Homeಮುಖಪುಟ‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

‘ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ’: ಸತೀಶ ಜಾರಕಿಹೊಳಿ 

- Advertisement -
- Advertisement -

‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಯಾರೊಬ್ಬರ ಶ್ರಮದಿಂದ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರ ಶ್ರಮವೂ ಇದೆ. ನಮಗಿರುವ 1.25 ಕೋಟಿ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ತನ್ನಿಂದಲೇ ಸರ್ಕಾರ ರಚನೆಯಾಗಿದೆ ಎಂದು ಯಾರಾದರೂ ಹೇಳಿದರೆ ಅದನ್ನು ನಾನು ಒಪ್ಪುವುದಿಲ್ಲ. ಅದು ನ್ಯಾಯವೂ ಅಲ್ಲ. ಎಲ್ಲರದ್ದೂ ಸಮಾನ ಶ್ರಮವಿದೆ, ಸಮಾನ ಪ್ರಾಧಾನ್ಯತೆ ಸಿಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕರಾಗಿ ಚುನಾಯಿತರಾದ ಎಲ್ಲರದ್ದೂ ಸಮಾನ ಶ್ರಮವಿದೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಕಷ್ಟ, ನಷ್ಟ ಅನುಭವಿಸಿದ್ದಾರೆ. ಯಾರೋ ಇಬ್ಬರು ಇದರ ‘ಕ್ರೆಡಿಟ್‌’ ತೆಗೆದುಕೊಳ್ಳಲು ಬರುವುದಿಲ್ಲ’ ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಟೀಕಿಸಿದರು.

‘ಡಾ.ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎಂಟು ವರ್ಷ ದುಡಿದಿದ್ದಾರೆ. ಅವರ ಕಾಲದಲ್ಲಿ ಮಾಡಿದ ಕಾರ್ಯಕ್ರಮಗಳ ಕಾರಣದಿಂದ ಕಾಂಗ್ರೆಸ್‌ಗೆ ಬಲ ಬಂದಿದೆ. ಸರ್ಕಾರ ರಚನೆ ಮಾಡುವಷ್ಟು ಪಕ್ಷವನ್ನು ಸಿದ್ಧಪಡಿಸಿದವರಲ್ಲಿ ಅವರೂ ಒಬ್ಬರು. ಅವರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ನನ್ನ ಒತ್ತಾಸೆ’ ಎಂದರು.

‘ನಾನು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಪರಮೇಶ್ವರ ಅವರು ಈ ಹಿಂದೆಯೂ ಹೇಳಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ನಾನು ಕೂಡ ಆಕಾಂಕ್ಷಿ ಆಗಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟರು, ಅಲ್ಪಸಂಖ್ಯಾತ ಸಮುದಾಯದವರೇ ಮುಖ್ಯ ಮತದಾರರು. ಹಾಗಾಗಿ, ಆ ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಬೇಕಿದೆ’ ಎಂದು ಹೇಳಿದರು.

‘ಒನ್‌ ಮ್ಯಾನ್‌ ಶೋ’ ವಿಚಾರವನ್ನು ನಾನು ನಂಬುವುದಿಲ್ಲ. ಮುಖ್ಯಮಂತ್ರಿ ಯಾರಾಗಬೇಕು, ಯಾವಾಗ ಆಗಬೇಕು ಎಂದು ಹೈಕಮಾಂಡ್‌ ನಿರ್ಧರಿಸುತ್ತದೆ. ಎರಡೂವರೆ ವರ್ಷದ ನಂತರ ಅಧಿಕಾರ ಹಸ್ತಾಂತರ ಮಾಡಬೇಕು ಎಂಬ ವಿಚಾರ ನನಗೆ ಗೊತ್ತಿಲ್ಲ. ಅದು ಬೆಂಗಳೂರಿನಲ್ಲಿ ನಡೆದಿದ್ದಲ್ಲ. ಅಂಥ ಚರ್ಚೆಗಳು ದೆಹಲಿಯಲ್ಲಿ ಮಾತ್ರ ನಡೆಯುತ್ತವೆ. ಸದ್ಯ ಯಾವುದೇ ಚರ್ಚೆಯೂ ನಡೆದಿಲ್ಲ. ಚರ್ಚೆಗೆ ದೆಹಲಿಗೆ ಬನ್ನಿ ಎಂದು ನನ್ನನ್ನು ಕರೆದರೆ ಖಂಡಿತ ಹೋಗುತ್ತೇನೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕೆಲವರಿಗೆ ಅಧಿಕಾರ ಇಂದೇ ಬರಬಹುದು ಅಥವಾ ಇಂದೇ ಹೋಗಬಹುದು. ಮತ್ತೆ ಕೆಲವರಿಗೆ ಒಂದು ವರ್ಷ ಬಿಟ್ಟು ಬರಬಹುದು, ಕೆಲವರಿಗೆ ಹೋಗಲೂಬಹುದು. ಇಂಥದ್ದಕ್ಕೆಲ್ಲ ‘ತ್ಯಾಗ’ ಎಂಬ ಪದ ಸರಿಯಲ್ಲ’ ಎಂದೂ ಅವರು ಸೂಚ್ಯವಾಗಿ ಹೇಳಿದರು.

‘ಮಾಜಿ ಸಚಿವ ರಾಜಣ್ಣ ಹೇಳಿದಂತೆ ನವೆಂಬರ್‌ನಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಯಥಾಸ್ಥಿತಿ ಮುಂದುವರಿಯುತ್ತದೆ. ಈಗಾಗಲೇ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. ಶೀಘ್ರ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಿದ್ದಾರೆ’ ಎಂದು ಸಚಿವ ಹೇಳಿದರು.

‘ನೀವು ಸಿ.ಎಂ ರೇಸ್‌ನಲ್ಲಿ ನಿಂತಿದ್ದೀರಾ’ ಎಂಬ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಸತೀಶ ಜಾರಕಿಹೊಳಿ, ‘ಅದನ್ನು ಕೇಳಬೇಡಿ. ಈಗ ಹೇಳುವ ಅಗತ್ಯವೇ ಇಲ್ಲ’ ಎಂದರು.

‘1960ರಲ್ಲಿ ತೇನ್‌ಸಿಂಗ್ ನೊರ್ಗೆ ಹಿಮಾಲಯ ಪರ್ವತ ಏರಿದರು. ಆಗ ಜಗತ್ತಿನ ಎಲ್ಲ ಪತ್ರಿಕೆಗಳೂ ತೇನ್‌ಸಿಂಗ್ ಬಗ್ಗೆ ಮಾತ್ರ ಬರೆದವು. ಅವರ ಜೊತೆಗೆ ಇನ್ನೂ 14 ಜನ ಕೂಡ ಇದ್ದರು. ಅವರ ಹೆಸರು ಎಲ್ಲೂ ಬರಲಿಲ್ಲ. ಇದು ಹಾಗೇ ಆಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಡಿ.ಕೆ.ಶಿವಕುಮಾರ್‌ ವಿರುದ್ಧ ವ್ಯಂಗ್ಯವಾಡಿದರು.

ಡಿ.ಕೆ.ಶಿವಕುಮಾರ ಜೈಲಿಗೆ ಹೋಗಿ ಶಾಸಕರನ್ನು ಭೇಟಿ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಶಾಸಕರಿದ್ದಾರೆ. ಹಾಗಾಗಿ, ಹೋಗಿ ಭೇಟಿಯಾಗಿ ಬಂದಿದ್ದಾರೆ. ಹಿಂದೆಯೂ ಒಂದು ಸಾರಿ ಹೋಗಿ ಭೇಟಿಯಾಗಿದ್ದರು. ಇದರಲ್ಲಿ ‘ಅಂಡರ್ ಕರೆಂಟ್ ಶಾಕ್’ ಏನಿಲ್ಲ. ನಮ್ಮದೂ ಕರೆಂಟ್ ಏನಿಲ್ಲ. ಎಲ್ಲವೂ ಸರಿ ಇದೆ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...