Homeಮುಖಪುಟಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ...

ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

- Advertisement -
- Advertisement -

’82ನೇ ವೆನಿಸ್ ಚಲನಚಿತ್ರೋತ್ಸವ’ದಲ್ಲಿ ಚೊಚ್ಚಲ ಚಲನಚಿತ್ರ ನಿರ್ಮಾಪಕಿ ಅನುಪರ್ಣ ರಾಯ್ ಅವರು ತಮ್ಮ ‘ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್’ ಚಿತ್ರಕ್ಕಾಗಿ ಒರಿಝೋಂಟಿ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಅನುಪರ್ಣ ರಾಯ್ ವೆನಿಸ್‌ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ರಾಯ್ ಅವರು ಭಾವನಾತ್ಮಕ ಭಾಷಣ ಮಾಡಿದ್ದು, ಪ್ಯಾಲೆಸ್ತೀನ್‌ನ ಮಕ್ಕಳ ದುಃಸ್ಥಿತಿಯ ಬಗ್ಗೆ ಸಮಾರಂಭದಲ್ಲಿ ಹಾಜರಿದ್ದವರ ಗಮನ ಸೆಳೆದಿದ್ದಾರೆ.

“ನಾನು ಸ್ವಲ್ಪ ಸಮಯ ತೆಗೆದುಕೊಂಡು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಮತ್ತು ಅತ್ಯಂತ ವಿನಾಶಕಾರಿ ವಿಷಯದ ಬಗ್ಗೆ ಮಾತನಾಡಲು ಬಯಸುತ್ತೇನೆ. ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹವಾಗಿದೆ ಮತ್ತು ಪ್ಯಾಲೆಸ್ತೀನ್ ಅದಕ್ಕೆ ಹೊರತಾಗಿಲ್ಲ. ಇದಕ್ಕಾಗಿ ನಾನು ಯಾವುದೇ ಚಪ್ಪಾಳೆಯನ್ನು ಬಯಸುವುದಿಲ್ಲ. ಪ್ಯಾಲೆಸ್ತೀನ್ ಜೊತೆ ನಿಲ್ಲಲು ಒಂದು ಕ್ಷಣ ಯೋಚಿಸುವುದು ನಮ್ಮ ಜವಾಬ್ದಾರಿಯಾಗಿದೆ. ನನ್ನ ಮಾತುಗಳಿಂದ ನನ್ನ ದೇಶದಲ್ಲಿ ನಿರಾಸೆ ಉಂಟಾಗಬಹುದು, ಆದರೆ ನನಗೆ ಅದು ಮುಖ್ಯವಲ್ಲ” ಎಂದು ಸೆಪ್ಟೆಂಬರ್ 6ರಂದು ಪ್ರಶಸ್ತಿ ಸ್ವೀಕಾರ ಭಾಷಣದಲ್ಲಿ ರಾಯ್ ಹೇಳಿದ್ದಾರೆ.

“ನಾನು ಜಾಗತಿಕ ಪ್ರಜೆಯಾಗಿ ಜನರ ಸಮಸ್ಯೆಗಳು ಮತ್ತು ನೋವುಗಳ ಬಗ್ಗೆ ಮಾತನಾಡಲು ಬಯಸುತ್ತೇನೆ” ಎಂದು ಪಶ್ಚಿಮ ಬಂಗಾಳದ ಪುರುಲಿಯಾದವರಾದ ರಾಯ್ ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ಸಮಸ್ಯೆ ಜಾಗತಿಕ ಬಿಕ್ಕಟ್ಟಾಗಿದ್ದು, ಇಸ್ರೇಲ್‌ನಂತಹ ಪ್ರಬಲ ದೇಶವು ನ್ಯಾಯ, ಶಾಂತಿ ಮತ್ತು ಜೀವನವನ್ನು ನಾಶಪಡಿಸುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಜಾಗತಿಕ ನಾಗರಿಕಳಾಗಿ ನಾನು ಈ ಸಮಸ್ಯೆಗಳು ಮತ್ತು ಸಂಕಟಗಳ ಬಗ್ಗೆ ಮಾತನಾಡಲೇಬೇಕು. ನನ್ನ ಬಳಿ ಮೈಕ್ ಇತ್ತು, ಹಾಗಾಗಿ, ಪ್ಯಾಲೆಸ್ತೀನ್‌ ನೋವುಗಳ ಬಗ್ಗೆ ಮಾತನಾಡದೆ ಇರಲು ನನಗೆ ಸಾಧ್ಯವಾಗಲಿಲ್ಲ” ಎಂದು ರಾಯ್ ವೆನಿಸ್‌ನಿಂದ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದಾರೆ.

ನನ್ನ ಗೆಲುವು ಪುರುಲಿಯಾದ ಗೆಲುವು:ಅನುಪರ್ಣ ರಾಯ್

“ಇದು ಜನರ ನಂಬಿಕೆಗೆ ಮತ್ತು ರಂಗಮತಿಗೆ ಸಿಕ್ಕ ಜಯ. ದೇಬ್ಜಿತ್ ಸಮಂತ, ಸಕ್ಯಾದೇಬ್ ಚೌಧರಿ, ದೇಬ್ಜಿತ್ ಬ್ಯಾನರ್ಜಿ, ರೋಹಿತ್ ರಾಜ್, ಹರ್ಷ ಪಟೇಲ್, ಆದಿತ್ಯ ಪಂಡಿತ್, ಪ್ರದೀಪ್ ವಿಘ್ನವೇಲು, ಅಂಜಲಿ ಮುಲ್ಗೆ ಮತ್ತು ಆದಿತ್ಯ ರಾಜ್ ಸೇರಿದಂತೆ ನನ್ನ ಕ್ಯಾಮರಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ರಾಯ್ ಹೇಳಿದ್ದಾರೆ.

“ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್” ಚಿತ್ರವು ಮುಂಬೈನಲ್ಲಿ ವಾಸಿಸುವ ಇಬ್ಬರು ವಲಸೆ ಮಹಿಳೆಯರ ಬದುಕಿನ ಕಥೆಯನ್ನು ಸ್ಪರ್ಶಿಸುತ್ತದೆ. ಮಹತ್ವಾಕಾಂಕ್ಷಿ ನಟಿ ಥೂಯಾ ಮತ್ತು ಕಾರ್ಪೊರೇಟ್ ವೃತ್ತಿಪರೆ ಶ್ವೇತಾ ನಡುವಿನ ಒಂಟಿತನ, ಹೋರಾಟ ಮತ್ತು ಮಾನವೀಯ ಬಾಂಧವ್ಯದ ಕಥೆಯನ್ನು ಹೃದಯಸ್ಪರ್ಶಿಯಾಗಿ ಈ ಚಿತ್ರ ತೆರೆದಿಡುತ್ತದೆ. ನಾಝ್ ಶೇಖ್ ಮತ್ತು ಸುಮಿ ಬಾಘೇಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನುರಾಗ್ ಕಶ್ಯಪ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಭಾರತೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳು ರಾಯ್ ಅವರ ಸಾಧನೆಯನ್ನು ಭಾರತೀಯ ಸ್ವತಂತ್ರ ಚಲನಚಿತ್ರ ಕ್ಷೇತ್ರದ ಮಹತ್ವದ ಮೈಲಿಗಲ್ಲು ಎಂದು ಶ್ಲಾಘಿಸಿವೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಗಣ್ಯರು ರಾಯ್ ಅವರನ್ನು ಅಭಿನಂದಿಸಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತೀಯ ಕಥಾ ಹಂದರದವನ್ನು ತೆರೆದಿಟ್ಟಿರುವುದಕ್ಕೆ ದೊರೆತಿರುವ ಮಾನ್ಯತೆಯನ್ನು ಉಲ್ಲೇಖಿಸಿದ್ದಾರೆ.

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...