Homeಚಳವಳಿಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

ಅತ್ಯಾಚಾರ ತಡೆಗೆ ದೆಹಲಿಯಲ್ಲಿ ಹುಡುಗರಿಗೆ ಅರಿವು ಮತ್ತು ಪ್ರತಿಜ್ಞೆ: ಕೇಜ್ರಿವಾಲ್‌

- Advertisement -
- Advertisement -

ನಿರ್ಭಯ ಅತ್ಯಾಚಾರದ ಆರೋಪಿಗಳಿಗೆ ಗಲ್ಲು ಶಿಕ್ಷೆ ಸನಿಹವಾಗಿದೆ. ಹೈದರಾಬಾದ್‌ ಪಶುವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ. ಆಂಧ್ರದಲ್ಲಿ ದಿಶಾ ಮಸೂದೆ ಜಾರಿಗೊಳಿಸಲಾಗಿದೆ. ಇದೇ ನಿಟ್ಟಿನಲ್ಲಿ ದೆಹಲಿಯಲ್ಲಿಯೂ ಸಹ ಅತ್ಯಾಚಾರ ತಡೆಗೆ ಬೃಹತ್‌ ಅಭಿಯಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಸರ್ಕಾರ ನಿರ್ಧರಿಸಿದೆ.

ಮಹಿಳೆಯರ ಮೇಲಿನ ದೌರ್ಜನ್ಯಗಳ ಹೆಚ್ಚಳವು ಮಾನಸಿಕ ಅಧಃಪತನದ ಸಂಕೇತವಾಗಿದೆ. ಆದ್ದರಿಂದ, ಮಹಿಳೆಯರುಮ ಹೆಣ್ಣು ಮಕ್ಕಳೊಂದಿಗೆ ಕೆಟ್ಟದಾಗಿ ವರ್ತಿಸಬಾರದು ಎಂಬ ಅರಿವನ್ನು ಪ್ರತಿ ಶಾಲೆ ಮತ್ತು ಕಾಲೇಜುಗಳಲ್ಲಿನ ಹುಡಗರಿಗೆ ಮೂಡಿಸಲು ಮುಂದಾಗಿದ್ದೇವೆ. ಆ ವಿಚಾರದ ಕುರಿತು ಹುಡುಗರಿಗೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದಿಲ್ಲ ಎಂಬ ಪ್ರತಿಜ್ಞೆ ಸಹ ಬೋದಿಸಲಿದ್ದೇವೆ ಎಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನು ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವು ದೆಹಲಿಯಾದ್ಯಂತ ನಿರಂತರವಾಗಿ ನಡೆಯಲಿದೆ. ಇದು ಹುಡುಗರಿಗೆ ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಚಿಕ್ಕ ಮಕ್ಕಳಿನಲ್ಲಿಯೇ ಯಾವುದು ಸರಿ, ಯಾವುದು ತಪ್ಪು ಎಂದು ಅರಿವು ಮೂಡಿಸಲು ಈ ವಿಧಾನವೂ ಸೂಕ್ತವಾಗಿದೆ. ಇದು ಮಕ್ಕಳನ್ನು ಹೆಣ್ಣು ಮಕ್ಕಳ ಕುರಿತು ಸೂಕ್ಷ್ಮತೆಯನ್ನು ಬೆಳೆಸುತ್ತದೆ.

ಎಲ್ಲಾ ಹುಡುಗಿಯರನ್ನು ತಮ್ಮ ಸಹೋದರರೊಂದಿಗೆ ಮಾತನಾಡಲು ಕೇಳಲಾಗುತ್ತದೆ. ಮತ್ತು ಅವರು ಯಾವುದೇ ಮಹಿಳೆಯೊಂದಿಗೆ ಕೆಟ್ಟದಾಗಿ ವರ್ತಿಸುವುದಿಲ್ಲ ಎಂದು ತಿಳಿಸಿ, ಮತ್ತು ಅವರ ಸಹೋದರರು ಪ್ರಮಾಣ ವಚನ ಸ್ವೀಕರಿಸುವಂತೆ ಮಾಡುತ್ತಾರೆ. ಮತ್ತು ಅವನು ಏನಾದರೂ ತಪ್ಪು ಮಾಡಿದರೆ, ‘ನಾನು ನಿಮ್ಮೊಂದಿಗೆ ಎಲ್ಲ ಸಂಬಂಧಗಳನ್ನು ಮುರಿಯುತ್ತಿದ್ದೇನೆ’ ಎಂದು ಹುಡುಗಿ ತನ್ನ ಸಹೋದರನಿಗೆ ಹೇಳಬೇಕು ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: 14ದಿನಗಳಲ್ಲಿ ವಿಚಾರಣೆ, 21 ದಿನಗಳಲ್ಲಿ ಶಿಕ್ಷೆ ಪ್ರಕಟ: ಅತ್ಯಾಚಾರದ ವಿರುದ್ಧ ದಿಶಾ ಮಸೂದೆಗೆ ಆಂಧ್ರ ಅಸ್ತು

ಈ ಅಭಿಯಾನವನ್ನು ಬಹಳಷ್ಟು ಮಹಿಳಾ ಸಂಘಟನೆಗಳು ಸ್ವಾಗತಿಸುವ ನಿರೀಕ್ಷೆಯಿದೆ. ಏಕೆಂದರೆ ಬಹಳಷ್ಟು ಅತ್ಯಾಚಾರ ಮತ್ತು ಲೈಂಗಿಕ ಹಿಂಸೆಗಳಿಗೆ ಪರಿಹಾರಗಲು ತಳಮಟ್ಟದಲ್ಲಿರುತ್ತವೆ. ಸಾಕಷ್ಟು ಬಾರಿ ಅತ್ಯಾಚಾರಕ್ಕೊಳಗಾಗಿ ಹೆಣ್ಣು ಮಗಳೇ ಅದಕ್ಕೆ ಕಾರಣ, ಅವಳ ಬಟ್ಟೆ ಕಾರಣ, ಅವಳ ನಡತೆ ಕಾರಣ ಎಂದು ದೂರುವ ಕೆಟ್ಟ ಪರಿಪಾಠ ರೂಡಿಯಲ್ಲಿದೆ. ಅದಕ್ಕೆ ಬದಲಾಗಿ ಹೆಣ್ಣು ಮಕ್ಕಳನ್ನು ಗಂಡು ಮಕ್ಕಳು ನೋಡುವ ದೃಷ್ಟಿಕೋನವನ್ನು ಶಿಕ್ಷಣದ ಮೂಲಕ ಬದಲಿಸಬೇಕಾಗಿದೆ.

ಹಾಗಾಗಿ ಗಂಡು ಮಕ್ಕಳು ಉತ್ತಮ ಶಿಕ್ಷಣ ಪಡೆದು ಹೆಣ್ಣು ಮಕ್ಕಳನ್ನು ಸಹ ಸಮಾನಳೆಂದು ನೋಡಿದ್ದಲ್ಲಿ, ಅತ್ಯಾಚಾರ ಅತ್ಯಂತ ಘೋರ ಪಾಪ ಎಂದು ಅರಿತುಕೊಂಡಲ್ಲಿ ಅವುಗಳ ಪ್ರಮಾಣ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ದೆಹಲಿ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸುತ್ತಲೇ ಉಳಿದ ರಾಜ್ಯಗಳು ಸಹ ಇದನ್ನು ಅನುಸರಿಸಿದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...