Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...