Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...