Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...