Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...