Homeಕರ್ನಾಟಕ'ರಾಜ್ಯದ ಪರವಾಗಿ ಎಂದಾದರೂ ಧ್ವನಿ ಎತ್ತಿದ್ದೀರಾ; ನಿಮ್ಮನ್ನು ಜನ ಯಾಕೆ ಗೆಲ್ಲಿಸಬೇಕು?: ಕಟೀಲ್-ಕರಂದ್ಲಾಜೆ ವಿರುದ್ಧ ಸಿಎಂ...

‘ರಾಜ್ಯದ ಪರವಾಗಿ ಎಂದಾದರೂ ಧ್ವನಿ ಎತ್ತಿದ್ದೀರಾ; ನಿಮ್ಮನ್ನು ಜನ ಯಾಕೆ ಗೆಲ್ಲಿಸಬೇಕು?: ಕಟೀಲ್-ಕರಂದ್ಲಾಜೆ ವಿರುದ್ಧ ಸಿಎಂ ಕಿಡಿ

- Advertisement -
- Advertisement -

‘ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ‘ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು’ ಎಂದು ಪ್ರಶ್ನಿಸಿದರು.

‘ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗು, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ’ ಎಂದು ಸಿದ್ದರಾಮಯ್ಯ ಅವರು ಜನಸ್ತೋಮವನ್ನು ಪ್ರಶ್ನಿಸಿದರು.

‘ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ’ ಎಂದರು.‌

‘ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ’ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದಾಗ, ‘ಇಲ್ಲ, ಇಲ್ಲ, ಏನಿಲ್ಲ’ ಎಂದು ಜನರು ಕೂಗಿದರು.

‘2013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ.98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು’ ಎಂದರು.

‘ನಮ್ಮ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ’ ಎಂದು ಹೇಳಿದರು.

‘ಅದೇ ರೀತಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಲ್ಲೂ ಕೋಟಿ ಕೋಟಿ ಮಹಿಳೆಯರು ಗ್ಯಾರಂಟಿಗಳ ಲಾಭವನ್ನು ಪ್ರತೀ ತಿಂಗಳು ಪಡೆಯುತ್ತಿದ್ದಾರೆ. ನಿಮಗೆಲ್ಲಾ ಈ ಯೋಜನೆಯ ಅನುಕೂಲ ಸಿಗುತ್ತಿದೆಯಾ’ ಎಂದು ಮುಖ್ಯಮಂತ್ರಿಗಳು ಕೇಳಿದ್ದಕ್ಕೆ, ‘ಸಿಗುತ್ತಿದೆ , ಸಿಗುತ್ತಿದೆ’ ಎಂದು ಕೂಗಿದ ಜನರು, ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಜೈಕಾರ ಹಾಕಿದರು.

‘ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ. ನಮ್ಮ ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ’ ಎಂದರು.

ಇದನ್ನೂ ಓದಿ; ಬಿಜೆಪಿ ಸೇರ್ಪಡೆ ವದಂತಿ: ‘ಕಮಲ್ ನಾಥ್ ಅವರು ಇಂದಿರಾ ಗಾಂಧಿಗೆ ಮೂರನೇ ಮಗ’ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...