ಲಿದ್ದ ಜಾರ್ಜ್ ಫರ್ನಾಂಡಿಸ್ ತಾನು ಬಂದು ರೈತರನ್ನು ಕುರಿತು ಭಾಷಣ ಮಾಡುವುದಾಗಿ ಹೇಳಿ ಕಳುಹಿಸಿದರು. ಆಗ ಪ್ರೊಫೆಸರ್ ಅವರು ಹೇಳಿದ್ದು ಹೀಗೆ: ಫರ್ನಾಂಡಿಸ್ ಒಂದು ಪಾರ್ಟಿಯಲ್ಲಿರುವುದರಿಂದ ಇಲ್ಲಿ ಬಂದು ಭಾಷಣ ಮಾಡುವ ಅಗತ್ಯವಿಲ್ಲ ಎಂದು. ಅಂತು ಒಂದು ಐತಿಹಾಸಿಕ ಸಭೆ ಜರುಗಿತು. ನರಗುಂದ ನವಲುಗುಂದದ ಬಂಡಾಯದ ಫಲವಾಗಿ ಕರ್ನಾಟಕ ರೈತ ಸಂಘ ಉದಯವಾಯ್ತು. ರೈತನಾಯಕರು ಇಡೀ ನಾಡನ್ನು ತಿರುಗಿ, ರೈತರನ್ನ ಸಂಘಟಿಸಿದರು. ಎಲ್ಲೆಲ್ಲಿ ಕಬ್ಬು ಬೆಳೆಗಾರರ ಸಂಘವಿತ್ತೋ ಅವರೆಲ್ಲಾ ರೈತ ಸಂಘದಲ್ಲಿ ಗುರುತಿಸಿಕೊಂಡರು. ಸರಕಾರದ ಬದಲಾವಣೆಯಲ್ಲಿ ಹಲವು ಜೀವಗಳನ್ನ ಕಳೆದುಕೊಂಡ ಏಕೈಕ ಸಂಘ ರೈತ ಸಂಘವಾಗಿತ್ತು.

ಇವತ್ತೇನು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ರೈತರ ಕೂಗಿಗೆ ಕಿವುಡಾಗಿ ಹಠ ಸಾಧಿಸಿತೋ ಅದೇ ರೀತಿ ಅಂದಿನ ಕಾಂಗ್ರೆಸ್ ರಾಜ್ಯ ಸರಕಾರ ರೈತರನ್ನು ತಮ್ಮ ವೈರಿಗಳೆಂದು ಭಾವಿಸಿ ನಡೆದುಕೊಂಡಿತ್ತು. ರೈತರ ಮೇಲೆ ಮುಲಾಜಿಲ್ಲದೆ ಗೋಲಿಬಾರು ಮಾಡಿದರು. ಇದರ ಫಲವಾಗಿ ಆಳವಾಗಿ ಬೇರೂರಿದ್ದ ಕಾಂಗ್ರೆಸ್ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರ ಕಳೆದುಕೊಂಡಿತು. ಮುಂದೆ ನಡೆದ ರೈತ ಸಂಘದ ಸಾಧನೆಗಳು ಮೆಲುಕು ಹಾಕಿ ಮರುಗುವಂತಹವು!

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ. ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ನರಗುಂದ ರೈತ ಬಂಡಾಯ ಮತ್ತು ಫಸಲುಗಳ ಬೆಲೆ ಪ್ರಶ್ನೆ; ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...