Homeಮುಖಪುಟಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ...

ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

- Advertisement -
- Advertisement -

’82ನೇ ವೆನಿಸ್ ಚಲನಚಿತ್ರೋತ್ಸವ’ದಲ್ಲಿ ಚೊಚ್ಚಲ ಚಲನಚಿತ್ರ ನಿರ್ಮಾಪಕಿ ಅನುಪರ್ಣ ರಾಯ್ ಅವರು ತಮ್ಮ ‘ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್’ ಚಿತ್ರಕ್ಕಾಗಿ ಒರಿಝೋಂಟಿ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಅನುಪರ್ಣ ರಾಯ್ ವೆನಿಸ್‌ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ರಾಯ್ ಅವರು ಭಾವನಾತ್ಮಕ ಭಾಷಣ ಮಾಡಿದ್ದು, ಪ್ಯಾಲೆಸ್ತೀನ್‌ನ ಮಕ್ಕಳ ದುಃಸ್ಥಿತಿಯ ಬಗ್ಗೆ ಸಮಾರಂಭದಲ್ಲಿ ಹಾಜರಿದ್ದವರ ಗಮನ ಸೆಳೆದಿದ್ದಾರೆ.

“ನಾನು ಸ್ವಲ್ಪ ಸಮಯ ತೆಗೆದುಕೊಂಡು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಮತ್ತು ಅತ್ಯಂತ ವಿನಾಶಕಾರಿ ವಿಷಯದ ಬಗ್ಗೆ ಮಾತನಾಡಲು ಬಯಸುತ್ತೇನೆ. ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹವಾಗಿದೆ ಮತ್ತು ಪ್ಯಾಲೆಸ್ತೀನ್ ಅದಕ್ಕೆ ಹೊರತಾಗಿಲ್ಲ. ಇದಕ್ಕಾಗಿ ನಾನು ಯಾವುದೇ ಚಪ್ಪಾಳೆಯನ್ನು ಬಯಸುವುದಿಲ್ಲ. ಪ್ಯಾಲೆಸ್ತೀನ್ ಜೊತೆ ನಿಲ್ಲಲು ಒಂದು ಕ್ಷಣ ಯೋಚಿಸುವುದು ನಮ್ಮ ಜವಾಬ್ದಾರಿಯಾಗಿದೆ. ನನ್ನ ಮಾತುಗಳಿಂದ ನನ್ನ ದೇಶದಲ್ಲಿ ನಿರಾಸೆ ಉಂಟಾಗಬಹುದು, ಆದರೆ ನನಗೆ ಅದು ಮುಖ್ಯವಲ್ಲ” ಎಂದು ಸೆಪ್ಟೆಂಬರ್ 6ರಂದು ಪ್ರಶಸ್ತಿ ಸ್ವೀಕಾರ ಭಾಷಣದಲ್ಲಿ ರಾಯ್ ಹೇಳಿದ್ದಾರೆ.

“ನಾನು ಜಾಗತಿಕ ಪ್ರಜೆಯಾಗಿ ಜನರ ಸಮಸ್ಯೆಗಳು ಮತ್ತು ನೋವುಗಳ ಬಗ್ಗೆ ಮಾತನಾಡಲು ಬಯಸುತ್ತೇನೆ” ಎಂದು ಪಶ್ಚಿಮ ಬಂಗಾಳದ ಪುರುಲಿಯಾದವರಾದ ರಾಯ್ ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ಸಮಸ್ಯೆ ಜಾಗತಿಕ ಬಿಕ್ಕಟ್ಟಾಗಿದ್ದು, ಇಸ್ರೇಲ್‌ನಂತಹ ಪ್ರಬಲ ದೇಶವು ನ್ಯಾಯ, ಶಾಂತಿ ಮತ್ತು ಜೀವನವನ್ನು ನಾಶಪಡಿಸುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಜಾಗತಿಕ ನಾಗರಿಕಳಾಗಿ ನಾನು ಈ ಸಮಸ್ಯೆಗಳು ಮತ್ತು ಸಂಕಟಗಳ ಬಗ್ಗೆ ಮಾತನಾಡಲೇಬೇಕು. ನನ್ನ ಬಳಿ ಮೈಕ್ ಇತ್ತು, ಹಾಗಾಗಿ, ಪ್ಯಾಲೆಸ್ತೀನ್‌ ನೋವುಗಳ ಬಗ್ಗೆ ಮಾತನಾಡದೆ ಇರಲು ನನಗೆ ಸಾಧ್ಯವಾಗಲಿಲ್ಲ” ಎಂದು ರಾಯ್ ವೆನಿಸ್‌ನಿಂದ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದಾರೆ.

ನನ್ನ ಗೆಲುವು ಪುರುಲಿಯಾದ ಗೆಲುವು:ಅನುಪರ್ಣ ರಾಯ್

“ಇದು ಜನರ ನಂಬಿಕೆಗೆ ಮತ್ತು ರಂಗಮತಿಗೆ ಸಿಕ್ಕ ಜಯ. ದೇಬ್ಜಿತ್ ಸಮಂತ, ಸಕ್ಯಾದೇಬ್ ಚೌಧರಿ, ದೇಬ್ಜಿತ್ ಬ್ಯಾನರ್ಜಿ, ರೋಹಿತ್ ರಾಜ್, ಹರ್ಷ ಪಟೇಲ್, ಆದಿತ್ಯ ಪಂಡಿತ್, ಪ್ರದೀಪ್ ವಿಘ್ನವೇಲು, ಅಂಜಲಿ ಮುಲ್ಗೆ ಮತ್ತು ಆದಿತ್ಯ ರಾಜ್ ಸೇರಿದಂತೆ ನನ್ನ ಕ್ಯಾಮರಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ರಾಯ್ ಹೇಳಿದ್ದಾರೆ.

“ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್” ಚಿತ್ರವು ಮುಂಬೈನಲ್ಲಿ ವಾಸಿಸುವ ಇಬ್ಬರು ವಲಸೆ ಮಹಿಳೆಯರ ಬದುಕಿನ ಕಥೆಯನ್ನು ಸ್ಪರ್ಶಿಸುತ್ತದೆ. ಮಹತ್ವಾಕಾಂಕ್ಷಿ ನಟಿ ಥೂಯಾ ಮತ್ತು ಕಾರ್ಪೊರೇಟ್ ವೃತ್ತಿಪರೆ ಶ್ವೇತಾ ನಡುವಿನ ಒಂಟಿತನ, ಹೋರಾಟ ಮತ್ತು ಮಾನವೀಯ ಬಾಂಧವ್ಯದ ಕಥೆಯನ್ನು ಹೃದಯಸ್ಪರ್ಶಿಯಾಗಿ ಈ ಚಿತ್ರ ತೆರೆದಿಡುತ್ತದೆ. ನಾಝ್ ಶೇಖ್ ಮತ್ತು ಸುಮಿ ಬಾಘೇಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನುರಾಗ್ ಕಶ್ಯಪ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಭಾರತೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳು ರಾಯ್ ಅವರ ಸಾಧನೆಯನ್ನು ಭಾರತೀಯ ಸ್ವತಂತ್ರ ಚಲನಚಿತ್ರ ಕ್ಷೇತ್ರದ ಮಹತ್ವದ ಮೈಲಿಗಲ್ಲು ಎಂದು ಶ್ಲಾಘಿಸಿವೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಗಣ್ಯರು ರಾಯ್ ಅವರನ್ನು ಅಭಿನಂದಿಸಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತೀಯ ಕಥಾ ಹಂದರದವನ್ನು ತೆರೆದಿಟ್ಟಿರುವುದಕ್ಕೆ ದೊರೆತಿರುವ ಮಾನ್ಯತೆಯನ್ನು ಉಲ್ಲೇಖಿಸಿದ್ದಾರೆ.

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...