Homeಮುಖಪುಟತೀಸ್ತಾ ಎಂಬ ಬತ್ತಲಾರದ ನದಿ

ತೀಸ್ತಾ ಎಂಬ ಬತ್ತಲಾರದ ನದಿ

- Advertisement -
- Advertisement -

ಈಚೆಗೆ ಶೆಮೆಜ್ ವಿ.ಎಂ. ಎಂಬ ಕೇರಳ ಮೂಲದ ಫೇಸ್‌ಬುಕ್ ಗೆಳೆಯರೊಬ್ಬರು, ತೀಸ್ತಾ ಅವರ ಬಗ್ಗೆ ಬರೆದ ಟಿಪ್ಪಣಿಯನ್ನು ಓದಿದೆ. ಅದೊಂದು ಕತೆಯ ರೂಪದಲ್ಲಿದೆ. ಅವರಿಗೆ ಈ ಕತೆಯನ್ನು ಅವರ ಗೆಳೆಯರೊಬ್ಬರು ಹೇಳಿದ್ದು. ಈ ಕತೆ ಪ್ರಾಚೀನ ತಮಿಳಿನ ಮಣಿಮೇಖಲೈ ಎಂಬ ಮಹಾಕಾವ್ಯದ ನಾಯಕಿ ಮಣಿಮೇಖಲೈಗೆ ಸಂಬಂಧಿಸಿದ್ದು. ಮಣಿಮೇಖಲೈ, ತಮಿಳುನಾಡಿನ ಪ್ರಸಿದ್ಧ ವಣಿಕ ಕುಲದ ಕೋವಲನ್ ಮತ್ತು ಮಾಧವಿಯವರ ಮಗಳು. ಪ್ರಭುತ್ವದಿಂದ ಬೇಟೆಗೆ ಒಳಗಾದ ಬಲಿಪಶುಗಳ ಪರವಾಗಿ ನಿಲ್ಲುವ ನ್ಯಾಯಪ್ರಜ್ಞೆಯಿದ್ದ ಹುಡುಗಿ. ಇವಳ ಬಗ್ಗೆ ಆ ಸೀಮೆಯ ದೊರೆಯ ಮಗ ಉದಯಕುಮಾರನಿಗೆ ಸುದ್ದಿ ಹೋಗುತ್ತದೆ. ಆತ ದೊಡ್ಡ ವ್ಯಾಪಾರಿಗಳ ಹಿತರಕ್ಷಕ. ಮಣಿಮೇಖಲೈಗೆ ಎಲ್ಲ ಧರ್ಮಗಳ ಬಗ್ಗೆ, ಅವನ್ನು ಅನುಸರಿಸುವ ಜನರ ಬಗ್ಗೆ ಗೌರವ. ಆದರೆ ಅವಳನ್ನು ದ್ವೇಷಿಸುವ ರಾಜಕುಮಾರ ಉದಯಕುಮಾರನಿಗೆ ತನ್ನ ಜತೆ ಬದುಕುತ್ತಿರುವ ಇತರ ಧರ್ಮೀಯರ ಬಗ್ಗೆ ಅಸಹನೆ. ಬಲಿಪಶುಗಳನ್ನು ಸದಾ ರಕ್ಷಿಸುವ ಮಣಿಮೇಖಲೈಗೆ ಶಿಕ್ಷಿಸಲು ಉದಯಕುಮಾರನು ಜನರನ್ನು ಬಿಟ್ಟು ಆಕೆಯನ್ನು ಹುಡುಕಿಸುತ್ತಾನೆ. ಮಣಿಮೇಖಲೈ ತನ್ನನ್ನು ಹುಡುಕುತ್ತಿರುವ ಉದಯಕುಮಾರನಿಂದ ತಪ್ಪಿಸಿಕೊಳ್ಳಲು ತನ್ನ ತಾಯ್ನಾಡಿನ ನ್ಯಾಯದೇವತೆಗಳಲ್ಲಿ ಬೇಡುತ್ತಾಳೆ. ಆ ನ್ಯಾಯದೇವತೆಗಳು ಆಕೆಗೆ ಭಯಮೀರಲು ಕೆಲವು ಮಂತ್ರಗಳನ್ನು ಹೇಳಿಕೊಡುವರು. ಒಬ್ಬ ದೇವತೆ ಆಕೆಗೆ ಶತ್ರುಗಳು ಬಂದಾಗ ತಪ್ಪಿಸಿಕೊಳ್ಳಲು ಕಾಣದಂತೆ ಅದೃಶ್ಯವಾಗುವ ಮಂತ್ರ ಹೇಳಿಕೊಡುವಳು. ಅವಳು ಇನ್ನೊಂದು ವೇಷದಲ್ಲಿ ಮುಖದೋರುವಂತೆ ಮಾಡುವುದು; ಸದಾ ಅನ್ನದಿಂದ ತುಂಬಿರುವ ಒಂದು ಮಾಂತ್ರಿಕ ಬಟ್ಟಲನ್ನು ಕೊಡುವುದು ಹೀಗೆ. ಮಣಿಮೇಖಲೈ ಇರುವ ದ್ವೀಪಕ್ಕೆ ಉದಯಕುಮಾರನೂ ಅವನ ಮಂತ್ರಿ ದೊರೆಗಳು ಆಕೆಯನ್ನು ಬಂಧಿಸಲು ಮುಟ್ಟಿದಾಗ, ಮಣಿಮೇಖಲೈ ಅಂತರ್ಧಾನವಾಗುತ್ತಾಳೆ. ಈ ಕಥೆಯನ್ನು ಹೇಳುವ ಶೆಮೆಜ್ ಅವರ ಗೆಳೆಯ, ’ಇದೊಂದು ಕೃತಜ್ಞತೆಯಿಲ್ಲದ ಜಗತ್ತು. ಯಾರಿಗಾದರೂ ಯಾರು ಯಾಕೆ ನೆರವಾಗಬೇಕು. ಈ ಕೃತಜ್ಞತೆಯಿಲ್ಲದ ಜನರು ಇಂತಹ ನೆರವಿಗೆ ಅರ್ಹರೇ?’ ಎಂದು ಕತೆಯನ್ನು ಮುಗಿಸುತ್ತಾರೆ.

ಈ ಕತೆಯನ್ನು ಓದಿದ ಮೇಲೆ, ಹೌದಲ್ಲ, ಯಾವ ಜನರಿಗಾಗಿ ತೀಸ್ತಾ ನೆರವಾಗುತ್ತಿದ್ದಾರೊ, ಆ ಜನರಿಗೆ ತೀಸ್ತಾ ಬಗ್ಗೆ ಗೊತ್ತಿದೆಯೇ? ಗೊತ್ತಿದ್ದರೆ ಅವರು ಯಾವ ಬಗೆಯಲ್ಲಿ ಆಕೆಗೆ ಸ್ಪಂದಿಸುತ್ತಿದ್ದಾರೆ? ಗುಜರಾತಿನ ದಂಗೆಯ ಬಲಿಪಶುಗಳು ತೀಸ್ತಾ ಅವರಿಗೆ ಹೇಗೆ ಸ್ಪಂದಿಸುತ್ತಿದ್ದಾರೆಯೊ ನಮಗೆ ತಿಳಿದಿಲ್ಲ. ಆದರೆ ಜನರಿಗಾಗಿ ಹೋರಾಟ ಮಾಡುವ ಚಳವಳಿಗಾರರ ಬಗ್ಗೆ ಸಮಾಜದಲ್ಲಿ-ಕೊನೆಯ ಪಕ್ಷ ಅವರ ಹೋರಾಟದ ಫಲಾನುಭವಿಗಳಲ್ಲಿ- ಕೃತಜ್ಞತೆಯಿಲ್ಲದ ನಿರಾಸಕ್ತಿ ನಿರ್ಲಿಪ್ತತೆ ಬಂದಿದೆಯೇ ಎಂಬ ಪ್ರಶ್ನೆ ಕಾಡಿತು. ಇದು ಇತ್ತೀಚಿಗೆ ಅನಾಥರಂತೆ ಸತ್ತುಹೋದ ಪಟ್ಟಾಭಿರಾಮ ಸೋಮಯಾಜಿ ಅವರ ಬಗ್ಗೆ ಕೂಡ ಅನಿಸಿತು. ಪಟ್ಟಾಭಿಯವರು ಕಾಲೇಜಿಗೆ ರಜೆ ಹಾಕಿ, ಸ್ವಂತ ಖರ್ಚು ಇಟ್ಟುಕೊಂಡು ಪ್ರಯಾಣ ಮಾಡಿಬಂದು ಈ ನಾಡಿನ ಎಷ್ಟೊಂದು ಚಳುವಳಿಗಳಲ್ಲಿ ಭಾಗವಹಿಸಿದರು. ಅವರ ಸಾವಿಗೆ ನಾಡಿನ ಜನ, ಇದೂ ಒಂದು ಸಾವು ಎಂಬಂತೆ ನಿರ್ಲಿಪ್ತವಾಗಿ ಮಿಡಿದರೇನು? ನನಗೆ ಅನೇಕ ಸಲ ಮುಸ್ಲಿಮ್ ಸಮುದಾಯವು ತನ್ನ ನಾಯಕರನ್ನು ಶೋಧಿಸಿಕೊಳ್ಳಬೇಕಿದೆ ಎಂದು ಅನಿಸುತ್ತದೆ. ಅದು ಟಿಪ್ಪುಸುಲ್ತಾನ್‌ಗಿಂತ ಮುಖ್ಯವಾಗಿ ಮೊದಲು ಶಿಕ್ಷಕಿ ಫಾತಿಮಾಶೇಖರನ್ನು, ಅಲಿಘರ್ ವಿಶ್ವವಿದ್ಯಾಲಯ ಸ್ಥಾಪಿಸಿದ ಸರ್ ಸೈಯದ್ ಅವರನ್ನು ತನ್ನ ಸಾಂಸ್ಕೃತಿಕ ನಾಯಕರೆಂದು ಪರಿಭಾವಿಸಬೇಕು ಅನಿಸುತ್ತದೆ. ಮುಸ್ಲಿಮರಿಗಾಗಿ ಜೀವನಪೂರಾ ಹೋರಾಡಿದ ಗಾಂಧಿಯವರನ್ನು ಮುಸ್ಲಿಮ್ ಸಮುದಾಯವು ತನ್ನ ಹಿತರಕ್ಷಕ ಎಂದು ಭಾವಿಸಿದಂತಿಲ್ಲ. ಗುಜರಾತಿನ ಹತ್ಯಾಕಾಂಡಗಳ ವಿರುದ್ಧ ಪ್ರಭುತ್ವದ ವಿರುದ್ಧ ಹೋರಾಡಿ, ಜೈಲುಗಳಲ್ಲಿ ಕೊಳೆಯುತ್ತಿರುವ ಸಂಜೀವಭಟ್, ಕುಮಾರ್, ಉಮರ್ ಖಾಲಿದ್; ಕೋರ್ಟುಕಟ್ಟೆ ಸುತ್ತುತ್ತಿರುವ ತೀಸ್ತಾ; ಕೊಲೆಯಾದ ಗೌರಿ, ಪನ್ಸಾರೆ ಮೊದಲಾದವರು ಪ್ರಜ್ಞಾವಂತ ಮುಸ್ಲಿಮರಿಗೆ ಗೊತ್ತಿರುವ ಹೆಸರೇ ಹೊರತು, ಸಮುದಾಯಕ್ಕಲ್ಲ. ಇದು ಅಜ್ಞಾನದ ಫಲವೊ, ಸರಿಯಾದ ನಾಯಕರನ್ನು ಗುರುತಿಸಿಕೊಳ್ಳಲಾಗದ ರಾಜಕೀಯ ಪ್ರಜ್ಞೆಯ ಕೊರತೆಯೊ, ಕೃತಘ್ನತೆಯೊ? ದಲಿತ, ರೈತ, ಮುಸ್ಲಿಂ, ಮಹಿಳೆ, ಬುಡಕಟ್ಟು- ಹೀಗೆ ನಿರ್ದಿಷ್ಟ ಸಮುದಾಯಕ್ಕೆ ಜಾತ್ಯತೀತವಾಗಿ ಧರ್ಮಾತೀತವಾಗಿ ಕೇವಲ ನ್ಯಾಯಪ್ರಜ್ಞೆಯಿಂದ ಹೋರಾಡುವ ಚಳವಳಿಗಾರರಿಗೆ, ಆ ಸಮುದಾಯಗಳು ಮಾತ್ರ ನೈತಿಕ ಬೆಂಬಲ ಕೊಡಬೇಕು ಎಂಬುದು ಇಲ್ಲಿನ ಅರ್ಥವಲ್ಲ. ಪ್ರಜಾಪ್ರಭುತ್ವ, ಸಮಾನತೆ, ಸ್ವಾತಂತ್ರ್ಯ, ಸೋದರತೆಯಲ್ಲಿ ನಂಬಿಕೆಯಿಟ್ಟ ಎಲ್ಲರೂ ಬೆಂಬಲಿಸಬೇಕಾದ ಸಂಗತಿಯಿದು. ಚಂದ್ರಶೇಖರ್ ರಾವಣ್ ಅವರ ಮೇಲಿನ ಹಲ್ಲೆಯು ಕೇವಲ ದಲಿತರಿಗೆ ಮಾತ್ರ ಸಂಬಂಧಿಸಿದ್ದಲ್ಲ. ದುಷ್ಟಪ್ರಭುತ್ವದ ವಿರುದ್ಧ ಬಲಿಪಶುವಾಗುವ ಜನರ ಪರವಾಗಿ ಚಿಂತಿಸುವ, ಕೆಲಸ ಮಾಡುವ ನಮಗೆಲ್ಲ ಸಂಬಂಧಿಸಿದ್ದು.

ಸಂಜೀವಭಟ್, ಉಮರ್ ಖಾಲಿದ್

ಈಚೆಗೆ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲವಾಡ್ ಅವರಿಗೆ ಗುಜರಾತ್ ಕೋರ್ಟು ಜಾಮೀನನ್ನು ರದ್ದುಗೊಳಿಸಿ ಕೂಡಲೇ ಶರಣಾಗಬೇಕೆಂದು ವಿಧಿಸಿತು. ಈ ನಡುವೆ ಸುಪ್ರೀಂಕೋರ್ಟು ಇದಕ್ಕೆ ಒಂದು ವಾರಕಾಲ ತಡೆನೀಡಿತು. ವಾರದ ಬಳಿಕ ಮತ್ತೇನಾಗುವುದೊ ತಿಳಿಯದು. ಆದರೆ ತೀಸ್ತಾ ಅವರ ಬಂಧನ-ಜಾಮೀನು-ಬಿಡುಗಡೆಗಳ ಈ ನಾಟಕೀಯ ಆವರ್ತನೆ ಒಂದು ಬಗೆಯಲ್ಲಿ ನಮಗೆ ಮಾಮೂಲಿ ಸುದ್ದಿಯಾಗುತ್ತಿದೆ. ರೈತರ ಆತ್ಮಹತ್ಯೆಯಂತೆ, ಮತೀಯವಾದಿಗಳಿಂದ ಮುಸ್ಲಿಮರಿಗೆ ವ್ಯಾಪಾರ ಬಹಿಷ್ಕಾರ ಕೊಡುವ ಕರೆಯಂತೆ, ಮಹಿಳಾ ಕ್ರೀಡಾಪಟುವಿಗೆ ಆಗುವ ಲೈಂಗಿಕ ಕಿರುಕುಳದಂತೆ, ಜಾತಿವಾದಿಗಳಿಂದ ದಲಿತರ ಮೇಲೆ ನಡೆವ ಹಲ್ಲೆಯಂತೆ. ಸಮಾಜದ ಹಿಂಸೆ ಮತ್ತು ಅದರ ವಿರುದ್ಧ ಹೋರಾಡುವವರಿಗೆ ಪ್ರಭುತ್ವ ಕೊಡುವ ಶಿಕ್ಷೆಗಳಿಗೆ ಸಮಾಜವು ತನ್ನ ಸಂವೇದನಾಶೀಲತೆ ಕಳೆದುಕೊಳ್ಳುವುದು, ಮಾಮೂಲಿ ಎಂದು ಭಾವಿಸುವುದು ಘೋರವಾದ ಸಂಗತಿ. ಇದು ಪರೋಕ್ಷವಾಗಿ ಪ್ರಭುತ್ವಕ್ಕೆ ತನ್ನ ಕ್ರೌರ್ಯವನ್ನು ಮುಂದುವರಿಸಲು ನಾಗರಿಕ ಸಮಾಜ ಕೊಡುವ ಸಮ್ಮತಿ ಕೂಡ. ಮಾರುಕಟ್ಟೆ ಸಂಸ್ಕೃತಿಯು ಲಾಭವನ್ನು ದೊಡ್ಡ ಮೌಲ್ಯವಾಗಿಸಿದೆ ಮತ್ತು ವ್ಯಕ್ತಿವಾದವನ್ನು ದೊಡ್ಡ ಸಂಗತಿಯಾಗಿಸಿದೆ. ಇದರ ಪರಿಣಾಮವೆಂದರೆ, ಮತ್ತೊಬ್ಬರ ನೋವಿಗೆ ಮಿಡಿವ ಗುಣವೇ ಕಡಿಮೆಯಾಗುತ್ತಿರುವುದು. ಇದು ಕೂಡ ಪ್ರಭುತ್ವದ ಕ್ರೌರ್ಯವನ್ನು ಒಂದು ಬಗೆಯಲ್ಲಿ ಪರೋಕ್ಷವಾಗಿ ಬೆಂಬಲಿಸುತ್ತಿರುವ ಸಂಗತಿಯಾಗಿದೆ.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ರಕ್ಷಣೆಯನ್ನು ಜುಲೈ 19ರವರೆಗೆ ವಿಸ್ತರಿಸಿದ ಸುಪ್ರೀಂ

ಇದಕ್ಕೆ ಪ್ರತಿಯಾದ ಘಟನೆಗಳೂ ನಡೆಯುತ್ತಿವೆ. ಈಚೆಗೆ ಯಲಬುರ್ಗ ತಾಲೂಕಿನ ಹಿರೇವಂಕಲಕುಂಟಾ ಎಂಬ ಹಳ್ಳಿಯಲ್ಲಿ ಒಬ್ಬ ಶಿಕ್ಷಕನ ನಿವೃತ್ತಿಯಾದಾಗ ನಡೆದ ಕಾರ್ಯಕ್ರಮದಲ್ಲಿ ಐದು ಸಾವಿರ ಜನ ಸೇರಿದ್ದರು. ಅದು ಸಾಹಿತ್ಯ ಸಮ್ಮೇಳನದ ಹಾಗೆ ಜರುಗಿತು. 40 ವರ್ಷಗಳಿಂದ ಸದರಿ ಶಿಕ್ಷಕನಿಂದ ಕಲಿತ ಶಿಷ್ಯರು ಅವರ ಪೋಷಕರು ದೇಶದ ಎಲ್ಲ ಮೂಲೆಗಳಿಂದ ಬಂದಿದ್ದರು. ಅವರು ಶಿಕ್ಷಕನಿಗೆ ಊರಿಗೆ ಮರಳಿಹೋಗದಂತೆ ಅಲ್ಲೇ ಮನೆ ಕಟ್ಟಿಸಿಕೊಡುತ್ತಿದ್ದಾರಂತೆ. ಕೃತಜ್ಞತೆಯು ಒಂದು ಮೌಲ್ಯವಾಗಿ ಈ ಸಮಾಜದಿಂದ ಕಣ್ಮರೆಯಾಗಿಲ್ಲ. ಆದರೆ ಪ್ರಭುತ್ವದ ವಿರುದ್ಧ ಸಿಟ್ಟು, ಜನರ ಪರವಾಗಿ ಕೆಲಸ ಮಾಡುವವರ ಬಗೆಗಿನ ಕೃತಜ್ಞತೆಗಳು, ಹೊರಹೊಮ್ಮುವ ಸೂಕ್ತ ಕಾಲಕ್ಕಾಗಿ ಕಾಯುತ್ತವೆಯೇ? ಕೃತಜ್ಞತೆ ಸಲ್ಲಿಕೆಯು ಪ್ರಭುತ್ವದ ವಿರುದ್ಧದ ಪ್ರತಿರೋಧದ ಭಾಗವಾದಾಗ, ಉತ್ಕಟವಾಗಿ ಪ್ರಕಟವಾಗದೆ ಹೋಗುತ್ತದೆಯೇ? ಹೋರಾಟಗಾರರಿಗೆ ಅನ್ನದ ಬಟ್ಟಲನ್ನು, ಅದೃಶ್ಯ ಶಕ್ತಿಯನ್ನು ಜನರು ಕೊಡದೆ ಅವರು ಕೇವಲ ನಿರಾಶಾದಾಯಕ ಸನ್ನಿವೇಶದಲ್ಲಿ ಹೋರಾಡುತ್ತಿದ್ದಾರೆ ಎಂಬುದು ನಮ್ಮ ತಪ್ಪು ಗ್ರಹಿಕೆಯೇ? ವಿಚಾರ ಮಾಡಬೇಕು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...