Homeಮುಖಪುಟಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ...

ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

- Advertisement -
- Advertisement -

’82ನೇ ವೆನಿಸ್ ಚಲನಚಿತ್ರೋತ್ಸವ’ದಲ್ಲಿ ಚೊಚ್ಚಲ ಚಲನಚಿತ್ರ ನಿರ್ಮಾಪಕಿ ಅನುಪರ್ಣ ರಾಯ್ ಅವರು ತಮ್ಮ ‘ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್’ ಚಿತ್ರಕ್ಕಾಗಿ ಒರಿಝೋಂಟಿ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಅನುಪರ್ಣ ರಾಯ್ ವೆನಿಸ್‌ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ರಾಯ್ ಅವರು ಭಾವನಾತ್ಮಕ ಭಾಷಣ ಮಾಡಿದ್ದು, ಪ್ಯಾಲೆಸ್ತೀನ್‌ನ ಮಕ್ಕಳ ದುಃಸ್ಥಿತಿಯ ಬಗ್ಗೆ ಸಮಾರಂಭದಲ್ಲಿ ಹಾಜರಿದ್ದವರ ಗಮನ ಸೆಳೆದಿದ್ದಾರೆ.

“ನಾನು ಸ್ವಲ್ಪ ಸಮಯ ತೆಗೆದುಕೊಂಡು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಅತ್ಯಂತ ದೊಡ್ಡ ಮತ್ತು ಅತ್ಯಂತ ವಿನಾಶಕಾರಿ ವಿಷಯದ ಬಗ್ಗೆ ಮಾತನಾಡಲು ಬಯಸುತ್ತೇನೆ. ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹವಾಗಿದೆ ಮತ್ತು ಪ್ಯಾಲೆಸ್ತೀನ್ ಅದಕ್ಕೆ ಹೊರತಾಗಿಲ್ಲ. ಇದಕ್ಕಾಗಿ ನಾನು ಯಾವುದೇ ಚಪ್ಪಾಳೆಯನ್ನು ಬಯಸುವುದಿಲ್ಲ. ಪ್ಯಾಲೆಸ್ತೀನ್ ಜೊತೆ ನಿಲ್ಲಲು ಒಂದು ಕ್ಷಣ ಯೋಚಿಸುವುದು ನಮ್ಮ ಜವಾಬ್ದಾರಿಯಾಗಿದೆ. ನನ್ನ ಮಾತುಗಳಿಂದ ನನ್ನ ದೇಶದಲ್ಲಿ ನಿರಾಸೆ ಉಂಟಾಗಬಹುದು, ಆದರೆ ನನಗೆ ಅದು ಮುಖ್ಯವಲ್ಲ” ಎಂದು ಸೆಪ್ಟೆಂಬರ್ 6ರಂದು ಪ್ರಶಸ್ತಿ ಸ್ವೀಕಾರ ಭಾಷಣದಲ್ಲಿ ರಾಯ್ ಹೇಳಿದ್ದಾರೆ.

“ನಾನು ಜಾಗತಿಕ ಪ್ರಜೆಯಾಗಿ ಜನರ ಸಮಸ್ಯೆಗಳು ಮತ್ತು ನೋವುಗಳ ಬಗ್ಗೆ ಮಾತನಾಡಲು ಬಯಸುತ್ತೇನೆ” ಎಂದು ಪಶ್ಚಿಮ ಬಂಗಾಳದ ಪುರುಲಿಯಾದವರಾದ ರಾಯ್ ತಿಳಿಸಿದ್ದಾರೆ.

“ಪ್ಯಾಲೆಸ್ತೀನ್ ಸಮಸ್ಯೆ ಜಾಗತಿಕ ಬಿಕ್ಕಟ್ಟಾಗಿದ್ದು, ಇಸ್ರೇಲ್‌ನಂತಹ ಪ್ರಬಲ ದೇಶವು ನ್ಯಾಯ, ಶಾಂತಿ ಮತ್ತು ಜೀವನವನ್ನು ನಾಶಪಡಿಸುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಜಾಗತಿಕ ನಾಗರಿಕಳಾಗಿ ನಾನು ಈ ಸಮಸ್ಯೆಗಳು ಮತ್ತು ಸಂಕಟಗಳ ಬಗ್ಗೆ ಮಾತನಾಡಲೇಬೇಕು. ನನ್ನ ಬಳಿ ಮೈಕ್ ಇತ್ತು, ಹಾಗಾಗಿ, ಪ್ಯಾಲೆಸ್ತೀನ್‌ ನೋವುಗಳ ಬಗ್ಗೆ ಮಾತನಾಡದೆ ಇರಲು ನನಗೆ ಸಾಧ್ಯವಾಗಲಿಲ್ಲ” ಎಂದು ರಾಯ್ ವೆನಿಸ್‌ನಿಂದ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ್ದಾರೆ.

ನನ್ನ ಗೆಲುವು ಪುರುಲಿಯಾದ ಗೆಲುವು:ಅನುಪರ್ಣ ರಾಯ್

“ಇದು ಜನರ ನಂಬಿಕೆಗೆ ಮತ್ತು ರಂಗಮತಿಗೆ ಸಿಕ್ಕ ಜಯ. ದೇಬ್ಜಿತ್ ಸಮಂತ, ಸಕ್ಯಾದೇಬ್ ಚೌಧರಿ, ದೇಬ್ಜಿತ್ ಬ್ಯಾನರ್ಜಿ, ರೋಹಿತ್ ರಾಜ್, ಹರ್ಷ ಪಟೇಲ್, ಆದಿತ್ಯ ಪಂಡಿತ್, ಪ್ರದೀಪ್ ವಿಘ್ನವೇಲು, ಅಂಜಲಿ ಮುಲ್ಗೆ ಮತ್ತು ಆದಿತ್ಯ ರಾಜ್ ಸೇರಿದಂತೆ ನನ್ನ ಕ್ಯಾಮರಾ ಸಿಬ್ಬಂದಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ರಾಯ್ ಹೇಳಿದ್ದಾರೆ.

“ಸಾಂಗ್ಸ್ ಆಫ್ ಫಾರ್ಗಾಟನ್ ಟ್ರೀಸ್” ಚಿತ್ರವು ಮುಂಬೈನಲ್ಲಿ ವಾಸಿಸುವ ಇಬ್ಬರು ವಲಸೆ ಮಹಿಳೆಯರ ಬದುಕಿನ ಕಥೆಯನ್ನು ಸ್ಪರ್ಶಿಸುತ್ತದೆ. ಮಹತ್ವಾಕಾಂಕ್ಷಿ ನಟಿ ಥೂಯಾ ಮತ್ತು ಕಾರ್ಪೊರೇಟ್ ವೃತ್ತಿಪರೆ ಶ್ವೇತಾ ನಡುವಿನ ಒಂಟಿತನ, ಹೋರಾಟ ಮತ್ತು ಮಾನವೀಯ ಬಾಂಧವ್ಯದ ಕಥೆಯನ್ನು ಹೃದಯಸ್ಪರ್ಶಿಯಾಗಿ ಈ ಚಿತ್ರ ತೆರೆದಿಡುತ್ತದೆ. ನಾಝ್ ಶೇಖ್ ಮತ್ತು ಸುಮಿ ಬಾಘೇಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಅನುರಾಗ್ ಕಶ್ಯಪ್ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಭಾರತೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳು ರಾಯ್ ಅವರ ಸಾಧನೆಯನ್ನು ಭಾರತೀಯ ಸ್ವತಂತ್ರ ಚಲನಚಿತ್ರ ಕ್ಷೇತ್ರದ ಮಹತ್ವದ ಮೈಲಿಗಲ್ಲು ಎಂದು ಶ್ಲಾಘಿಸಿವೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕ ಗಣ್ಯರು ರಾಯ್ ಅವರನ್ನು ಅಭಿನಂದಿಸಿದ್ದು, ಜಾಗತಿಕ ವೇದಿಕೆಯಲ್ಲಿ ಭಾರತೀಯ ಕಥಾ ಹಂದರದವನ್ನು ತೆರೆದಿಟ್ಟಿರುವುದಕ್ಕೆ ದೊರೆತಿರುವ ಮಾನ್ಯತೆಯನ್ನು ಉಲ್ಲೇಖಿಸಿದ್ದಾರೆ.

ಹಮಾಸ್ ಗುರಿಯಾಗಿಸಿ ದೋಹಾ ಮೇಲೆ ದಾಳಿ: ಇಸ್ರೇಲ್ ಕೃತ್ಯಕ್ಕೆ ಜಾಗತಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...