Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...