Homeಫ್ಯಾಕ್ಟ್‌ಚೆಕ್ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ - ಲಸಿಕೆ...

ಲಸಿಕೆ ಪಡೆದ ಎಲ್ಲರೂ 2 ವರ್ಷಗಳಲ್ಲಿ ಸಾಯುತ್ತಾರೆ: ಈ ವ್ಯಾಟ್ಸಾಪ್ ವದಂತಿ ನಂಬಬೇಡಿ – ಲಸಿಕೆ ಹಾಕಿಸಿಕೊಳ್ಳಿ

- Advertisement -
- Advertisement -

ಯಾವುದೇ ಕೋವಿಡ್ ಲಸಿಕೆಗಳನ್ನು ಪಡೆದ ಜನರಿಗೆ ಬದುಕುಳಿಯುವ ಅವಕಾಶವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್ ಹೇಳಿದ್ದಾರೆ ಎಂಬ ವಾಟ್ಸಾಪ್ ಸಂದೇಶವೊದು ವೈರಲ್ ಆಗಿದೆ. ಆ ಸಂದೇಶದಲ್ಲಿ ಅವರು ಹೀಗೆ ಹೇಳಿದ್ದಾರೆ, ಹಾಗೆ ಹೇಳಿದ್ದಾರೆ ಎಂದು ವಿವಿಧ ಉಲ್ಲೇಖಗಳನ್ನು ಪ್ರಸ್ತಾಪಿಸಿದೆ. ಈ ಸುಳ್ಳು ಸಮರ್ಥನೆಯನ್ನು ಬೆಂಬಲಿಸಲು ಅವರ ಲೇಖನಕ್ಕೆ ಲೈಫ್‌ಸೈಟ್‌ನ್ಯೂಸ್‌.ಕಾಂ ಎಂಬ ಲಿಂಕ್ ಅನ್ನು ಹಂಚಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಮೊಂಟಾಗ್ನಿಯರ್ ಅವರ ವಿಕಿಪೀಡಿಯಾ ಪುಟಕ್ಕೆ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ.

ಬಹುದೊಡ್ಡ ಸುಳ್ಳು

ನೊಬೆಲ್ ಪ್ರಶಸ್ತಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, 2008 ರಲ್ಲಿ ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್ (ಎಚ್‌ಐವಿ) ಆವಿಷ್ಕಾರಕ್ಕೆ ನೀಡಿದ ಕೊಡುಗೆಗಾಗಿ ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ ಅವರಿಗೆ ಪ್ರಶಸ್ತಿ ನೀಡಲಾಯಿತು. ಅಂದಿನಿಂದ ಅವರು ಹುಸಿ ವೈಜ್ಞಾನಿಕ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕಾಗಿ ಸುದ್ದಿಯಲ್ಲಿದ್ದಾರೆ. ಕೊರೋನಾ ವೈರಸ್ ಮಾನವ ನಿರ್ಮಿತವಾಗಿದೆ ಮತ್ತು ಎಚ್‌ಐವಿಯಿಂದ ಆನುವಂಶಿಕ ವಸ್ತುಗಳನ್ನು ಒಳಗೊಂಡಿದೆ ಎಂದು ಮೊಂಟಾಗ್ನಿಯರ್ ತಪ್ಪಾಗಿ ಹೇಳಿಕೊಂಡಿದ್ದಾರೆ ಎಂದು ಫ್ರೆಂಚ್ ಮ್ಯಾಗಝೀನ್ ‘ಸೈನ್ಸ್ ಫೀಡ್‌ಬ್ಯಾಕ್’ ಕಳೆದ ವರ್ಷ ವರದಿ ಮಾಡಿದೆ.

ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮೊಂಟಾಗ್ನಿಯರ್, ಸಾಮೂಹಿಕ ಕೋವಿಡ್ ಲಸಿಕಾ ಕಾರ್ಯಕ್ರಮ ‘ಸ್ವೀಕಾರಾರ್ಹವಲ್ಲ, ಅದು ತಪ್ಪು’ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸುವ ‘ಲೈಫ್ ಸೈಟ್ ನ್ಯೂಸ್’ ಲೇಖನವನ್ನು ಅಲ್ಟ್ ನ್ಯೂಸ್ ಗಮನಿಸಿದೆ ಮತ್ತು ಅದರಲ್ಲಿ ಅಂತಹ ವಿವರಣೆ ಇಲ್ಲವೇ ಇಲ್ಲ ಎಂಬುದನ್ನು ಕಂಡುಕೊಂಡಿದೆ. ಲೈಫ್ ಸೈಟ್ ನ್ಯೂಸ್ ಲೇಖನವು ಯುಎಸ್ ಮೂಲದ ಎನ್‌ಜಿಒ ರೇರ್ ಫೌಂಡೇಶನ್ ಮೇ 18 ರಂದು ಪ್ರಕಟಿಸಿದ ಲೇಖನವನ್ನು ಆಧರಿಸಿದೆ. ಈ ಲೇಖನವು ಮೊಂಟಾಗ್ನಿಯರ್ ಅವರ ಸಂದರ್ಶನದ ಎರಡು ನಿಮಿಷಗಳ ಕ್ಲಿಪ್ ಅನ್ನು ಒಳಗೊಂಡಿದೆ. ಈ ಸಂದರ್ಶನದ ಸಂಪೂರ್ಣ 11 ನಿಮಿಷಗಳ ಆವೃತ್ತಿಯನ್ನು ಫ್ರೆಂಚ್ ವೆಬ್‌ಸೈಟ್ ಪ್ಲಾನೆಟ್ 360 ಗೆ ಅಪ್‌ಲೋಡ್ ಮಾಡಲಾಗಿದೆ. ಲಸಿಕೆಗಳ ಕಾರಣದಿಂದಾಗಿ ಹೊಸ ಕೋವಿಡ್ ರೂಪಾಂತರಗಳನ್ನು ರಚಿಸಲಾಗಿದೆ ಎಂದು ಮೊಂಟಾಗ್ನಿಯರ್ ನಂಬಿದ್ದಾರೆ. ಎರಡು ನಿಮಿಷಗಳ ಕ್ಲಿಪ್‌ನಲ್ಲಿ, “ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನೀವು ಹೇಗೆ ನೋಡುತ್ತೀರಿ?” ಎಂಬ ಪ್ರಶ್ನೆಗೆ ಉತ್ತರಿಸುತ್ತ ಮಾಂಟಾಗ್ನಿಯರ್ “ಇದು ಅಪಾರ ತಪ್ಪು, ಅಲ್ಲವೇ? ವೈಜ್ಞಾನಿಕ ದೋಷ ಮತ್ತು ವೈದ್ಯಕೀಯ ದೋಷ. ಇದು ಸ್ವೀಕಾರಾರ್ಹವಲ್ಲದ ತಪ್ಪು. ವ್ಯಾಕ್ಸಿನೇಷನ್‌ನಿಂದಾಗಿ ಇದು ರೂಪಾಂತರಗಳನ್ನು ರಚಿಸುತ್ತಿದೆ ಎಂದು ಇತಿಹಾಸ ಪುಸ್ತಕಗಳು ತೋರಿಸುತ್ತವೆ” ಎನ್ನುತ್ತಾರೆ. (ಬೋಲ್ಡ್ ಆಗಿರುವ ವಿಭಾಗವನ್ನು ವಾಟ್ಸಾಪ್ ಸಂದೇಶದಲ್ಲಿ ಸೇರಿಸಲಾಗಿದೆ.)

ಮಾಂಟಾಗ್ನಿಯರ್ ಲಸಿಕೆ ವಿರೋಧಿ ನಿಲುವಿಗೆ ಹೆಸರುವಾಸಿಯಾಗಿದ್ದಾರೆ ಎಂಬುದನ್ನು ಓದುಗರು ಗಮನಿಸಬೇಕು. ಆಲ್ಟ್ ನ್ಯೂಸ್ ಸೈನ್ಸ್‌ನ ಸಂಸ್ಥಾಪಕ ಸಂಪಾದಕರಾದ ಡಾ. ಸುಮಯ್ಯ ಶೇಖ್ ಅವರು, “ಇದು ಮೊಂಟಾಗ್ನಿಯರ್ ಹೇಳಿದ್ದಕ್ಕೆ ವಿರುದ್ಧವಾಗಿದೆ. ಲಸಿಕೆಗಳೊಂದಿಗೆ ವೈರಸ್ ಹರಡುವಿಕೆಯು ಕಡಿಮೆಯಾಗುತ್ತದೆ. ಹೀಗಾಗಿ, ಲಸಿಕೆ ಹಾಕುವ ಮೂಲಕ ಮತ್ತು ಸೋಂಕಿನ ಹರಡುವಿಕೆಯನ್ನು ತಡೆಯುವ ಮೂಲಕ, ವೈರಸ್ ಹರಡುವುದನ್ನು ನಿಲ್ಲಿಸಲಾಗುತ್ತದೆ ಮತ್ತು ಆ ಮೂಲಕ, ಹೊಸ ರೂಪಾಂತರಗಳು ಸಮುದಾಯದಲ್ಲಿ ಹರಡಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತವೆ. ಲಸಿಕೆಗಳು ದೊಡ್ಡ ಜನಸಂಖ್ಯೆಯಲ್ಲಿ ವ್ಯಾಪಕವಾದ ಪುನರಾವರ್ತನೆಯನ್ನು ತಡೆಯುತ್ತವೆ, ಇದು ಅಂತಿಮವಾಗಿ ಹೊಸ ರೂಪಾಂತರಗಳ ರಚನೆಯನ್ನು ಕಡಿಮೆ ಮಾಡುತ್ತದೆ” ಎಂದಿದ್ದಾರೆ.

ತಪ್ಪುದಾರಿಗೆಳೆಯುವ ವಾಟ್ಸಾಪ್ ಸಂದೇಶದ ಬಗ್ಗೆ ಅಸ್ಸಾಂ ಪೊಲೀಸರು ಫೇಸ್‌ಬುಕ್‌ನಲ್ಲಿ ಎಚ್ಚರಿಕೆಯನ್ನು ಪೋಸ್ಟ್ ಮಾಡಿದ್ದಾರೆ.

ಫ್ರೆಂಚ್ ವೈರಾಲಜಿಸ್ಟ್ ಲುಕ್ ಮೊಂಟಾಗ್ನಿಯರ್ “ಈಗಾಗಲೇ ಲಸಿಕೆ ಹಾಕಿದವರಿಗೆ ಯಾವುದೇ ಭರವಸೆ ಇಲ್ಲ ಮತ್ತು ಸಂಭವನೀಯ ಚಿಕಿತ್ಸೆ ಇಲ್ಲ. ದೇಹಗಳನ್ನು ಸುಡಲು ನಾವು ಸಿದ್ಧರಾಗಿರಬೇಕು. ಲಸಿಕೆ ಹಾಕಿದ ಜನರು ಎರಡು ವರ್ಷಗಳಲ್ಲಿ ಸಾಯುತ್ತಾರೆ” ಎಂದು ಅವರು ಹೇಳಿಕೊಂಡಿಲ್ಲ. ಆದಾಗ್ಯೂ, ಅವರು ಈ ಹಿಂದೆ ಲಸಿಕೆ ವಿರೋಧಿ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

2010 ರಲ್ಲಿ, ಜರ್ಮನಿಯಲ್ಲಿ ನಡೆದ ಲಿಂಡೌ ನೊಬೆಲ್ ಪ್ರಶಸ್ತಿ ವಿಜೇತ ಸಭೆಯಲ್ಲಿ ಮೊಂಟಾಗ್ನಿಯರ್ ಆಘಾತಕಾರಿ ಭಾಷಣ ಮಾಡಿದರು. ವೈರಸ್ ಸೋಂಕುಗಳನ್ನು ಪತ್ತೆಹಚ್ಚಲು ಅವರು ಹೊಸ ವಿಧಾನವನ್ನು ಪ್ರಸ್ತುತಪಡಿಸಿದರು, ಅದು ಹೋಮಿಯೋಪತಿಯ ಮೂಲ ಸಿದ್ಧಾಂತಗಳಿಗೆ ಹೋಲುತ್ತದೆ. ಇದನ್ನು ದಿ ಆಸ್ಟ್ರೇಲಿಯಾ ನ್ಯೂಸ್ ವರದಿ ಮಾಡಿದೆ.
ಆಲ್ಟ್ ನ್ಯೂಸ್ ಸೈನ್ಸ್ 2018 ರಲ್ಲಿ ‘ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ ರೂಪವೇ?’ ಎಂಬ ಲೇಖನವನ್ನು ಪ್ರಕಟಿಸಿತ್ತು, ಇದು ಆಧುನಿಕ ವೈಜ್ಞಾನಿಕ ವಿವರಣೆಯ ಪ್ರಕಾರ ಹೋಮಿಯೋಪತಿ ಔಷಧಿಗಳನ್ನು ಅವುಗಳ ಪ್ಲಾಸಿಬೊ ಪರಿಣಾಮಕ್ಕೆ ಮಾತ್ರ ಸಿಮೀತ ಎಂದು ತೀರ್ಮಾನಿಸಿದೆ.

ಒಟ್ಟಿನಲ್ಲಿ, ಲಸಿಕೆ ಕುರಿತು ಭಯ ಬೀಳಿಸುವ ವ್ಯಾಟ್ಸಾಪ್ ಸಂದೇಶ ನಂಬಬೇಡಿ, ಲಸಿಕೆ ಹಾಕಿಸಿಕೊಳ್ಳಿ, ಪ್ರತಿರೋಧಕ ಶಕ್ತಿ ಪಡೆದುಕೊಳ್ಳಿ…. ವ್ಯಾಕ್ಸಿನ್ ಕುರಿತಾದ ನಿಮ್ಮ ಪ್ರಶ್ನೆಗಳಿಗೆ ಬೆಂಗಳೂರಿನ ಬಿಎಂಸಿ 92 ಸಾಲಿನ ವೈದ್ಯರು ಉತ್ತರಿಸಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿ.


ಇದನ್ನೂ ಓದಿ; 2021 ರ ಅಂತ್ಯಕ್ಕೆ ಸಂಪೂರ್ಣ ಭಾರತಕ್ಕೆ ವ್ಯಾಕ್ಸಿನ್‌: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...