Homeಮುಖಪುಟತೀಸ್ತಾ ಎಂಬ ಬತ್ತಲಾರದ ನದಿ

ತೀಸ್ತಾ ಎಂಬ ಬತ್ತಲಾರದ ನದಿ

- Advertisement -
- Advertisement -

ಈಚೆಗೆ ಶೆಮೆಜ್ ವಿ.ಎಂ. ಎಂಬ ಕೇರಳ ಮೂಲದ ಫೇಸ್‌ಬುಕ್ ಗೆಳೆಯರೊಬ್ಬರು, ತೀಸ್ತಾ ಅವರ ಬಗ್ಗೆ ಬರೆದ ಟಿಪ್ಪಣಿಯನ್ನು ಓದಿದೆ. ಅದೊಂದು ಕತೆಯ ರೂಪದಲ್ಲಿದೆ. ಅವರಿಗೆ ಈ ಕತೆಯನ್ನು ಅವರ ಗೆಳೆಯರೊಬ್ಬರು ಹೇಳಿದ್ದು. ಈ ಕತೆ ಪ್ರಾಚೀನ ತಮಿಳಿನ ಮಣಿಮೇಖಲೈ ಎಂಬ ಮಹಾಕಾವ್ಯದ ನಾಯಕಿ ಮಣಿಮೇಖಲೈಗೆ ಸಂಬಂಧಿಸಿದ್ದು. ಮಣಿಮೇಖಲೈ, ತಮಿಳುನಾಡಿನ ಪ್ರಸಿದ್ಧ ವಣಿಕ ಕುಲದ ಕೋವಲನ್ ಮತ್ತು ಮಾಧವಿಯವರ ಮಗಳು. ಪ್ರಭುತ್ವದಿಂದ ಬೇಟೆಗೆ ಒಳಗಾದ ಬಲಿಪಶುಗಳ ಪರವಾಗಿ ನಿಲ್ಲುವ ನ್ಯಾಯಪ್ರಜ್ಞೆಯಿದ್ದ ಹುಡುಗಿ. ಇವಳ ಬಗ್ಗೆ ಆ ಸೀಮೆಯ ದೊರೆಯ ಮಗ ಉದಯಕುಮಾರನಿಗೆ ಸುದ್ದಿ ಹೋಗುತ್ತದೆ. ಆತ ದೊಡ್ಡ ವ್ಯಾಪಾರಿಗಳ ಹಿತರಕ್ಷಕ. ಮಣಿಮೇಖಲೈಗೆ ಎಲ್ಲ ಧರ್ಮಗಳ ಬಗ್ಗೆ, ಅವನ್ನು ಅನುಸರಿಸುವ ಜನರ ಬಗ್ಗೆ ಗೌರವ. ಆದರೆ ಅವಳನ್ನು ದ್ವೇಷಿಸುವ ರಾಜಕುಮಾರ ಉದಯಕುಮಾರನಿಗೆ ತನ್ನ ಜತೆ ಬದುಕುತ್ತಿರುವ ಇತರ ಧರ್ಮೀಯರ ಬಗ್ಗೆ ಅಸಹನೆ. ಬಲಿಪಶುಗಳನ್ನು ಸದಾ ರಕ್ಷಿಸುವ ಮಣಿಮೇಖಲೈಗೆ ಶಿಕ್ಷಿಸಲು ಉದಯಕುಮಾರನು ಜನರನ್ನು ಬಿಟ್ಟು ಆಕೆಯನ್ನು ಹುಡುಕಿಸುತ್ತಾನೆ. ಮಣಿಮೇಖಲೈ ತನ್ನನ್ನು ಹುಡುಕುತ್ತಿರುವ ಉದಯಕುಮಾರನಿಂದ ತಪ್ಪಿಸಿಕೊಳ್ಳಲು ತನ್ನ ತಾಯ್ನಾಡಿನ ನ್ಯಾಯದೇವತೆಗಳಲ್ಲಿ ಬೇಡುತ್ತಾಳೆ. ಆ ನ್ಯಾಯದೇವತೆಗಳು ಆಕೆಗೆ ಭಯಮೀರಲು ಕೆಲವು ಮಂತ್ರಗಳನ್ನು ಹೇಳಿಕೊಡುವರು. ಒಬ್ಬ ದೇವತೆ ಆಕೆಗೆ ಶತ್ರುಗಳು ಬಂದಾಗ ತಪ್ಪಿಸಿಕೊಳ್ಳಲು ಕಾಣದಂತೆ ಅದೃಶ್ಯವಾಗುವ ಮಂತ್ರ ಹೇಳಿಕೊಡುವಳು. ಅವಳು ಇನ್ನೊಂದು ವೇಷದಲ್ಲಿ ಮುಖದೋರುವಂತೆ ಮಾಡುವುದು; ಸದಾ ಅನ್ನದಿಂದ ತುಂಬಿರುವ ಒಂದು ಮಾಂತ್ರಿಕ ಬಟ್ಟಲನ್ನು ಕೊಡುವುದು ಹೀಗೆ. ಮಣಿಮೇಖಲೈ ಇರುವ ದ್ವೀಪಕ್ಕೆ ಉದಯಕುಮಾರನೂ ಅವನ ಮಂತ್ರಿ ದೊರೆಗಳು ಆಕೆಯನ್ನು ಬಂಧಿಸಲು ಮುಟ್ಟಿದಾಗ, ಮಣಿಮೇಖಲೈ ಅಂತರ್ಧಾನವಾಗುತ್ತಾಳೆ. ಈ ಕಥೆಯನ್ನು ಹೇಳುವ ಶೆಮೆಜ್ ಅವರ ಗೆಳೆಯ, ’ಇದೊಂದು ಕೃತಜ್ಞತೆಯಿಲ್ಲದ ಜಗತ್ತು. ಯಾರಿಗಾದರೂ ಯಾರು ಯಾಕೆ ನೆರವಾಗಬೇಕು. ಈ ಕೃತಜ್ಞತೆಯಿಲ್ಲದ ಜನರು ಇಂತಹ ನೆರವಿಗೆ ಅರ್ಹರೇ?’ ಎಂದು ಕತೆಯನ್ನು ಮುಗಿಸುತ್ತಾರೆ.

ಈ ಕತೆಯನ್ನು ಓದಿದ ಮೇಲೆ, ಹೌದಲ್ಲ, ಯಾವ ಜನರಿಗಾಗಿ ತೀಸ್ತಾ ನೆರವಾಗುತ್ತಿದ್ದಾರೊ, ಆ ಜನರಿಗೆ ತೀಸ್ತಾ ಬಗ್ಗೆ ಗೊತ್ತಿದೆಯೇ? ಗೊತ್ತಿದ್ದರೆ ಅವರು ಯಾವ ಬಗೆಯಲ್ಲಿ ಆಕೆಗೆ ಸ್ಪಂದಿಸುತ್ತಿದ್ದಾರೆ? ಗುಜರಾತಿನ ದಂಗೆಯ ಬಲಿಪಶುಗಳು ತೀಸ್ತಾ ಅವರಿಗೆ ಹೇಗೆ ಸ್ಪಂದಿಸುತ್ತಿದ್ದಾರೆಯೊ ನಮಗೆ ತಿಳಿದಿಲ್ಲ. ಆದರೆ ಜನರಿಗಾಗಿ ಹೋರಾಟ ಮಾಡುವ ಚಳವಳಿಗಾರರ ಬಗ್ಗೆ ಸಮಾಜದಲ್ಲಿ-ಕೊನೆಯ ಪಕ್ಷ ಅವರ ಹೋರಾಟದ ಫಲಾನುಭವಿಗಳಲ್ಲಿ- ಕೃತಜ್ಞತೆಯಿಲ್ಲದ ನಿರಾಸಕ್ತಿ ನಿರ್ಲಿಪ್ತತೆ ಬಂದಿದೆಯೇ ಎಂಬ ಪ್ರಶ್ನೆ ಕಾಡಿತು. ಇದು ಇತ್ತೀಚಿಗೆ ಅನಾಥರಂತೆ ಸತ್ತುಹೋದ ಪಟ್ಟಾಭಿರಾಮ ಸೋಮಯಾಜಿ ಅವರ ಬಗ್ಗೆ ಕೂಡ ಅನಿಸಿತು. ಪಟ್ಟಾಭಿಯವರು ಕಾಲೇಜಿಗೆ ರಜೆ ಹಾಕಿ, ಸ್ವಂತ ಖರ್ಚು ಇಟ್ಟುಕೊಂಡು ಪ್ರಯಾಣ ಮಾಡಿಬಂದು ಈ ನಾಡಿನ ಎಷ್ಟೊಂದು ಚಳುವಳಿಗಳಲ್ಲಿ ಭಾಗವಹಿಸಿದರು. ಅವರ ಸಾವಿಗೆ ನಾಡಿನ ಜನ, ಇದೂ ಒಂದು ಸಾವು ಎಂಬಂತೆ ನಿರ್ಲಿಪ್ತವಾಗಿ ಮಿಡಿದರೇನು? ನನಗೆ ಅನೇಕ ಸಲ ಮುಸ್ಲಿಮ್ ಸಮುದಾಯವು ತನ್ನ ನಾಯಕರನ್ನು ಶೋಧಿಸಿಕೊಳ್ಳಬೇಕಿದೆ ಎಂದು ಅನಿಸುತ್ತದೆ. ಅದು ಟಿಪ್ಪುಸುಲ್ತಾನ್‌ಗಿಂತ ಮುಖ್ಯವಾಗಿ ಮೊದಲು ಶಿಕ್ಷಕಿ ಫಾತಿಮಾಶೇಖರನ್ನು, ಅಲಿಘರ್ ವಿಶ್ವವಿದ್ಯಾಲಯ ಸ್ಥಾಪಿಸಿದ ಸರ್ ಸೈಯದ್ ಅವರನ್ನು ತನ್ನ ಸಾಂಸ್ಕೃತಿಕ ನಾಯಕರೆಂದು ಪರಿಭಾವಿಸಬೇಕು ಅನಿಸುತ್ತದೆ. ಮುಸ್ಲಿಮರಿಗಾಗಿ ಜೀವನಪೂರಾ ಹೋರಾಡಿದ ಗಾಂಧಿಯವರನ್ನು ಮುಸ್ಲಿಮ್ ಸಮುದಾಯವು ತನ್ನ ಹಿತರಕ್ಷಕ ಎಂದು ಭಾವಿಸಿದಂತಿಲ್ಲ. ಗುಜರಾತಿನ ಹತ್ಯಾಕಾಂಡಗಳ ವಿರುದ್ಧ ಪ್ರಭುತ್ವದ ವಿರುದ್ಧ ಹೋರಾಡಿ, ಜೈಲುಗಳಲ್ಲಿ ಕೊಳೆಯುತ್ತಿರುವ ಸಂಜೀವಭಟ್, ಕುಮಾರ್, ಉಮರ್ ಖಾಲಿದ್; ಕೋರ್ಟುಕಟ್ಟೆ ಸುತ್ತುತ್ತಿರುವ ತೀಸ್ತಾ; ಕೊಲೆಯಾದ ಗೌರಿ, ಪನ್ಸಾರೆ ಮೊದಲಾದವರು ಪ್ರಜ್ಞಾವಂತ ಮುಸ್ಲಿಮರಿಗೆ ಗೊತ್ತಿರುವ ಹೆಸರೇ ಹೊರತು, ಸಮುದಾಯಕ್ಕಲ್ಲ. ಇದು ಅಜ್ಞಾನದ ಫಲವೊ, ಸರಿಯಾದ ನಾಯಕರನ್ನು ಗುರುತಿಸಿಕೊಳ್ಳಲಾಗದ ರಾಜಕೀಯ ಪ್ರಜ್ಞೆಯ ಕೊರತೆಯೊ, ಕೃತಘ್ನತೆಯೊ? ದಲಿತ, ರೈತ, ಮುಸ್ಲಿಂ, ಮಹಿಳೆ, ಬುಡಕಟ್ಟು- ಹೀಗೆ ನಿರ್ದಿಷ್ಟ ಸಮುದಾಯಕ್ಕೆ ಜಾತ್ಯತೀತವಾಗಿ ಧರ್ಮಾತೀತವಾಗಿ ಕೇವಲ ನ್ಯಾಯಪ್ರಜ್ಞೆಯಿಂದ ಹೋರಾಡುವ ಚಳವಳಿಗಾರರಿಗೆ, ಆ ಸಮುದಾಯಗಳು ಮಾತ್ರ ನೈತಿಕ ಬೆಂಬಲ ಕೊಡಬೇಕು ಎಂಬುದು ಇಲ್ಲಿನ ಅರ್ಥವಲ್ಲ. ಪ್ರಜಾಪ್ರಭುತ್ವ, ಸಮಾನತೆ, ಸ್ವಾತಂತ್ರ್ಯ, ಸೋದರತೆಯಲ್ಲಿ ನಂಬಿಕೆಯಿಟ್ಟ ಎಲ್ಲರೂ ಬೆಂಬಲಿಸಬೇಕಾದ ಸಂಗತಿಯಿದು. ಚಂದ್ರಶೇಖರ್ ರಾವಣ್ ಅವರ ಮೇಲಿನ ಹಲ್ಲೆಯು ಕೇವಲ ದಲಿತರಿಗೆ ಮಾತ್ರ ಸಂಬಂಧಿಸಿದ್ದಲ್ಲ. ದುಷ್ಟಪ್ರಭುತ್ವದ ವಿರುದ್ಧ ಬಲಿಪಶುವಾಗುವ ಜನರ ಪರವಾಗಿ ಚಿಂತಿಸುವ, ಕೆಲಸ ಮಾಡುವ ನಮಗೆಲ್ಲ ಸಂಬಂಧಿಸಿದ್ದು.

ಸಂಜೀವಭಟ್, ಉಮರ್ ಖಾಲಿದ್

ಈಚೆಗೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲವಾಡ್ ಅವರಿಗೆ ಗುಜರಾತ್ ಕೋರ್ಟು ಜಾಮೀನನ್ನು ರದ್ದುಗೊಳಿಸಿ ಕೂಡಲೇ ಶರಣಾಗಬೇಕೆಂದು ವಿಧಿಸಿತು. ಈ ನಡುವೆ ಸುಪ್ರೀಂಕೋರ್ಟು ಇದಕ್ಕೆ ಒಂದು ವಾರಕಾಲ ತಡೆನೀಡಿತು. ವಾರದ ಬಳಿಕ ಮತ್ತೇನಾಗುವುದೊ ತಿಳಿಯದು. ಆದರೆ ತೀಸ್ತಾ ಅವರ ಬಂಧನ-ಜಾಮೀನು-ಬಿಡುಗಡೆಗಳ ಈ ನಾಟಕೀಯ ಆವರ್ತನೆ ಒಂದು ಬಗೆಯಲ್ಲಿ ನಮಗೆ ಮಾಮೂಲಿ ಸುದ್ದಿಯಾಗುತ್ತಿದೆ. ರೈತರ ಆತ್ಮಹತ್ಯೆಯಂತೆ, ಮತೀಯವಾದಿಗಳಿಂದ ಮುಸ್ಲಿಮರಿಗೆ ವ್ಯಾಪಾರ ಬಹಿಷ್ಕಾರ ಕೊಡುವ ಕರೆಯಂತೆ, ಮಹಿಳಾ ಕ್ರೀಡಾಪಟುವಿಗೆ ಆಗುವ ಲೈಂಗಿಕ ಕಿರುಕುಳದಂತೆ, ಜಾತಿವಾದಿಗಳಿಂದ ದಲಿತರ ಮೇಲೆ ನಡೆವ ಹಲ್ಲೆಯಂತೆ. ಸಮಾಜದ ಹಿಂಸೆ ಮತ್ತು ಅದರ ವಿರುದ್ಧ ಹೋರಾಡುವವರಿಗೆ ಪ್ರಭುತ್ವ ಕೊಡುವ ಶಿಕ್ಷೆಗಳಿಗೆ ಸಮಾಜವು ತನ್ನ ಸಂವೇದನಾಶೀಲತೆ ಕಳೆದುಕೊಳ್ಳುವುದು, ಮಾಮೂಲಿ ಎಂದು ಭಾವಿಸುವುದು ಘೋರವಾದ ಸಂಗತಿ. ಇದು ಪರೋಕ್ಷವಾಗಿ ಪ್ರಭುತ್ವಕ್ಕೆ ತನ್ನ ಕ್ರೌರ್ಯವನ್ನು ಮುಂದುವರಿಸಲು ನಾಗರಿಕ ಸಮಾಜ ಕೊಡುವ ಸಮ್ಮತಿ ಕೂಡ. ಮಾರುಕಟ್ಟೆ ಸಂಸ್ಕೃತಿಯು ಲಾಭವನ್ನು ದೊಡ್ಡ ಮೌಲ್ಯವಾಗಿಸಿದೆ ಮತ್ತು ವ್ಯಕ್ತಿವಾದವನ್ನು ದೊಡ್ಡ ಸಂಗತಿಯಾಗಿಸಿದೆ. ಇದರ ಪರಿಣಾಮವೆಂದರೆ, ಮತ್ತೊಬ್ಬರ ನೋವಿಗೆ ಮಿಡಿವ ಗುಣವೇ ಕಡಿಮೆಯಾಗುತ್ತಿರುವುದು. ಇದು ಕೂಡ ಪ್ರಭುತ್ವದ ಕ್ರೌರ್ಯವನ್ನು ಒಂದು ಬಗೆಯಲ್ಲಿ ಪರೋಕ್ಷವಾಗಿ ಬೆಂಬಲಿಸುತ್ತಿರುವ ಸಂಗತಿಯಾಗಿದೆ.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದ ಸುಪ್ರೀಂ

ಇದಕ್ಕೆ ಪ್ರತಿಯಾದ ಘಟನೆಗಳೂ ನಡೆಯುತ್ತಿವೆ. ಈಚೆಗೆ ಯಲಬುರ್ಗ ತಾಲೂಕಿನ ಹಿರೇವಂಕಲಕುಂಟಾ ಎಂಬ ಹಳ್ಳಿಯಲ್ಲಿ ಒಬ್ಬ ಶಿಕ್ಷಕನ ನಿವೃತ್ತಿಯಾದಾಗ ನಡೆದ ಕಾರ್ಯಕ್ರಮದಲ್ಲಿ ಐದು ಸಾವಿರ ಜನ ಸೇರಿದ್ದರು. ಅದು ಸಾಹಿತ್ಯ ಸಮ್ಮೇಳನದ ಹಾಗೆ ಜರುಗಿತು. 40 ವರ್ಷಗಳಿಂದ ಸದರಿ ಶಿಕ್ಷಕನಿಂದ ಕಲಿತ ಶಿಷ್ಯರು ಅವರ ಪೋಷಕರು ದೇಶದ ಎಲ್ಲ ಮೂಲೆಗಳಿಂದ ಬಂದಿದ್ದರು. ಅವರು ಶಿಕ್ಷಕನಿಗೆ ಊರಿಗೆ ಮರಳಿಹೋಗದಂತೆ ಅಲ್ಲೇ ಮನೆ ಕಟ್ಟಿಸಿಕೊಡುತ್ತಿದ್ದಾರಂತೆ. ಕೃತಜ್ಞತೆಯು ಒಂದು ಮೌಲ್ಯವಾಗಿ ಈ ಸಮಾಜದಿಂದ ಕಣ್ಮರೆಯಾಗಿಲ್ಲ. ಆದರೆ ಪ್ರಭುತ್ವದ ವಿರುದ್ಧ ಸಿಟ್ಟು, ಜನರ ಪರವಾಗಿ ಕೆಲಸ ಮಾಡುವವರ ಬಗೆಗಿನ ಕೃತಜ್ಞತೆಗಳು, ಹೊರಹೊಮ್ಮುವ ಸೂಕ್ತ ಕಾಲಕ್ಕಾಗಿ ಕಾಯುತ್ತವೆಯೇ? ಕೃತಜ್ಞತೆ ಸಲ್ಲಿಕೆಯು ಪ್ರಭುತ್ವದ ವಿರುದ್ಧದ ಪ್ರತಿರೋಧದ ಭಾಗವಾದಾಗ, ಉತ್ಕಟವಾಗಿ ಪ್ರಕಟವಾಗದೆ ಹೋಗುತ್ತದೆಯೇ? ಹೋರಾಟಗಾರರಿಗೆ ಅನ್ನದ ಬಟ್ಟಲನ್ನು, ಅದೃಶ್ಯ ಶಕ್ತಿಯನ್ನು ಜನರು ಕೊಡದೆ ಅವರು ಕೇವಲ ನಿರಾಶಾದಾಯಕ ಸನ್ನಿವೇಶದಲ್ಲಿ ಹೋರಾಡುತ್ತಿದ್ದಾರೆ ಎಂಬುದು ನಮ್ಮ ತಪ್ಪು ಗ್ರಹಿಕೆಯೇ? ವಿಚಾರ ಮಾಡಬೇಕು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...