Homeಮುಖಪುಟಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಚಿತ್ರಹಿಂಸೆಯ ವಿರುದ್ಧ ವಿಶ್ವಸಂಸ್ಥೆಯ ಒಪ್ಪಂದವನ್ನು ಅಂಗೀಕರಿಸಿ, ಚಿತ್ರಹಿಂಸೆ ವಿರುದ್ಧ ರಾಷ್ಟ್ರೀಯ ಕಾನೂನು ತಂದು, ಚಿತ್ರಹಿಂಸಕರು ಯಾವುದೇ ಶಿಕ್ಷೆಯಿಲ್ಲದೇ ಪಾರಾಗುವುದನ್ನು ನಿಲ್ಲಿಸಬೇಕು ಎಂದು ಯುನೈಟೆಡ್ ಎನ್‌ಜಿಓ ಕ್ಯಾಂಪೇನ್ ಎಗೈನ್ಸ್ಟ್ ಟಾರ್ಚರ್ (UNCAT) ಎಂಬ ಜಾಗತಿಕ ಮಾನವ ಹಕ್ಕು ವೇದಿಕೆಯು ಭಾರತವನ್ನು ಒತ್ತಾಯಿಸಿದೆ.

- Advertisement -
- Advertisement -

ಭಾರತದಲ್ಲಿ 2019ರಲ್ಲಿ 1,731 ಮಂದಿ ಅಂದರೆ, ಪ್ರತೀದಿನ ಐವರು ಕಸ್ಟಡಿ ಯಲ್ಲಿ ಸಾವಿಗೀಡಾಗಿದ್ದಾರೆ. ಅವರಲ್ಲಿ ಬಹುತೇಕರು ದಲಿತರು, ಆದಿವಾಸಿಗಳು, ಮುಸ್ಲಿಮರು ಸೇರಿದಂತೆ ಸಮಾಜದ ಬಡ ಮತ್ತು ಅಂಚಿಗೆ ತಳ್ಳಲ್ಪಟ್ಟ ವರ್ಗದವರು. ವಿಶ್ವದಾದ್ಯಂತ ಚಿತ್ರಹಿಂಸೆಯನ್ನು ತೊಲಗಿಸಲು ಕಟಿಬದ್ಧವಾಗಿರುವ ಸರಕಾರೇತರ ಸಂಸ್ಥೆಗಳ ಮಾನವ ಹಕ್ಕು ವೇದಿಕೆಯಾಗಿರುವ ಯುನೈಟೆಡ್ ಎನ್‌ಜಿಓ ಕ್ಯಾಂಪೇನ್ ಎಗೈನ್ಸ್ಟ್ ಟಾರ್ಚರ್ (UNCAT) ಎಂಬ ಜಾಗತಿಕ ಮಾನವ ಹಕ್ಕು ಸಂಘಟನೆಯ ವಾರ್ಷಿಕ ವರದಿಯಲ್ಲಿ ಇದು ಬಹಿರಂಗವಾಗಿದೆ.

ಇತ್ತೀಚೆಗೆ “ಚಿತ್ರಹಿಂಸೆಯ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ಬೆಂಬಲ ದಿನ”ದಂದು ಬಿಡುಗಡೆಗೊಳಿಸಲಾದ “ಇಂಡಿಯಾ: ಆನ್ಯುವಲ್ ರಿಪೋರ್ಟ್ ಆನ್ ಟಾರ್ಚರ್ 2019″ನಲ್ಲಿ ಭಾರತದಲ್ಲಿ 2019ರಲ್ಲಿ 1,731 ಮಂದಿ ಅಂದರೆ, ಪ್ರತೀದಿನ ಐವರು ಕಸ್ಟಡಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು UNCAT ಹೇಳಿದೆ. ಇವರಲ್ಲಿ 1,606 ಮಂದಿ ನ್ಯಾಯಾಂಗ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದರೆ, 125 ಸಾವುಗಳು ಪೊಲೀಸ್ ಕಸ್ಟಡಿ ಯಲ್ಲಿ ಸಂಭವಿಸಿವೆ. 2019ರಲ್ಲಿ 1,966 ಮಂದಿ  ಕಸ್ಟಡಿಯಲ್ಲಿ ಸಾವಿಗೀಡಾಗಿದ್ದಾರೆ. ಇವರಲ್ಲಿ 1,819 ಮಂದಿ ನ್ಯಾಯಾಂಗ ಕಸ್ಟಡಿ ಯಲ್ಲಿ ಸಾವಿಗೀಡಾಗಿದ್ದರೆ, 147 ಸಾವುಗಳು ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿವೆ. “ಈ ಅಂಕಿಅಂಶಗಳು ದೇಶದಲ್ಲಿ ವಾಸ್ತವವಾಗಿ ನಡೆಯುವ ಕಸ್ಟಡಿ ಮತ್ತು ಚಿತ್ರಹಿಂಸೆಯಿಂದ ಉಂಟಾದ ಸಾವುಗಳನ್ನು ಪ್ರತಿಫಲಿಸುವುದಿಲ್ಲ” ಎಂದು ವರದಿ ಎಚ್ಚರಿಸಿದೆ. ಅಂದರೆ, ಇದು ಅಧಿಕೃತ ಅಂಕಿಅಂಶವಾಗಿದ್ದು, ನೈಜ ಸಾವುಗಳ ಸಂಖ್ಯೆ ಇದಕ್ಕಿಂತಲೂ ಹೆಚ್ಚಿರುವ ಸಂಭವವಿದೆ.

ಸಂಸ್ಥೆಯ ಭಾರತೀಯ ವಿಭಾಗವಾದ NCAT ನಿರ್ದೇಶಕ ಪಾರಿತೋಷ್ ಚಕ್ಮಾ ಹೇಳುವಂತೆ, “ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ 125 ಸಾವುಗಳ ಪೈಕಿ 70 ಮಂದಿ ಅಥವಾ 60 ಶೇಕಡಾ ಮಂದಿ ಬಡ ಮತ್ತು ಅವಗಣಿತ ಸಮುದಾಯಗಳಿಗೆ ಸೇರಿದವರು. ಇವರಲ್ಲಿ 13 ಮಂದಿ ದಲಿತರು ಮತ್ತು ಆದಿವಾಸಿಗಳು, 15 ಮಂದಿ ಮುಸ್ಲಿಮರು. 37 ಮಂದಿಯನ್ನು ಕಳವು, ವಂಚನೆ, ಅಕ್ರಮವಾಗಿ ಮದ್ಯ ಮಾರಾಟ, ಜೂಜಾಟ ಇತ್ಯಾದಿ ಸಣ್ಣಪುಟ್ಟ ಅಪರಾಧಗಳಿಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು ಮತ್ತು ಇದು ಅವರ ಆರ್ಥಿಕ ಸ್ಥಿತಿಗತಿಯನ್ನು ಸೂಚಿಸುತ್ತದೆ.”

ಈ 125 ಸಾವುಗಳಲ್ಲಿ ಉತ್ತರ ಪ್ರದೇಶ 14 ಸಾವುಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ನಂತರದಲ್ಲಿ ತಮಿಳುನಾಡು ಮತ್ತು ಪಂಜಾಬ್ ಇದ್ದು, ಅಲ್ಲಿ ತಲಾ11 ಸಾವುಗಳು ಸಂಭವಿಸಿವೆ. ಉಳಿದಂತೆ ಬಿಹಾರದಲ್ಲಿ 10, ಮಧ್ಯಪ್ರದೇಶದಲ್ಲಿ 9, ಗುಜರಾತಿನಲ್ಲಿ 8, ದಿಲ್ಲಿ ಮತ್ತು ಒಡಿಶಾದಲ್ಲಿ ತಲಾ 7, ಜಾರ್ಖಂಡ್‌ನಲ್ಲಿ 6, ಛತ್ತೀಸ್‌ಗಢ್, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ತಲಾ 5, ಆಂಧ್ರಪ್ರದೇಶ ಮತ್ತು ಹರ್ಯಾಣದಲ್ಲಿ ತಲಾ 4, ಕೇರಳ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3, ಜಮ್ಮು ಮತ್ತು ಕಾಶ್ಮೀರ, ಉತ್ತರಖಂಡ ಮತ್ತು ಮಣಿಪುರದಲ್ಲಿ ತಲಾ 2 ಹಾಗೂ ಅಸ್ಸಾಂ, ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ತ್ರಿಪುರದಲ್ಲಿ ತಲಾ 1 ಸಾವು ಸಂಭವಿಸಿದೆ.

ಕಸ್ಟಡಿ

ಈ 125 ಸಾವುಗಳಲ್ಲಿ 93 ಮಂದಿ ಅಂದರೆ, 74.4 ಶೇಕಡಾ ಮಂದಿ ಆರೋಪಿತ ಚಿತ್ರಹಿಂಸೆ/ ಸಂಚಿನ ಕಾರಣದಿಂದ ಸತ್ತಿದ್ದಾರೆ. 24 ಮಂದಿ ಸಂಶಯಾಸ್ಪದ ಪರಿಸ್ಥಿತಿಯಲ್ಲಿ ಸತ್ತಿದ್ದು, ಇವುಗಳಲ್ಲಿ 16 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೂ, ಏಳು ಮಂದಿ ಕಾಯಿಲೆಯಿಂದ ಮತ್ತು ಒಬ್ಬ ಗಾಯದಿಂದ ಸತ್ತಿರುವುದಾಗಿ ಪೊಲೀಸರು ಹೇಳಿಕೊಂಡಿದ್ದಾರೆ. ಉಳಿದ ಐವರ ಕಸ್ಟಡಿ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಚಕ್ಮಾ ಅವರ ಪ್ರಕಾರ ಹಿಂಸೆಯ ವಿಧಾನಗಳಲ್ಲಿ ದೇಹಕ್ಕೆ ಕಬ್ಬಿಣದ ಮೊಳೆಗಳನ್ನು ಹೊಡೆಯುವುದು, ಮರ್ಮಾಂಗಗಳಿಗೆ ಹೊಡೆಯುವುದು, ಮತ್ತು ಖಾರದ ಪುಡಿ ಹಚ್ಚುವುದು, ಬಾಯಿಗೆ ಮೂತ್ರ ಮಾಡುವುದು, ಮುಖಮೈಥುನ ಮಾಡುವಂತೆ ಬಲಾತ್ಕರಿಸುವುದು ಸೇರಿದೆ.

“ತಪ್ಪು ಒಪ್ಪಿಕೊಳ್ಳುವಂತೆ ಮಾಡಲು ಅಥವಾ ಲಂಚ ಸುಲಿಯಲು ಚಿತ್ರಹಿಂಸೆ ನೀಡಲಾಗುತ್ತದೆ. 2019ರಲ್ಲಿ ಬಳಸಲಾದ ಚಿತ್ರಹಿಂಸಾ ವಿಧಾನಗಳಲ್ಲಿ ದೇಹಕ್ಕೆ ಮೊಳೆ ಹೊಡೆಯುವುದು (ಬಿಹಾರದಲ್ಲಿ ಗುಫ್ರಾನ್ ಆಲಂ ಮತ್ತು ತಸ್ಲೀಂ ಅನ್ಸಾರಿ), ಕಾಲಿನ ಮೇಲೆ ರೋಲರ್ ಹರಿಸಿ ಬೆಂಕಿ ಹಚ್ಚುವುದು (ಕಾಶ್ಮೀರದಲ್ಲಿ ರಿಜ್ವಾನ್ ಅಸಾದ್ ಪಂಡಿತ್), “ಫಲಂಗ” ಅಂದರೆ ಕಾಲಿನ ಅಡಿಭಾಗಕ್ಕೆ ಹೊಡೆಯುವುದು ಮತ್ತು ಕಾಲುಗಳನ್ನು ವಿರುದ್ಧ ದಿಕ್ಕಿನಲ್ಲಿ ಎಳೆಯುವುದು ( ಕೇರಳದಲ್ಲಿ ರಾಜ್‌ಕುಮಾರ್), ಮರ್ಮಾಂಗಗಳಿಗೆ ಹೊಡೆಯುವುದು (ಹರ್ಯಾಣದಲ್ಲಿ ಬ್ರಿಜ್‌ಪಾಲ್ ಮೌರ್ಯ ಮತ್ತು ಲಿನಾ ನರ್ಜಿನಾರಿ), ದೇಹಕ್ಕೆ ಸೂಜಿ ಚುಚ್ಚುವುದು (ತಮಿಳುನಾಡಿನಲ್ಲಿ ಮೂರು ವರ್ಷಗಳ ಮಗುವಿನ ಮೇಲೆ), ಬತ್ತಲೆಗೊಳಿಸಿ ಹೊಡೆಯುವುದು (ಹರ್ಯಾಣದಲ್ಲಿ ಮೊಹಮ್ಮದ್ ತನ್ವೀರ್ ಮತ್ತು ಲಿನಾ ನರ್ಜಿನಾರಿ, ಅಸ್ಸಾಂನಲ್ಲಿ ಮಿನುವಾರ ಬೇಗಂ, ಸನುವಾರ ಮತ್ತು ರುಮೇಲಾ), ಗರ್ಭಿಣಿ ಮಹಿಳೆಯ ಹೊಟ್ಟೆಗೆ ಒದೆಯುವುದು (ಅಸ್ಸಾಂನಲ್ಲಿ ಮಿನುವಾರ ಬೇಗಂ) ಇತ್ಯಾದಿ ಸೇರಿವೆ” ಎಂದು ಚಕ್ಮಾ ಹೇಳಿದ್ದಾರೆ.

ಉಳಿದ ಚಿತ್ರಹಿಂಸಾ ವಿಧಾನಗಳಲ್ಲಿ ವಿದ್ಯುತ್ ಶಾಕ್ ನೀಡುವುದು, ಮರ್ಮಾಂಗಗಳಿಗೆ ಪೆಟ್ರೋಲ್ ಸುರಿಯುವುದು, ಬೇಡಿ ತೊಡಿಸಿ ಹೊಡೆಯುವುದು, ದೇಹಕ್ಕೆ ಸೂಜಿ ಚುಚ್ಚುವುದು, ಕಾದ ಸರಳಿನಿಂದ ಬರೆ ಹಾಕುವುದು, ಗುದದ್ವಾರಕ್ಕೆ ಗಟ್ಟಿಯಾದ ವಸ್ತುಗಳನ್ನು ತುರುಕುವುದು, ಕೈಕಾಲು ಕಟ್ಟಿ ತಲೆಕೆಳಗಾಗಿ ನೇತಾಡಿಸಿ ಹೊಡೆಯುವುದು, ಮುಖಮೈಥುನ ಮಾಡುವಂತೆ ಬಲಾತ್ಕರಿಸುವುದು, ಕಟ್ಟಿಂಗ್ ಪ್ಲಯರ್‌ನಲ್ಲಿ ಉಗುರುಗಳನ್ನು ಅದುಮುವುದು, ಕೈಕಾಲು ಕಟ್ಟಿ ಎರಡು ಮೇಜುಗಳ ನಡುವೆ ನೇತಾಡಿಸಿ ಕಬ್ಬಿಣದ ಸರಳಿನಿಂದ ಹೊಡೆಯುವುದು ಇತ್ಯಾದಿ ಸೇರಿವೆ.

ಹಲವಾರು ಪ್ರಕರಣಗಳಲ್ಲಿ ಕಾನೂನು ಪ್ರಕಾರ ಕಡ್ಡಾಯವಾದ ಮರಣೋತ್ತರ ಪರೀಕ್ಷೆಯನ್ನೂ ಮಾಡದೆ, ಶವಗಳನ್ನು ತರಾತುರಿಯಲ್ಲಿ ಸುಟ್ಟು ಚಿತ್ರಹಿಂಸೆಯ ಎಲ್ಲಾ ಸಾಕ್ಷ್ಯಾಧಾರಗಳನ್ನು ಅಳಿಸಿಹಾಕಲು ಪೊಲೀಸರು ಯತ್ನಿಸಿದ್ದಾರೆ ಎಂಬುದನ್ನು ವರದಿ ಎತ್ತಿಹೇಳಿದೆ. ತಮಿಳುನಾಡಿನಲ್ಲಿ ಕಸ್ಟಡಿಯಲ್ಲಿ ಸತ್ತ 17 ವರ್ಷಗಳ ಹುಡುಗನ (ಹೆಸರು ತಡೆಹಿಡಿಯಲಾಗಿದೆ) ಮರಣೋತ್ತರ ಪರೀಕ್ಷೆ ನಡೆಸದಿರುವುದು. ಗುಜರಾತಿನಲ್ಲಿ ಹೀರಾ ಬಜನಿಯಾ ಎಂಬಾತನ ಶವವನ್ನು ಸಂಬಂಧಿಕರಿಗೆ ಅಂತಿಮ ಕ್ರಿಯೆಗಳನ್ನು ನಡೆಸಲೂ ಅವಕಾಶ ಕೊಡದೆ, ದಹನ ಮಾಡಿ ಚಿತ್ರಹಿಂಸೆಯ ಸಾಕ್ಷ್ಯಾಧಾರಗಳನ್ನು ಅಳಿಸಿಹಾಕಿದುದು, ತ್ರಿಪುರದಲ್ಲಿ ಮಂಗಲ್ ದಾಸ್ ಎಂಬಾತನ ಶವದ ಮರಣೋತ್ತರ ಪರೀಕ್ಷೆ ನಡೆಸದೆ ಬಲವಂತವಾಗಿ ದಹನ ಮಾಡಿದುದು, ಅದೇ ರೀತಿ ರಾಜಸ್ಥಾನದ ಹನುಮಾನ್ ಕೋಳಿ ಎಂಬಾತನ ಶವದ ಮರಣೋತ್ತರ ಪರೀಕ್ಷೆ ನಡೆಸದೆ, ಆತನ ಮಕ್ಕಳಿಗೆ ಕೊನೆಯ ಬಾರಿ ಮುಖನೋಡಲೂ ಅವಕಾಶ ಕೊಡದೆ ದಹನ ಮಾಡಿದುದು- ಹೀಗೆ ಕನಿಷ್ಟ ನಾಲ್ಕು ಇಂತಹಾ ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆಯರಿಗೆ ಚಿತ್ರಹಿಂಸೆ ನೀಡುವುದು ಮತ್ತು ಹೆಚ್ಚಾಗಿ ಲೈಂಗಿಕ ಚಿತ್ರಹಿಂಸೆಗೆ ಗುರಿಪಡಿಸುವುದು ಮುಂದುವರಿದಿದ್ದು, ಹೆಚ್ಚಿನ ಬಾರಿ ಇವರು ಸಮಾಜದ ದುರ್ಬಲ ವರ್ಗಗಳಿಗೆ ಸೇರಿದವರಾಗಿದ್ದಾರೆ. 2019ರಲ್ಲಿ ಕನಿಷ್ಟ ನಾಲ್ವರು ಮಹಿಳೆಯರು ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದಾರೆ. ಮಕ್ಕಳನ್ನು ಕೂಡಾ ಚಿತ್ರಹಿಂಸೆಗೆ ಗುರಿಪಡಿಸುವುದು ಮುಂದುವರಿದಿದೆ.

ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ) “ಕೈಂ ಇನ್ ಇಂಡಿಯಾ- 2018” ವರದಿಯಲ್ಲಿ ಪೊಲೀಸರು ಅಪ್ರಾಪ್ತ ಸಂತ್ರಸ್ತರಿಗೆ 3,164 ಪ್ರಕರಣಗಳಲ್ಲಿ ಸಾಧಾರಣ ಮತ್ತು 3,467 ಪ್ರಕರಣಗಳಲ್ಲಿ ಗಂಭೀರ ಸ್ವರೂಪದ ಹಾನಿಯುಂಟುಮಾಡಿರುವುದನ್ನು ದಾಖಲಿಸಿದೆ.

ಕಸ್ಟಡಿ

ಕೈದಿಗಳ ಜೀವನ ಪರಿಸ್ಥಿತಿಯನ್ನು ಸುಧಾರಿಸಬೇಕೆಂದು ಸೆಪ್ಟೆಂಬರ್ 2017ರಲ್ಲಿ ಸುಪ್ರೀಂಕೋರ್ಟ್ ನಿರ್ದೇಶನಗಳ ಸರಮಾಲೆಯನ್ನೇ ನೀಡಿದರೂ, ಜೈಲುಗಳು ನರಕಗಳಾಗಿಯೇ ಉಳಿದಿವೆ. 2019ರಲ್ಲಿ ನ್ಯಾಯಾಂಗ ಕಸ್ಟಡಿಯಲ್ಲಿ 1,606 ಸಾವುಗಳು ಸಂಭವಿಸಿವೆ. ಈ ಸಾವುಗಳಲ್ಲಿ ಹಲವಾರು ಸಾವುಗಳು ಚಿತ್ರಹಿಂಸೆಯ ಕಾರಣದಿಂದ ಸಂಭವಿಸಿವೆ.

“ಚಿತ್ರಹಿಂಸೆ ನಡೆಸುವವರಿಗೆ ಸಂಪೂರ್ಣ ರಕ್ಷಣೆ ಇದೆ. ಭಾರತ ಸರಕಾರದ ಗೃಹ ಸಚಿವಾಲಯದ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್‌ಸಿಆರ್‌ಬಿ)ದ 2005ರಿಂದ 2018ರ ತನಕದ ವರದಿಗಳ ಪ್ರಕಾರ “ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಪ್ರಕರಣಗಳಲ್ಲಿ” 500 ಸಾವುಗಳು ಸಂಭವಿಸಿದ್ದು, 281 ಪ್ರಕರಣಗಳು ದಾಖಲಾಗಿವೆ ಮತ್ತು ಒಬ್ಬನೇ ಒಬ್ಬ ಪೊಲೀಸನಿಗೆ ಶಿಕ್ಷೆಯಾಗಿಲ್ಲ” ಎಂದು ಚಕ್ಮಾ ಹೇಳಿದ್ದಾರೆ.

ಚಿತ್ರಹಿಂಸೆಯ ವಿರುದ್ಧ ವಿಶ್ವಸಂಸ್ಥೆಯ ಒಪ್ಪಂದವನ್ನು ಅಂಗೀಕರಿಸಿ, ಚಿತ್ರಹಿಂಸೆ ವಿರುದ್ಧ ರಾಷ್ಟ್ರೀಯ ಕಾನೂನು ತಂದು, ಚಿತ್ರಹಿಂಸಕರು ಯಾವುದೇ ಶಿಕ್ಷೆಯಿಲ್ಲದೇ ಪಾರಾಗುವುದನ್ನು ನಿಲ್ಲಿಸಬೇಕು ಎಂದು ಯುನೈಟೆಡ್ ಎನ್‌ಜಿಓ ಕ್ಯಾಂಪೇನ್ ಎಗೈನ್ಸ್ಟ್ ಟಾರ್ಚರ್ (UNCAT) ಎಂಬ ಜಾಗತಿಕ ಮಾನವ ಹಕ್ಕು ವೇದಿಕೆಯು ಭಾರತವನ್ನು ಒತ್ತಾಯಿಸಿದೆ.

ಅಬ್ದುಲ್ ಬಾರಿ ಮಸೌದ್

ಮೂಲ: ಮುಸ್ಲಿಂ ಮಿರರ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...