Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...