Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...