Homeಚಳವಳಿಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

ಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

- Advertisement -
- Advertisement -

ನಿರ್ಭಯ ಅತ್ಯಾಚಾರದ ಆರೋಪಿಗಳಿಗೆ ಗಲ್ಲು ಶಿಕ್ಷೆ ಸನಿಹವಾಗಿದೆ. ಹೈದರಾಬಾದ್‌ ಪಶುವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ. ಆಂಧ್ರದಲ್ಲಿ ದಿಶಾ ಮಸೂದೆ ಜಾರಿಗೊಳಿಸಲಾಗಿದೆ. ಇದೇ ನಿಟ್ಟಿನಲ್ಲಿ ದೆಹಲಿಯಲ್ಲಿಯೂ ಸಹ ಅತ್ಯಾಚಾರ ತಡೆಗೆ ಬೃಹತ್‌ ಅಭಿಯಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ ನಿರ್ಧರಿಸಿದೆ.

ಮಹಿಳೆಯರ ಮೇಲಿನ ದೌರ್ಜನ್ಯಗಳ ಹೆಚ್ಚಳವು ಮಾನಸಿಕ ಅಧಃಪತನದ ಸಂಕೇತವಾಗಿದೆ. ಆದ್ದರಿಂದ, ಮಹಿಳೆಯರುಮ ಹೆಣ್ಣು ಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಬಾರದು ಎಂಬ ಅರಿವನ್ನು ಪ್ರತಿ ಶಾಲೆ ಮತ್ತು ಕಾಲೇಜುಗಳಲ್ಲಿನ ಹುಡಗರಿಗೆ ಮೂಡಿಸಲು ಮುಂದಾಗಿದ್ದೇವೆ. ಆ ವಿಚಾರದ ಕುರಿತು ಹುಡುಗರಿಗೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದಿಲ್ಲ ಎಂಬ ಪ್ರತಿಜ್ಞೆ ಸಹ ಬೋದಿಸಲಿದ್ದೇವೆ ಎಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನು ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವು ದೆಹಲಿಯಾದ್ಯಂತ ನಿರಂತರವಾಗಿ ನಡೆಯಲಿದೆ. ಇದು ಹುಡುಗರಿಗೆ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಚಿಕ್ಕ ಮಕ್ಕಳಿನಲ್ಲಿಯೇ ಯಾವುದು ಸರಿ, ಯಾವುದು ತಪ್ಪು ಎಂದು ಅರಿವು ಮೂಡಿಸಲು ಈ ವಿಧಾನವೂ ಸೂಕ್ತವಾಗಿದೆ. ಇದು ಮಕ್ಕಳನ್ನು ಹೆಣ್ಣು ಮಕ್ಕಳ ಕುರಿತು ಸೂಕ್ಷ್ಮತೆಯನ್ನು ಬೆಳೆಸುತ್ತದೆ.

ಎಲ್ಲಾ ಹುಡುಗಿಯರನ್ನು ತಮ್ಮ ಸಹೋದರರೊಂದಿಗೆ ಮಾತನಾಡಲು ಕೇಳಲಾಗುತ್ತದೆ. ಮತ್ತು ಅವರು ಯಾವುದೇ ಮಹಿಳೆಯೊಂದಿಗೆ ಕೆಟ್ಟದಾಗಿ ವರ್ತಿಸುವುದಿಲ್ಲ ಎಂದು ತಿಳಿಸಿ, ಮತ್ತು ಅವರ ಸಹೋದರರು ಪ್ರಮಾಣ ವಚನ ಸ್ವೀಕರಿಸುವಂತೆ ಮಾಡುತ್ತಾರೆ. ಮತ್ತು ಅವನು ಏನಾದರೂ ತಪ್ಪು ಮಾಡಿದರೆ, ‘ನಾನು ನಿಮ್ಮೊಂದಿಗೆ ಎಲ್ಲ ಸಂಬಂಧಗಳನ್ನು ಮುರಿಯುತ್ತಿದ್ದೇನೆ’ ಎಂದು ಹುಡುಗಿ ತನ್ನ ಸಹೋದರನಿಗೆ ಹೇಳಬೇಕು ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವನ್ನು ಬಹಳಷ್ಟು ಮಹಿಳಾ ಸಂಘಟನೆಗಳು ಸ್ವಾಗತಿಸುವ ನಿರೀಕ್ಷೆಯಿದೆ. ಏಕೆಂದರೆ ಬಹಳಷ್ಟು ಅತ್ಯಾಚಾರ ಮತ್ತು ಲೈಂಗಿಕ ಹಿಂಸೆಗಳಿಗೆ ಪರಿಹಾರಗಲು ತಳಮಟ್ಟದಲ್ಲಿರುತ್ತವೆ. ಸಾಕಷ್ಟು ಬಾರಿ ಅತ್ಯಾಚಾರಕ್ಕೊಳಗಾಗಿ ಹೆಣ್ಣು ಮಗಳೇ ಅದಕ್ಕೆ ಕಾರಣ, ಅವಳ ಬಟ್ಟೆ ಕಾರಣ, ಅವಳ ನಡತೆ ಕಾರಣ ಎಂದು ದೂರುವ ಕೆಟ್ಟ ಪರಿಪಾಠ ರೂಡಿಯಲ್ಲಿದೆ. ಅದಕ್ಕೆ ಬದಲಾಗಿ ಹೆಣ್ಣು ಮಕ್ಕಳನ್ನು ಗಂಡು ಮಕ್ಕಳು ನೋಡುವ ದೃಷ್ಟಿಕೋನವನ್ನು ಶಿಕ್ಷಣದ ಮೂಲಕ ಬದಲಿಸಬೇಕಾಗಿದೆ.

ಹಾಗಾಗಿ ಗಂಡು ಮಕ್ಕಳು ಉತ್ತಮ ಶಿಕ್ಷಣ ಪಡೆದು ಹೆಣ್ಣು ಮಕ್ಕಳನ್ನು ಸಹ ಸಮಾನಳೆಂದು ನೋಡಿದ್ದಲ್ಲಿ, ಅತ್ಯಾಚಾರ ಅತ್ಯಂತ ಘೋರ ಪಾಪ ಎಂದು ಅರಿತುಕೊಂಡಲ್ಲಿ ಅವುಗಳ ಪ್ರಮಾಣ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ದೆಹಲಿ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸುತ್ತಲೇ ಉಳಿದ ರಾಜ್ಯಗಳು ಸಹ ಇದನ್ನು ಅನುಸರಿಸಿದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....