Homeಮುಖಪುಟಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಈ ರೀತಿಯ ಘಟನೆಗಳು ಬೇರೆಡೆಯೂ ನಡೆದಿವೆ ಎಂದು ಹೇಳುವ ಮೂಲಕ ಮಣಿಪುರದಲ್ಲಿ ನಡೆದ ಅಮಾನವೀಯ ಕ್ರೌರ್ಯಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೂವರು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಪ್ರಕರಣದ ಅರ್ಜಿ ಆಲಿಸಿದ ಸಿಜೆಐ ಚಂದ್ರಚೂಡ್ ನೇತೃತ್ವದ ಪೀಠವು, “ದೇಶದ ಎಲ್ಲಾ ಭಾಗಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ನಡೆಯುತ್ತಿವೆ ಎಂಬ ಸತ್ಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಮಣಿಪುರದಂತಹ ದೇಶದ ಒಂದು ಭಾಗದಲ್ಲಿ ನಡೆಯುತ್ತಿರುವ ಇಂತಹ ಅಪರಾಧಗಳು ಇನ್ನೊಂದರಲ್ಲಿಯೂ ನಡೆಯುತ್ತಿದೆ ಎಂಬ ಕಾರಣಕ್ಕೆ ನಿಮ್ಮನ್ನು ಕ್ಷಮಿಸಲು ಸಾಧ್ಯವಿಲ್ಲ. ನಾವು ಮಣಿಪುರದೊಂದಿಗೆ ಹೇಗೆ ವ್ಯವಹರಿಸುತ್ತೇವೆ ಎಂಬುದು ಪ್ರಶ್ನೆಯಾಗಿದೆ. ಆ ಕುರಿತು ಮಾತನಾಡಿ. ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ರಕ್ಷಿಸಿ ಎಂದು ನೀವು ಹೇಳುತ್ತಿದ್ದೀರಾ ಅಥವಾ ಯಾರನ್ನೂ ರಕ್ಷಿಸಬೇಡಿ ಎಂದು ಹೇಳುತ್ತಿದ್ದೀರಾ?” ಎಂದು ಸಿಜೆಐ ಪ್ರಶ್ನಿಸಿದರು.

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಚತ್ತೀಸ್‌ಘಡ ಸೇರಿದಂತೆ ದೇಶದ ಎಲ್ಲೆಡೆ ನಡೆಯುತ್ತಿವೆ ಎಂಬ ಸರ್ಕಾರದ ಪರವಾಗಿನ ವಕೀಲರ ವಾದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್, “ನಾವು ಮಣಿಪುರದಲ್ಲಿ ಸಂಕಷ್ಟದ ಸ್ಥಿತಿಯಲ್ಲಿದ್ದೇವೆ ಎಂಬುದನ್ನು ಮರೆಯಬಾರದು” ಎಂದಿದ್ದಾರೆ.

ನಾಗರಿಕ ಸಮಾಜದ ಗುಂಪುಗಳ ಪ್ರತಿರೋಧದಿಂದಾಗಿ ಮಣಿಪುರ ಲೈಂಗಿಕ ದೌರ್ಜನ್ಯದ ಸಂತ್ರಸ್ತರನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಮಣಿಪುರದಲ್ಲಿ ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳು ಎಷ್ಟು ದಾಖಲಾಗಿವೆ ಎಂದು ಹೇಳಲು ಸರ್ಕಾರದ ಬಳಿ ಈಗ ಮಾಹಿತಿ ಇಲ್ಲ. ಹಿಂಸಾಚಾರ ಎಸಗಿದ ಅಪರಾಧಿಗಳೊಂದಿಗೆ ಪೊಲೀಸರು ಸಹಕರಿಸುತ್ತಿದ್ದಾರೆ. ಮಹಿಳೆಯರು ಪೊಲೀಸರಿಂದ ರಕ್ಷಣೆ ಕೋರಿದರು, ಆದರೆ ಪೊಲೀಸರು ಅವರನ್ನು ಉನ್ಮತ್ತ ಗುಂಪಿನತ್ತ ಕರೆದೊಯ್ದರು. ಇದು ಅವರ ಕಾನೂನು ಸುವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ ಎಂದು ಮಹಿಳೆಯರನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತರು ತಮ್ಮ ಗುರುತನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯದ ದಾಖಲೆಗಳಲ್ಲಿ ಇಬ್ಬರು ಮಹಿಳೆಯರನ್ನು “X” ಮತ್ತು “Y” ಎಂದು ಉಲ್ಲೇಖಿಸಲಾಗಿದೆ. ಐಜಿ ಶ್ರೇಣಿಯ ಪೊಲೀಸ್ ಅಧಿಕಾರಿಯ ನೇತೃತ್ವದ ಸ್ವತಂತ್ರ ಎಸ್‌ಐಟಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಮತ್ತು ವಿಚಾರಣೆಯನ್ನು ರಾಜ್ಯದ ಹೊರಗೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದಾರೆ. ರಾಜ್ಯ ಪೊಲೀಸರ ಮೇಲೆ ತಮಗೆ ನಂಬಿಕೆ ಇಲ್ಲ ಎಂದು ತಿಳಿಸಿದ ಅವರು, ತಮಗೆ ಭದ್ರತೆ ಮತ್ತು ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಹತ್ತಿರದ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನವನ್ನು ಕೋರಿದ್ದಾರೆ. ಕೇಂದ್ರವು ಈಗಾಗಲೇ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.

ಜುಲೈ 20 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಚಂದ್ರಚೂಡ್‌ರವರು ನೀವು ಕ್ರಮ ಕೈಗೊಳ್ಳದಿದ್ದರೆ ನಾವು ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ನಂತರ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ.

ಇದನ್ನೂ ಓದಿ; INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...