Homeಮುಖಪುಟ‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

- Advertisement -
- Advertisement -

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರ್ಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕರಾಗಿ ಚುನಾಯಿತರಾದ ಎಲ್ಲರದ್ದೂ ಸಮಾನ ಶ್ರಮವಿದೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ. ಯಾರೋ ಇಬ್ಬರು ಇದರ ‘ಕ್ರೆಡಿಟ್‌’ ತೆಗೆದುಕೊಳ್ಳಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಟೀಕಿಸಿದರು.

‘ಡಾ.ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್‌ಗೆ ಬಲ ಬಂದಿದೆ. ಸರ್ಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ’ ಎಂದರು.

‘ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಪರಮೇಶ್ವರ ಅವರು ಈ ಹಿಂದೆಯೂ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ನಾನು ಕೂಡ ಆಕಾಂಕ್ಷಿ ಆಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಹೇಳಿದರು.

‘ಒನ್‌ ಮ್ಯಾನ್‌ ಶೋ’ ವಿಚಾರವನ್ನು ನಾನು ನಂಬುವುದಿಲ್ಲ. ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್‌ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ. ಅದು ಬೆಂಗಳೂರಿನಲ್ಲಿ ನಡೆದಿದ್ದಲ್ಲ. ಅಂಥ ಚರ್ಚೆಗಳು ದೆಹಲಿಯಲ್ಲಿ ಮಾತ್ರ ನಡೆಯುತ್ತವೆ. ಸದ್ಯ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆಗೆ ದೆಹಲಿಗೆ ಬನ್ನಿ ಎಂದು ನನ್ನನ್ನು ಕರೆದರೆ ಖಂಡಿತ ಹೋಗುತ್ತೇನೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಇಂಥದ್ದಕ್ಕೆಲ್ಲ ‘ತ್ಯಾಗ’ ಎಂಬ ಪದ ಸರಿಯಲ್ಲ’ ಎಂದೂ ಅವರು ಸೂಚ್ಯವಾಗಿ ಹೇಳಿದರು.

‘ಮಾಜಿ ಸಚಿವ ರಾಜಣ್ಣ ಹೇಳಿದಂತೆ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಈಗಾಗಲೇ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ಶೀಘ್ರ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದ್ದಾರೆ’ ಎಂದು ಸಚಿವ ಹೇಳಿದರು.

‘ನೀವು ಸಿ.ಎಂ ರೇಸ್‌ನಲ್ಲಿ ನಿಂತಿದ್ದೀರಾ’ ಎಂಬ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಸತೀಶ ಜಾರಕಿಹೊಳಿ, ‘ಅದನ್ನು ಕೇಳಬೇಡಿ. ಈಗ ಹೇಳುವ ಅಗತ್ಯವೇ ಇಲ್ಲ’ ಎಂದರು.

‘1960ರಲ್ಲಿ ತೇನ್‌ಸಿಂಗ್ ನೊರ್ಗೆ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್‌ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಡಿ.ಕೆ.ಶಿವಕುಮಾರ್‌ ವಿರುದ್ಧ ವ್ಯಂಗ್ಯವಾಡಿದರು.

ಡಿ.ಕೆ.ಶಿವಕುಮಾರ ಜೈಲಿಗೆ ಹೋಗಿ ಶಾಸಕರನ್ನು ಭೇಟಿ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಶಾಸಕರಿದ್ದಾರೆ. ಹಾಗಾಗಿ, ಹೋಗಿ ಭೇಟಿಯಾಗಿ ಬಂದಿದ್ದಾರೆ. ಹಿಂದೆಯೂ ಒಂದು ಸಾರಿ ಹೋಗಿ ಭೇಟಿಯಾಗಿದ್ದರು. ಇದರಲ್ಲಿ ‘ಅಂಡರ್ ಕರೆಂಟ್ ಶಾಕ್’ ಏನಿಲ್ಲ. ನಮ್ಮದೂ ಕರೆಂಟ್ ಏನಿಲ್ಲ. ಎಲ್ಲವೂ ಸರಿ ಇದೆ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...