Homeಮುಖಪುಟಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ...

ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

- Advertisement -
- Advertisement -

’82ನೇ ವೆನಿಸ್ ಚಲನಚಿತ್ರೋತ್ಸವ’ದಲ್ಲಿ ಚೊಚ್ಚಲ ಚಲನಚಿತ್ರ ನಿರ್ಮಾಪಕಿ ಅನುಪರ್ಣ ರಾಯ್ ಅವರು ತಮ್ಮ ‘ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್’ ಚಿತ್ರಕ್ಕಾಗಿ ಒರಿಝೋಂಟಿ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಅನುಪರ್ಣ ರಾಯ್ ವೆನಿಸ್‌ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ರಾಯ್ ಅವರು ಭಾವನಾತ್ಮಕ ಭಾಷಣ ಮಾಡಿದ್ದು, ಪ್ಯಾಲೆಸ್ತೀನ್‌ನ ಮಕ್ಕಳ ದುಃಸ್ಥಿತಿಯ ಬಗ್ಗೆ ಸಮಾರಂಭದಲ್ಲಿ ಹಾಜರಿದ್ದವರ ಗಮನ ಸೆಳೆದಿದ್ದಾರೆ.

“ನಾನು ಸ್ವಲ್ಪ ಸಮಯ ತೆಗೆದುಕೊಂಡು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಮತ್ತು ಅತ್ಯಂತ ವಿನಾಶಕಾರಿ ವಿಷಯದ ಬಗ್ಗೆ ಮಾತನಾಡಲು ಬಯಸುತ್ತೇನೆ. ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹವಾಗಿದೆ ಮತ್ತು ಪ್ಯಾಲೆಸ್ತೀನ್ ಅದಕ್ಕೆ ಹೊರತಾಗಿಲ್ಲ. ಇದಕ್ಕಾಗಿ ನಾನು ಯಾವುದೇ ಚಪ್ಪಾಳೆಯನ್ನು ಬಯಸುವುದಿಲ್ಲ. ಪ್ಯಾಲೆಸ್ತೀನ್ ಜೊತೆ ನಿಲ್ಲಲು ಒಂದು ಕ್ಷಣ ಯೋಚಿಸುವುದು ನಮ್ಮ ಜವಾಬ್ದಾರಿಯಾಗಿದೆ. ನನ್ನ ಮಾತುಗಳಿಂದ ನನ್ನ ದೇಶದಲ್ಲಿ ನಿರಾಸೆ ಉಂಟಾಗಬಹುದು, ಆದರೆ ನನಗೆ ಅದು ಮುಖ್ಯವಲ್ಲ” ಎಂದು ಸೆಪ್ಟೆಂಬರ್ 6ರಂದು ಪ್ರಶಸ್ತಿ ಸ್ವೀಕಾರ ಭಾಷಣದಲ್ಲಿ ರಾಯ್ ಹೇಳಿದ್ದಾರೆ.

“ನಾನು ಜಾಗತಿಕ ಪ್ರಜೆಯಾಗಿ ಜನರ ಸಮಸ್ಯೆಗಳು ಮತ್ತು ನೋವುಗಳ ಬಗ್ಗೆ ಮಾತನಾಡಲು ಬಯಸುತ್ತೇನೆ” ಎಂದು ಪಶ್ಚಿಮ ಬಂಗಾಳದ ಪುರುಲಿಯಾದವರಾದ ರಾಯ್ ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ಸಮಸ್ಯೆ ಜಾಗತಿಕ ಬಿಕ್ಕಟ್ಟಾಗಿದ್ದು, ಇಸ್ರೇಲ್‌ನಂತಹ ಪ್ರಬಲ ದೇಶವು ನ್ಯಾಯ, ಶಾಂತಿ ಮತ್ತು ಜೀವನವನ್ನು ನಾಶಪಡಿಸುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಜಾಗತಿಕ ನಾಗರಿಕಳಾಗಿ ನಾನು ಈ ಸಮಸ್ಯೆಗಳು ಮತ್ತು ಸಂಕಟಗಳ ಬಗ್ಗೆ ಮಾತನಾಡಲೇಬೇಕು. ನನ್ನ ಬಳಿ ಮೈಕ್ ಇತ್ತು, ಹಾಗಾಗಿ, ಪ್ಯಾಲೆಸ್ತೀನ್‌ ನೋವುಗಳ ಬಗ್ಗೆ ಮಾತನಾಡದೆ ಇರಲು ನನಗೆ ಸಾಧ್ಯವಾಗಲಿಲ್ಲ” ಎಂದು ರಾಯ್ ವೆನಿಸ್‌ನಿಂದ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದಾರೆ.

ನನ್ನ ಗೆಲುವು ಪುರುಲಿಯಾದ ಗೆಲುವು:ಅನುಪರ್ಣ ರಾಯ್

“ಇದು ಜನರ ನಂಬಿಕೆಗೆ ಮತ್ತು ರಂಗಮತಿಗೆ ಸಿಕ್ಕ ಜಯ. ದೇಬ್ಜಿತ್ ಸಮಂತ, ಸಕ್ಯಾದೇಬ್ ಚೌಧರಿ, ದೇಬ್ಜಿತ್ ಬ್ಯಾನರ್ಜಿ, ರೋಹಿತ್ ರಾಜ್, ಹರ್ಷ ಪಟೇಲ್, ಆದಿತ್ಯ ಪಂಡಿತ್, ಪ್ರದೀಪ್ ವಿಘ್ನವೇಲು, ಅಂಜಲಿ ಮುಲ್ಗೆ ಮತ್ತು ಆದಿತ್ಯ ರಾಜ್ ಸೇರಿದಂತೆ ನನ್ನ ಕ್ಯಾಮರಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ರಾಯ್ ಹೇಳಿದ್ದಾರೆ.

“ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್” ಚಿತ್ರವು ಮುಂಬೈನಲ್ಲಿ ವಾಸಿಸುವ ಇಬ್ಬರು ವಲಸೆ ಮಹಿಳೆಯರ ಬದುಕಿನ ಕಥೆಯನ್ನು ಸ್ಪರ್ಶಿಸುತ್ತದೆ. ಮಹತ್ವಾಕಾಂಕ್ಷಿ ನಟಿ ಥೂಯಾ ಮತ್ತು ಕಾರ್ಪೊರೇಟ್ ವೃತ್ತಿಪರೆ ಶ್ವೇತಾ ನಡುವಿನ ಒಂಟಿತನ, ಹೋರಾಟ ಮತ್ತು ಮಾನವೀಯ ಬಾಂಧವ್ಯದ ಕಥೆಯನ್ನು ಹೃದಯಸ್ಪರ್ಶಿಯಾಗಿ ಈ ಚಿತ್ರ ತೆರೆದಿಡುತ್ತದೆ. ನಾಝ್ ಶೇಖ್ ಮತ್ತು ಸುಮಿ ಬಾಘೇಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನುರಾಗ್ ಕಶ್ಯಪ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಭಾರತೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳು ರಾಯ್ ಅವರ ಸಾಧನೆಯನ್ನು ಭಾರತೀಯ ಸ್ವತಂತ್ರ ಚಲನಚಿತ್ರ ಕ್ಷೇತ್ರದ ಮಹತ್ವದ ಮೈಲಿಗಲ್ಲು ಎಂದು ಶ್ಲಾಘಿಸಿವೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಗಣ್ಯರು ರಾಯ್ ಅವರನ್ನು ಅಭಿನಂದಿಸಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತೀಯ ಕಥಾ ಹಂದರದವನ್ನು ತೆರೆದಿಟ್ಟಿರುವುದಕ್ಕೆ ದೊರೆತಿರುವ ಮಾನ್ಯತೆಯನ್ನು ಉಲ್ಲೇಖಿಸಿದ್ದಾರೆ.

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು : ಸಿಎಂ ಸಿದ್ದರಾಮಯ್ಯ

ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ...

ವೆನೆಜುವೆಲಾ ಮೇಲೆ ಅಮೆರಿಕ ದಾಳಿಗೆ ಖಂಡನೆ : ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಭಾರತದ ಎಡಪಕ್ಷಗಳು

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ಆಕ್ರಮಣವನ್ನು ಭಾರತದ ಎಡಪಕ್ಷಗಳು ತೀವ್ರವಾಗಿ ಖಂಡಿಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಬಂಧನವನ್ನು ‘ಅಪಹರಣ’ ಎಂದು ಹೇಳಿದೆ. ಹಾಗೆಯೇ, ಅಮೆರಿಕದ...

ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವು: ವರದಿ

ಶನಿವಾರ ನಡೆದ ದಾಳಿಯಲ್ಲಿ ವೆನೆಜುವೆಲಾದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನೆಜುವೆಲಾದ ಹಿರಿಯ ಅಧಿಕಾರಿಯೊಬ್ಬರು ನ್ಯೂಯಾರ್ಕ್ ಟೈಮ್ಸ್‌ಗೆ ತಿಳಿಸಿದ್ದಾರೆ, ಅವರಲ್ಲಿ ಮಿಲಿಟರಿ ಸಿಬ್ಬಂದಿ ಮತ್ತು ನಾಗರಿಕರು ಸೇರಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ...

ಅತ್ಯಾಚಾರ-ಕೊಲೆ ಅಪರಾಧಿ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ 40 ದಿನಗಳ ಪೆರೋಲ್

ಇಬ್ಬರು ಸಾಧ್ವಿಯರ ಮೇಲಿನ ಅತ್ಯಾಚಾರ ಮತ್ತು ಪತ್ರಕರ್ತನ ಹತ್ಯೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಮತ್ತೊಮ್ಮೆ 40 ದಿನಗಳ ಪೆರೋಲ್ ಮಂಜೂರಾಗಿದೆ....

ವೆನೆಜುವೆಲಾ ಮೇಲೆ ಅಮೆರಿಕಾ ದಾಳಿ: ಕಳವಳ ವ್ಯಕ್ತಪಡಿಸಿದ ಭಾರತ: ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಕರೆ

ನವದೆಹಲಿ: ಅಮೆರಿಕವು ತೈಲ ಸಮೃದ್ಧ ದೇಶದ ಮೇಲೆ ದಾಳಿ ಮಾಡಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಮಿಲಿಟರಿ ಕಾರ್ಯಾಚರಣೆಯಲ್ಲಿ ಅಪಹರಿಸಿದ ನಂತರ, ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು "ತೀವ್ರ ಕಳವಳಕಾರಿ...

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್...

ರ‍್ಯಾಗಿಂಗ್‌ಗೆ ದಲಿತ ವಿದ್ಯಾರ್ಥಿನಿ ಬಲಿ: ‘ಜಾತಿ ಮತ್ತು ಲಿಂಗ ಆಧಾರಿತ ಸಾಂಸ್ಥಿಕ ಹಿಂಸಾಚಾರದ ಗಂಭೀರ ನಿದರ್ಶನ’ ಎಂದ ಮಾನವ ಹಕ್ಕುಗಳ ಸಂಘಟನೆ

ಹಿಮಾಚಲ ಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ 19 ವರ್ಷದ ದಲಿತ ವಿದ್ಯಾರ್ಥಿನಿಯ ಸಾವಿನ ನಂತರ, ದಲಿತ ಹಕ್ಕುಗಳ ಸಂಘಟನೆಗಳು ಶುಕ್ರವಾರ ಮೂವರು ಹಿರಿಯ ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಧ್ಯಾಪಕರನ್ನು ಬಂಧಿಸಬೇಕು ಮತ್ತು ಅಧಿಕಾರಿಗಳು ಅದಕ್ಕೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ. ಈ ಬಂಧಿತರ ಮೇಲೆ ಇಸ್ರೇಲಿ...

‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ 

ಕೊಪ್ಪಳ: ಬಳ್ಳಾರಿಯಲ್ಲಿ ತಮ್ಮ ಮೇಲೆ "ಪೂರ್ವ ಯೋಜಿತ ಹತ್ಯೆ ಯತ್ನ" ನಡೆದಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಗೃಹ ಸಚಿವ...

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ...