Homeಮುಖಪುಟಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಈ ರೀತಿಯ ಘಟನೆಗಳು ಬೇರೆಡೆಯೂ ನಡೆದಿವೆ ಎಂದು ಹೇಳುವ ಮೂಲಕ ಮಣಿಪುರದಲ್ಲಿ ನಡೆದ ಅಮಾನವೀಯ ಕ್ರೌರ್ಯಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೂವರು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣದ ಅರ್ಜಿ ಆಲಿಸಿದ ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠವು, “ದೇಶದ ಎಲ್ಲಾ ಭಾಗಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ ಎಂಬ ಸತ್ಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಮಣಿಪುರದಂತಹ ದೇಶದ ಒಂದು ಭಾಗದಲ್ಲಿ ನಡೆಯುತ್ತಿರುವ ಇಂತಹ ಅಪರಾಧಗಳು ಇನ್ನೊಂದರಲ್ಲಿಯೂ ನಡೆಯುತ್ತಿದೆ ಎಂಬ ಕಾರಣಕ್ಕೆ ನಿಮ್ಮನ್ನು ಕ್ಷಮಿಸಲು ಸಾಧ್ಯವಿಲ್ಲ. ನಾವು ಮಣಿಪುರದೊಂದಿಗೆ ಹೇಗೆ ವ್ಯವಹರಿಸುತ್ತೇವೆ ಎಂಬುದು ಪ್ರಶ್ನೆಯಾಗಿದೆ. ಆ ಕುರಿತು ಮಾತನಾಡಿ. ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ರಕ್ಷಿಸಿ ಎಂದು ನೀವು ಹೇಳುತ್ತಿದ್ದೀರಾ ಅಥವಾ ಯಾರನ್ನೂ ರಕ್ಷಿಸಬೇಡಿ ಎಂದು ಹೇಳುತ್ತಿದ್ದೀರಾ?” ಎಂದು ಸಿಜೆಐ ಪ್ರಶ್ನಿಸಿದರು.

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಚತ್ತೀಸ್‌ಘಡ ಸೇರಿದಂತೆ ದೇಶದ ಎಲ್ಲೆಡೆ ನಡೆಯುತ್ತಿವೆ ಎಂಬ ಸರ್ಕಾರದ ಪರವಾಗಿನ ವಕೀಲರ ವಾದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, “ನಾವು ಮಣಿಪುರದಲ್ಲಿ ಸಂಕಷ್ಟದ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ಮರೆಯಬಾರದು” ಎಂದಿದ್ದಾರೆ.

ನಾಗರಿಕ ಸಮಾಜದ ಗುಂಪುಗಳ ಪ್ರತಿರೋಧದಿಂದಾಗಿ ಮಣಿಪುರ ಲೈಂಗಿಕ ದೌರ್ಜನ್ಯದ ಸಂತ್ರಸ್ತರನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಮಣಿಪುರದಲ್ಲಿ ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳು ಎಷ್ಟು ದಾಖಲಾಗಿವೆ ಎಂದು ಹೇಳಲು ಸರ್ಕಾರದ ಬಳಿ ಈಗ ಮಾಹಿತಿ ಇಲ್ಲ. ಹಿಂಸಾಚಾರ ಎಸಗಿದ ಅಪರಾಧಿಗಳೊಂದಿಗೆ ಪೊಲೀಸರು ಸಹಕರಿಸುತ್ತಿದ್ದಾರೆ. ಮಹಿಳೆಯರು ಪೊಲೀಸರಿಂದ ರಕ್ಷಣೆ ಕೋರಿದರು, ಆದರೆ ಪೊಲೀಸರು ಅವರನ್ನು ಉನ್ಮತ್ತ ಗುಂಪಿನತ್ತ ಕರೆದೊಯ್ದರು. ಇದು ಅವರ ಕಾನೂನು ಸುವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ ಎಂದು ಮಹಿಳೆಯರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತರು ತಮ್ಮ ಗುರುತನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯದ ದಾಖಲೆಗಳಲ್ಲಿ ಇಬ್ಬರು ಮಹಿಳೆಯರನ್ನು “X” ಮತ್ತು “Y” ಎಂದು ಉಲ್ಲೇಖಿಸಲಾಗಿದೆ. ಐಜಿ ಶ್ರೇಣಿಯ ಪೊಲೀಸ್ ಅಧಿಕಾರಿಯ ನೇತೃತ್ವದ ಸ್ವತಂತ್ರ ಎಸ್‌ಐಟಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಮತ್ತು ವಿಚಾರಣೆಯನ್ನು ರಾಜ್ಯದ ಹೊರಗೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದಾರೆ. ರಾಜ್ಯ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ತಿಳಿಸಿದ ಅವರು, ತಮಗೆ ಭದ್ರತೆ ಮತ್ತು ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಹತ್ತಿರದ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನವನ್ನು ಕೋರಿದ್ದಾರೆ. ಕೇಂದ್ರವು ಈಗಾಗಲೇ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.

ಜುಲೈ 20 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಚಂದ್ರಚೂಡ್‌ರವರು ನೀವು ಕ್ರಮ ಕೈಗೊಳ್ಳದಿದ್ದರೆ ನಾವು ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ನಂತರ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ.

ಇದನ್ನೂ ಓದಿ; INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...