Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...